Categories: ವೈರಲ್

ಬ್ಯಾಟ್ ಹಿಡಿದು ಬೌಂಡರಿ, ಸಿಕ್ಸರ್ ಅಭ್ಯಾಸ, ಕ್ರಿಕೆಟಿಂಗ್ ಶಾಟ್ಸ್ ಅಭ್ಯಾಸದ ನೆಪದಲ್ಲಿ ಬೈಕ್ ಕಳ್ಳತನಕ್ಕೆ ಯತ್ನ: ಸಿಸಿಟಿವಿ‌ ನೋಡಿ‌ ಅಲ್ಲಿಂದ ಪರಾರಿಯಾದ ಕಳ್ಳ: ಅಸಲಿಗೆ ನೆಟ್ಟಿಗರು ಈ ವಿಡಿಯೋ‌ ನೋಡಿ ಏನಂದ್ರು..?

ಅಪರಾಧ ಕೃತ್ಯಗಳಲ್ಲಿ‌ ಭಾಗಿಯಾಗಲೂ ಹೊಸ ಹೊಸ ಮಾರ್ಗ, ತಂತ್ರಜ್ಞಾನ, ಐಡಿಯಾ, ಕಸರತ್ತು, ಆಕ್ಟಿಂಗ್ ಸೇರಿದಂತೆ ತರಹೇವಾರಿ ಬುದ್ದಿ ಉಪಯೋಗಿಸಲಾಗುತ್ತದೆ.

ಅದೇ ರೀತಿ ಇಲ್ಲೊಬ್ಬ ಆಸಾಮಿ ಬೈಕ್ ಕಳ್ಳತನಕ್ಕೆ ಯಾರೂ ಊಹಿಸಲು ಸಾಧ್ಯವಾಗದ ರೀತಿ ಆ್ಯಕ್ಚಿಂಗ್ ಜೊತೆಗೆ ಐಡಿಯಾ ಉಪಯೋಗಿಸಿದ್ದಾನೆ. ಆದರೆ, ಇನ್ನೇನು ಬೈಕ್ ಕಳ್ಳತನ ಮಾಡಬೇಕು ಅನ್ನುವಷ್ಟರಲ್ಲೆ ಸಿಸಿಟಿವಿಯಿಂದ ಎಲ್ಲಾ ಪ್ರಯತ್ನ ವಿಫಲಗೊಂಡಿದ್ದರಿಂದ ಬ್ಯಾಟ್ ನಿಂದ ಮುಖ‌ಮುಚ್ಚಿಕೊಂಡು ಅಲ್ಲಿಂದ ಪರಾರಿಯಾಗಿದ್ದಾನೆ. ಕಳ್ಳನ‌ ಈ ಎಲ್ಲಾ ವೈಯ್ಯಾರಗಳು ಸಿಸಿಟಿಯಲ್ಲಿ ರೇಕಾರ್ಡ್ ಆಗಿದ್ದು, ಸದ್ಯ ವಿಡಿಯೋ ಭಾರಿ ವೈರಲ್ ಆಗಿದೆ.

ಮೊದಮೊದಲು ಈ‌ ವಿಡಿಯೋ‌ ನೋಡಿದಾಗ ಆ ವ್ಯಕ್ತಿ ಬ್ಯಾಟ್ ಹಿಡಿದು ಬೌಂಡರಿ, ಸಿಕ್ಸರ್ ಅಭ್ಯಾಸ, ಕ್ರಿಕೆಟಿಂಗ್ ಶಾಟ್ಸ್ ಅಭ್ಯಾಸ ಮಾಡುತ್ತಿರುವುದು ನೋಡಿದರೆ ಮುಂದೊಂದು ದಿನ ಉತ್ತಮ ಕ್ರಿಕೆಟಿಗನಾಗುತ್ತಾನೆ ಅನ್ನೋ ಆಲೋಚನೆಗಳು ಎಲ್ಲರ ಮನಸ್ಸಿನಲ್ಲಿ ಮೂಡುವುದು ಸಹಜ.

ಈತನ ಕ್ರಿಕೆಟ್ ಆಸಕ್ತಿಯನ್ನು ಕೊಂಡಾಡಿದರೂ ಅಚ್ಚರಿ ಇಲ್ಲ. ಆದರೆ, ಇವೆಲ್ಲವೂ ಕೇವಲ ನಟನೆಯಾಗಿತ್ತು. ಅಸಲಿಗ ಈತ ಬೈಕ್ ಕಳ್ಳತನಕ್ಕೆ ಬಂದಿದ್ದಾನೆ. ಅದೇ ಕ್ರಿಕೆಟ್ ಆಟದಲ್ಲೇ ಹ್ಯಾಂಡಲ್ ಲಾಕ್ ಚೆಕ್ ಮಾಡಿದ್ದಾನೆ. ಇನ್ನೇನು ಬೈಕ್ ಕಳ್ಳತನ ಮಾಡಬೇಕು ಅನ್ನುವಷ್ಟರಲ್ಲಿ ಸಿಸಿಟಿವಿ ಕ್ಯಾಮೆರಾ ನೋಡಿ ಅರ್ಧಕ್ಕೆ ಕೈಬಿಟ್ಟ ಸಿಸಿಟಿವಿಗೆ ತನ್ನ ಮುಖ ಕಾಣಿಸಬಾರದು ಎಂದು ಬ್ಯಾಟ್ ನಿಂದ ಮುಖ‌ಮುಚ್ಚಿಕೊಂಡು ಅಲ್ಲಿಂದ ಪರಾರಿಯಾಗಿದ್ದಾನೆ.

ಈ ವಿಡಿಯೋಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವರು  ಕಮೆಂಟ್ ಸಹ ಮಾಡಿದ್ದಾರೆ. ಇದೇ ವೇಳೆ ಕೆಲವರು ಇದು ನಕಲಿ ಎಂದು ಪ್ರತಿಕ್ರಿಯಿಸಿದ್ದಾರೆ. ವೈರಲ್ ವಿಡಿಯೋಗಾಗಿ ಮಾಡಿದ ನಕಲಿ ನಾಟಕ ಎಂದಿದ್ದಾರೆ. ನಕಲಿ ಮಾಡುವಾಗಲು ಕೆಲ ತಪ್ಪುಗಳನ್ನು ಮಾಡಿದ್ದಾರೆ. ಈ ರೀತಿ ಕಪಟ ವಿಡಿಯೋಗಳಿಗೆ ಮಾರುಹೋಗಬೇಡಿ ಎಂದು ಎಚ್ಚರಿಸಿದ್ದಾರೆ. ಮತ್ತೆ ಕೆಲವರು ಕಳಪೆ ನಾಯಕತ್ವ ಎಂದು ಕಮೆಂಟ್ ಮಾಡಿದ್ದಾರೆ. ಬ್ಯಾಟಿಂಗ್ ಕಳ್ಳ ಎಂದು ಹೆಸರಿಟ್ಟಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿ ಮಾರಾಟ ಮಾಡುತ್ತಿದ್ದ ದಂಪತಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ.!

ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…

4 hours ago

ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಯ ಹರಿಕಾರ- ಡಿ.ಪಿ.ಆಂಜನೇಯ

ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…

6 hours ago

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ಜಪ್ತಿ

ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…

6 hours ago

ವಿರೋಧ ಲೆಕ್ಕಿಸದೆ ಪ್ರೀತಿಸಿ ಮದುವೆಯಾದ ಯುವತಿ…ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ…

ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ…

7 hours ago

ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟಲಿಜೆನ್ಸ್ – Artificial intelligence)

ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ - Artificial intelligence ).........., ದೆಹಲಿಯಲ್ಲಿ ನಡೆದ ವಿಶ್ವಮಟ್ಟದ ಕೃತಕ ಬುದ್ಧಿಮತ್ತೆ ಸಮ್ಮೇಳನಾದ…

11 hours ago

ಬಾಣಸವಾಡಿ ರೈಲ್ವೆ ಅಂಡರ್‌ಪಾಸ್ ಬಳಿ ಮತ್ತೊಂದು ಅಂಡರ್ ಪಾಸ್‌ಗೆ ಸ್ಥಳ ಪರಿಶೀಲಿಸಿದ ಸಚಿವ ಕೆ.ಜೆ.ಜಾರ್ಜ್

ಬಾಣಸವಾಡಿ ರೈಲ್ವೇ ನಿಲ್ದಾಣದ ಬಳಿಯ ಅಂಡರ್ ಪಾಸ್‌ನಲ್ಲಿ ಹೆಚ್ಚಿರುವ ಸಂಚಾರ ದಟ್ಟಣೆಗೆ ಪರಿಹಾರವಾಗಿ ಸಮೀಪದಲ್ಲೇ ನಿರ್ಮಿಸಲು ಉದ್ದೇಶಿಸಿರುವ ಮತ್ತೊಂದು ಅಂಡರ್…

13 hours ago