Categories: ವೈರಲ್

ಬ್ಯಾಟ್ ಹಿಡಿದು ಬೌಂಡರಿ, ಸಿಕ್ಸರ್ ಅಭ್ಯಾಸ, ಕ್ರಿಕೆಟಿಂಗ್ ಶಾಟ್ಸ್ ಅಭ್ಯಾಸದ ನೆಪದಲ್ಲಿ ಬೈಕ್ ಕಳ್ಳತನಕ್ಕೆ ಯತ್ನ: ಸಿಸಿಟಿವಿ‌ ನೋಡಿ‌ ಅಲ್ಲಿಂದ ಪರಾರಿಯಾದ ಕಳ್ಳ: ಅಸಲಿಗೆ ನೆಟ್ಟಿಗರು ಈ ವಿಡಿಯೋ‌ ನೋಡಿ ಏನಂದ್ರು..?

ಅಪರಾಧ ಕೃತ್ಯಗಳಲ್ಲಿ‌ ಭಾಗಿಯಾಗಲೂ ಹೊಸ ಹೊಸ ಮಾರ್ಗ, ತಂತ್ರಜ್ಞಾನ, ಐಡಿಯಾ, ಕಸರತ್ತು, ಆಕ್ಟಿಂಗ್ ಸೇರಿದಂತೆ ತರಹೇವಾರಿ ಬುದ್ದಿ ಉಪಯೋಗಿಸಲಾಗುತ್ತದೆ.

ಅದೇ ರೀತಿ ಇಲ್ಲೊಬ್ಬ ಆಸಾಮಿ ಬೈಕ್ ಕಳ್ಳತನಕ್ಕೆ ಯಾರೂ ಊಹಿಸಲು ಸಾಧ್ಯವಾಗದ ರೀತಿ ಆ್ಯಕ್ಚಿಂಗ್ ಜೊತೆಗೆ ಐಡಿಯಾ ಉಪಯೋಗಿಸಿದ್ದಾನೆ. ಆದರೆ, ಇನ್ನೇನು ಬೈಕ್ ಕಳ್ಳತನ ಮಾಡಬೇಕು ಅನ್ನುವಷ್ಟರಲ್ಲೆ ಸಿಸಿಟಿವಿಯಿಂದ ಎಲ್ಲಾ ಪ್ರಯತ್ನ ವಿಫಲಗೊಂಡಿದ್ದರಿಂದ ಬ್ಯಾಟ್ ನಿಂದ ಮುಖ‌ಮುಚ್ಚಿಕೊಂಡು ಅಲ್ಲಿಂದ ಪರಾರಿಯಾಗಿದ್ದಾನೆ. ಕಳ್ಳನ‌ ಈ ಎಲ್ಲಾ ವೈಯ್ಯಾರಗಳು ಸಿಸಿಟಿಯಲ್ಲಿ ರೇಕಾರ್ಡ್ ಆಗಿದ್ದು, ಸದ್ಯ ವಿಡಿಯೋ ಭಾರಿ ವೈರಲ್ ಆಗಿದೆ.

ಮೊದಮೊದಲು ಈ‌ ವಿಡಿಯೋ‌ ನೋಡಿದಾಗ ಆ ವ್ಯಕ್ತಿ ಬ್ಯಾಟ್ ಹಿಡಿದು ಬೌಂಡರಿ, ಸಿಕ್ಸರ್ ಅಭ್ಯಾಸ, ಕ್ರಿಕೆಟಿಂಗ್ ಶಾಟ್ಸ್ ಅಭ್ಯಾಸ ಮಾಡುತ್ತಿರುವುದು ನೋಡಿದರೆ ಮುಂದೊಂದು ದಿನ ಉತ್ತಮ ಕ್ರಿಕೆಟಿಗನಾಗುತ್ತಾನೆ ಅನ್ನೋ ಆಲೋಚನೆಗಳು ಎಲ್ಲರ ಮನಸ್ಸಿನಲ್ಲಿ ಮೂಡುವುದು ಸಹಜ.

ಈತನ ಕ್ರಿಕೆಟ್ ಆಸಕ್ತಿಯನ್ನು ಕೊಂಡಾಡಿದರೂ ಅಚ್ಚರಿ ಇಲ್ಲ. ಆದರೆ, ಇವೆಲ್ಲವೂ ಕೇವಲ ನಟನೆಯಾಗಿತ್ತು. ಅಸಲಿಗ ಈತ ಬೈಕ್ ಕಳ್ಳತನಕ್ಕೆ ಬಂದಿದ್ದಾನೆ. ಅದೇ ಕ್ರಿಕೆಟ್ ಆಟದಲ್ಲೇ ಹ್ಯಾಂಡಲ್ ಲಾಕ್ ಚೆಕ್ ಮಾಡಿದ್ದಾನೆ. ಇನ್ನೇನು ಬೈಕ್ ಕಳ್ಳತನ ಮಾಡಬೇಕು ಅನ್ನುವಷ್ಟರಲ್ಲಿ ಸಿಸಿಟಿವಿ ಕ್ಯಾಮೆರಾ ನೋಡಿ ಅರ್ಧಕ್ಕೆ ಕೈಬಿಟ್ಟ ಸಿಸಿಟಿವಿಗೆ ತನ್ನ ಮುಖ ಕಾಣಿಸಬಾರದು ಎಂದು ಬ್ಯಾಟ್ ನಿಂದ ಮುಖ‌ಮುಚ್ಚಿಕೊಂಡು ಅಲ್ಲಿಂದ ಪರಾರಿಯಾಗಿದ್ದಾನೆ.

ಈ ವಿಡಿಯೋಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವರು  ಕಮೆಂಟ್ ಸಹ ಮಾಡಿದ್ದಾರೆ. ಇದೇ ವೇಳೆ ಕೆಲವರು ಇದು ನಕಲಿ ಎಂದು ಪ್ರತಿಕ್ರಿಯಿಸಿದ್ದಾರೆ. ವೈರಲ್ ವಿಡಿಯೋಗಾಗಿ ಮಾಡಿದ ನಕಲಿ ನಾಟಕ ಎಂದಿದ್ದಾರೆ. ನಕಲಿ ಮಾಡುವಾಗಲು ಕೆಲ ತಪ್ಪುಗಳನ್ನು ಮಾಡಿದ್ದಾರೆ. ಈ ರೀತಿ ಕಪಟ ವಿಡಿಯೋಗಳಿಗೆ ಮಾರುಹೋಗಬೇಡಿ ಎಂದು ಎಚ್ಚರಿಸಿದ್ದಾರೆ. ಮತ್ತೆ ಕೆಲವರು ಕಳಪೆ ನಾಯಕತ್ವ ಎಂದು ಕಮೆಂಟ್ ಮಾಡಿದ್ದಾರೆ. ಬ್ಯಾಟಿಂಗ್ ಕಳ್ಳ ಎಂದು ಹೆಸರಿಟ್ಟಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

39 minutes ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

4 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

4 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

15 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

16 hours ago

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…

16 hours ago