ಬ್ಯಾಟರಿ ಚಾಲಿತ ವ್ಹೀಲ್ ಚೇರ್ ವಿತರಿಸಲು ವಿಕಲಚೇತನರಿಂದ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿನ ರಾಜ್ಯ ಹಣಕಾಸು ಆಯೋಗದ ಜಿಲ್ಲಾ ಪಂಚಾಯತಿಯ ಅನಿರ್ಬಂಧೀತ ಅನುದಾನದಲ್ಲಿ ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಗಳನ್ನು ವಿತರಿಸಲು ಸೇವಾ ಸಿಂಧು ಪೊರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅರ್ಹ ವಿಕಲಚೇತನರು ಯೋಜನೆಯ ಸೌಲಭ್ಯ ಪಡೆಯಲು ಆನ್ ಲೈನ್ ಮೂಲಕ ಸೇವಾ ಸಿಂಧು (https://seva sindhu.Karnataka. gov.in/) ಪೊರ್ಟಲ್ ನಲ್ಲಿ ಸೆಪ್ಟೆಂಬರ್ 06, 2025 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿಕಲಚೇತನರು ಭಾರತದ ಪ್ರಜೆಯಾಗಿದ್ದು, ಕರ್ನಾಟಕದಲ್ಲಿ ಕನಿಷ್ಟ 10 ವರ್ಷಗಳು ವಾಸವಾಗಿರಬೇಕು. ಈ ಯೋಜನೆ ಸೌಲಭ್ಯ ಪಡೆಯಲು ಕುಟುಂಬ ವಾರ್ಷಿಕ ಆದಾಯ ರೂ 2.00 ಲಕ್ಷಗಳಿಗಿಂತ ಕಡಿಮೆ ಇರಬೇಕು. ವಿಕಲಚೇತನರ ಅಧಿನಿಯಮದಲ್ಲಿ ಸೂಚಿಸಿರುವ ಹಾಗೂ ವೈದ್ಯಕೀಯ ಪ್ರಾಧಿಕಾರದಿಂದ ನೀಡಿರುವ ಗುರುತಿನ ಚೀಟಿ (ಯುಡಿಐಡಿ ಕಾರ್ಡ್)ಯೊಂದಿಗೆ ದೃಢೀಕೃತ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು.

ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಶೇ.75% ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲಚೇತನರಾಗಿದ್ದು, ಯಂತ್ರಚಾಲಿತ ದ್ವಿಚಕ್ರ ಮೋಟಾರು ವಾಹನವನ್ನು ಚಾಲನೆ ಮಾಡಲು ಸಾಮಾರ್ಥ್ಯ ಹೊಂದಿರದ ಹಾಗೂ ಕನಿಷ್ಟ ಒಂದು ಕೈ, ಒಂದು ಕಣ್ಣು ಸ್ವಾಧೀನದಲ್ಲಿದ್ದು ಹಾಗೂ ಬ್ಯಾಟರಿಚಾಲಿತ ವ್ಹೀಲ್ ಚೇರ್ ಚಲಾಯಿಸಲು ಇತರೆ ಎಲ್ಲಾ ರೀತಿಯಲ್ಲಿ ಸದೃಢವಾಗಿರುವ ವಿಕಲಚೇತನರಾಗಿರಬೇಕು. ಆಸಕ್ತ ದೈಹಿಕ ವಿಕಲಚೇತನರು ಸರ್ಕಾರದಿಂದ ಯಾವುದೆ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಪಡೆದಿರಬಾರದು.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರ ದೂರವಾಣಿ ಸಂಖ್ಯೆ-080-29787441 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

3 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

9 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

23 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

24 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago