ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿನ ರಾಜ್ಯ ಹಣಕಾಸು ಆಯೋಗದ ಜಿಲ್ಲಾ ಪಂಚಾಯತಿಯ ಅನಿರ್ಬಂಧೀತ ಅನುದಾನದಲ್ಲಿ ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಗಳನ್ನು ವಿತರಿಸಲು ಸೇವಾ ಸಿಂಧು ಪೊರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅರ್ಹ ವಿಕಲಚೇತನರು ಯೋಜನೆಯ ಸೌಲಭ್ಯ ಪಡೆಯಲು ಆನ್ ಲೈನ್ ಮೂಲಕ ಸೇವಾ ಸಿಂಧು (https://seva sindhu.Karnataka. gov.in/) ಪೊರ್ಟಲ್ ನಲ್ಲಿ ಸೆಪ್ಟೆಂಬರ್ 06, 2025 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ವಿಕಲಚೇತನರು ಭಾರತದ ಪ್ರಜೆಯಾಗಿದ್ದು, ಕರ್ನಾಟಕದಲ್ಲಿ ಕನಿಷ್ಟ 10 ವರ್ಷಗಳು ವಾಸವಾಗಿರಬೇಕು. ಈ ಯೋಜನೆ ಸೌಲಭ್ಯ ಪಡೆಯಲು ಕುಟುಂಬ ವಾರ್ಷಿಕ ಆದಾಯ ರೂ 2.00 ಲಕ್ಷಗಳಿಗಿಂತ ಕಡಿಮೆ ಇರಬೇಕು. ವಿಕಲಚೇತನರ ಅಧಿನಿಯಮದಲ್ಲಿ ಸೂಚಿಸಿರುವ ಹಾಗೂ ವೈದ್ಯಕೀಯ ಪ್ರಾಧಿಕಾರದಿಂದ ನೀಡಿರುವ ಗುರುತಿನ ಚೀಟಿ (ಯುಡಿಐಡಿ ಕಾರ್ಡ್)ಯೊಂದಿಗೆ ದೃಢೀಕೃತ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು.
ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಶೇ.75% ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲಚೇತನರಾಗಿದ್ದು, ಯಂತ್ರಚಾಲಿತ ದ್ವಿಚಕ್ರ ಮೋಟಾರು ವಾಹನವನ್ನು ಚಾಲನೆ ಮಾಡಲು ಸಾಮಾರ್ಥ್ಯ ಹೊಂದಿರದ ಹಾಗೂ ಕನಿಷ್ಟ ಒಂದು ಕೈ, ಒಂದು ಕಣ್ಣು ಸ್ವಾಧೀನದಲ್ಲಿದ್ದು ಹಾಗೂ ಬ್ಯಾಟರಿಚಾಲಿತ ವ್ಹೀಲ್ ಚೇರ್ ಚಲಾಯಿಸಲು ಇತರೆ ಎಲ್ಲಾ ರೀತಿಯಲ್ಲಿ ಸದೃಢವಾಗಿರುವ ವಿಕಲಚೇತನರಾಗಿರಬೇಕು. ಆಸಕ್ತ ದೈಹಿಕ ವಿಕಲಚೇತನರು ಸರ್ಕಾರದಿಂದ ಯಾವುದೆ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಪಡೆದಿರಬಾರದು.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರ ದೂರವಾಣಿ ಸಂಖ್ಯೆ-080-29787441 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…