ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ಗಳನ್ನು ವಿತರಿಸಲು ವಿಕಲಚೇತನರಿಂದ ಅರ್ಜಿ ಆಹ್ವಾನ

 

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ಗಳನ್ನು ವಿತರಿಸಲು ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅರ್ಹ ವಿಕಲಚೇತನರು ಯೋಜನೆಯ ಸೌಲಭ್ಯ ಪಡೆಯಲು ತಮ್ಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ, ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯು.ಆರ್.ಡಬ್ಲ್ಯೂ, ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನಿಗದತ ನಮೂನೆಯನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಫೆಬ್ರವರಿ 05 ರೊಳಗೆ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿಕಲಚೇತನರು ಭಾರತದ ಪ್ರಜೆಯಾಗಿದ್ದು, ಕರ್ನಾಟಕದಲ್ಲಿ ಕನಿಷ್ಟ 10ವರ್ಷಗಳು ವಾಸವಾಗಿರಬೇಕು. ಈ ಯೋಜನೆ ಸೌಲಭ್ಯ ಪಡೆಯಲು ಕುಟುಂಬ ವಾರ್ಷಿಕ ಆದಾಯ ರೂ. 2 ಲಕ್ಷಗಳಿಗಿಂತ ಕಡಿಮೆ ಇರಬೇಕು. ವಿಕಲಚೇತನರ ಅಧಿನಿಯಮದಲ್ಲಿ ಸೂಚಿಸಿರುವ ಹಾಗೂ ವೈದ್ಯಕೀಯ ಪ್ರಾಧಿಕಾರದಿಂದ ನೀಡಿರುವ ಗುರುತಿನ ಚೀಟಿಯೊಂದಿಗೆ ದೃಢೀಕೃತ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು. ಇತರೆ ಇಲಾಖೆಗಳು ಅಥವಾ ಸಂಘ ಸಂಸ್ಥೆಗಳಿಂದ ಬ್ಯಾಟರಿ ಚಾಲಿತ ವೀಲ್ ಚೇರ್ ಪಡೆದಿದ್ದಲ್ಲಿ ಅಂತಹವರು ಅರ್ಹರಾಗಿರುವುದಿಲ್ಲ.

ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಶೇ.75 ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲಚೇತನರಾಗಿದ್ದು, ಯಂತ್ರಚಾಲಿತ ದ್ವಿಚಕ್ರ ಮೋಟಾರು ವಾಹನವನ್ನು ಚಾಲನೆ ಮಾಡಲು ಸಾಮಾರ್ಥ್ಯ ಹೊಂದಿರದ ಹಾಗೂ ಕನಿಷ್ಟ ಒಂದು ಕೈ ಒಂದು ಕಣ್ಣು ಸ್ವಾಧೀನದಲ್ಲಿದ್ದು ಹಾಗೂ ಬ್ಯಾಟರಿಚಾಲಿತ ವ್ಹೀಲ್ ಚೇರ್ ಚಲಾಯಿಸಲು ಇತರೇ ಎಲ್ಲಾ ರೀತಿಯಲ್ಲಿ ಸದೃಢವಾಗಿರುವ ವಿಕಲಚೇತನರಾಗಿರಬೇಕು.
ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಸರ್ಕಾರದಿಂದ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಪಡೆದಿರಬಾರದು.

ಬ್ಯಾಟರಿ ಚಾಲಿತ ವ್ಹೀಲ್ ಚೇರ್‌ನ್ನು ಅವರ ಜೀವತಾವದಿಯಲ್ಲಿ ಯಾವುದೇ ಕಾರಣಕ್ಕೂ ಪರಭಾರೆ ಮಾಡಬಾರದು ಮಾಡಿದ್ದು ಕಂಡು ಬಂದಲ್ಲಿ ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರ ದೂರವಾಣಿ ಸಂಖ್ಯೆ-080-29787441, 91 73377 09076ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

View Comments

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

3 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

14 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

22 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago