ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿನ ರಾಜ್ಯ ಹಣಕಾಸು ಆಯೋಗದ ಜಿಲ್ಲಾ ಪಂಚಾಯತಿಯ ಅನಿರ್ಬಂಧೀತ ಅನುದಾನದಲ್ಲಿ ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಗಳನ್ನು ವಿತರಿಸಲು ಸೇವಾ ಸಿಂಧು ಪೊರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅರ್ಹ ವಿಕಲಚೇತನರು ಯೋಜನೆಯ ಸೌಲಭ್ಯ ಪಡೆಯಲು ಆನ್ ಲೈನ್ ಮೂಲಕ ಸೇವಾ ಸಿಂಧು (https://seva sindhu.Karnataka. gov.in/) ಪೊರ್ಟಲ್ ನಲ್ಲಿ ಸೆಪ್ಟೆಂಬರ್ 06, 2025 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ವಿಕಲಚೇತನರು ಭಾರತದ ಪ್ರಜೆಯಾಗಿದ್ದು, ಕರ್ನಾಟಕದಲ್ಲಿ ಕನಿಷ್ಟ 10 ವರ್ಷಗಳು ವಾಸವಾಗಿರಬೇಕು. ಈ ಯೋಜನೆ ಸೌಲಭ್ಯ ಪಡೆಯಲು ಕುಟುಂಬ ವಾರ್ಷಿಕ ಆದಾಯ ರೂ 2.00 ಲಕ್ಷಗಳಿಗಿಂತ ಕಡಿಮೆ ಇರಬೇಕು. ವಿಕಲಚೇತನರ ಅಧಿನಿಯಮದಲ್ಲಿ ಸೂಚಿಸಿರುವ ಹಾಗೂ ವೈದ್ಯಕೀಯ ಪ್ರಾಧಿಕಾರದಿಂದ ನೀಡಿರುವ ಗುರುತಿನ ಚೀಟಿ (ಯುಡಿಐಡಿ ಕಾರ್ಡ್)ಯೊಂದಿಗೆ ದೃಢೀಕೃತ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು.
ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಶೇ.75% ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲಚೇತನರಾಗಿದ್ದು, ಯಂತ್ರಚಾಲಿತ ದ್ವಿಚಕ್ರ ಮೋಟಾರು ವಾಹನವನ್ನು ಚಾಲನೆ ಮಾಡಲು ಸಾಮಾರ್ಥ್ಯ ಹೊಂದಿರದ ಹಾಗೂ ಕನಿಷ್ಟ ಒಂದು ಕೈ, ಒಂದು ಕಣ್ಣು ಸ್ವಾಧೀನದಲ್ಲಿದ್ದು ಹಾಗೂ ಬ್ಯಾಟರಿಚಾಲಿತ ವ್ಹೀಲ್ ಚೇರ್ ಚಲಾಯಿಸಲು ಇತರೆ ಎಲ್ಲಾ ರೀತಿಯಲ್ಲಿ ಸದೃಢವಾಗಿರುವ ವಿಕಲಚೇತನರಾಗಿರಬೇಕು. ಆಸಕ್ತ ದೈಹಿಕ ವಿಕಲಚೇತನರು ಸರ್ಕಾರದಿಂದ ಯಾವುದೆ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಪಡೆದಿರಬಾರದು.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರ ದೂರವಾಣಿ ಸಂಖ್ಯೆ-080-29787441 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…