Categories: ವೈರಲ್

ಬ್ಯಾಟ್ ಹಿಡಿದು ಬೌಂಡರಿ, ಸಿಕ್ಸರ್ ಅಭ್ಯಾಸ, ಕ್ರಿಕೆಟಿಂಗ್ ಶಾಟ್ಸ್ ಅಭ್ಯಾಸದ ನೆಪದಲ್ಲಿ ಬೈಕ್ ಕಳ್ಳತನಕ್ಕೆ ಯತ್ನ: ಸಿಸಿಟಿವಿ‌ ನೋಡಿ‌ ಅಲ್ಲಿಂದ ಪರಾರಿಯಾದ ಕಳ್ಳ: ಅಸಲಿಗೆ ನೆಟ್ಟಿಗರು ಈ ವಿಡಿಯೋ‌ ನೋಡಿ ಏನಂದ್ರು..?

ಅಪರಾಧ ಕೃತ್ಯಗಳಲ್ಲಿ‌ ಭಾಗಿಯಾಗಲೂ ಹೊಸ ಹೊಸ ಮಾರ್ಗ, ತಂತ್ರಜ್ಞಾನ, ಐಡಿಯಾ, ಕಸರತ್ತು, ಆಕ್ಟಿಂಗ್ ಸೇರಿದಂತೆ ತರಹೇವಾರಿ ಬುದ್ದಿ ಉಪಯೋಗಿಸಲಾಗುತ್ತದೆ.

ಅದೇ ರೀತಿ ಇಲ್ಲೊಬ್ಬ ಆಸಾಮಿ ಬೈಕ್ ಕಳ್ಳತನಕ್ಕೆ ಯಾರೂ ಊಹಿಸಲು ಸಾಧ್ಯವಾಗದ ರೀತಿ ಆ್ಯಕ್ಚಿಂಗ್ ಜೊತೆಗೆ ಐಡಿಯಾ ಉಪಯೋಗಿಸಿದ್ದಾನೆ. ಆದರೆ, ಇನ್ನೇನು ಬೈಕ್ ಕಳ್ಳತನ ಮಾಡಬೇಕು ಅನ್ನುವಷ್ಟರಲ್ಲೆ ಸಿಸಿಟಿವಿಯಿಂದ ಎಲ್ಲಾ ಪ್ರಯತ್ನ ವಿಫಲಗೊಂಡಿದ್ದರಿಂದ ಬ್ಯಾಟ್ ನಿಂದ ಮುಖ‌ಮುಚ್ಚಿಕೊಂಡು ಅಲ್ಲಿಂದ ಪರಾರಿಯಾಗಿದ್ದಾನೆ. ಕಳ್ಳನ‌ ಈ ಎಲ್ಲಾ ವೈಯ್ಯಾರಗಳು ಸಿಸಿಟಿಯಲ್ಲಿ ರೇಕಾರ್ಡ್ ಆಗಿದ್ದು, ಸದ್ಯ ವಿಡಿಯೋ ಭಾರಿ ವೈರಲ್ ಆಗಿದೆ.

ಮೊದಮೊದಲು ಈ‌ ವಿಡಿಯೋ‌ ನೋಡಿದಾಗ ಆ ವ್ಯಕ್ತಿ ಬ್ಯಾಟ್ ಹಿಡಿದು ಬೌಂಡರಿ, ಸಿಕ್ಸರ್ ಅಭ್ಯಾಸ, ಕ್ರಿಕೆಟಿಂಗ್ ಶಾಟ್ಸ್ ಅಭ್ಯಾಸ ಮಾಡುತ್ತಿರುವುದು ನೋಡಿದರೆ ಮುಂದೊಂದು ದಿನ ಉತ್ತಮ ಕ್ರಿಕೆಟಿಗನಾಗುತ್ತಾನೆ ಅನ್ನೋ ಆಲೋಚನೆಗಳು ಎಲ್ಲರ ಮನಸ್ಸಿನಲ್ಲಿ ಮೂಡುವುದು ಸಹಜ.

ಈತನ ಕ್ರಿಕೆಟ್ ಆಸಕ್ತಿಯನ್ನು ಕೊಂಡಾಡಿದರೂ ಅಚ್ಚರಿ ಇಲ್ಲ. ಆದರೆ, ಇವೆಲ್ಲವೂ ಕೇವಲ ನಟನೆಯಾಗಿತ್ತು. ಅಸಲಿಗ ಈತ ಬೈಕ್ ಕಳ್ಳತನಕ್ಕೆ ಬಂದಿದ್ದಾನೆ. ಅದೇ ಕ್ರಿಕೆಟ್ ಆಟದಲ್ಲೇ ಹ್ಯಾಂಡಲ್ ಲಾಕ್ ಚೆಕ್ ಮಾಡಿದ್ದಾನೆ. ಇನ್ನೇನು ಬೈಕ್ ಕಳ್ಳತನ ಮಾಡಬೇಕು ಅನ್ನುವಷ್ಟರಲ್ಲಿ ಸಿಸಿಟಿವಿ ಕ್ಯಾಮೆರಾ ನೋಡಿ ಅರ್ಧಕ್ಕೆ ಕೈಬಿಟ್ಟ ಸಿಸಿಟಿವಿಗೆ ತನ್ನ ಮುಖ ಕಾಣಿಸಬಾರದು ಎಂದು ಬ್ಯಾಟ್ ನಿಂದ ಮುಖ‌ಮುಚ್ಚಿಕೊಂಡು ಅಲ್ಲಿಂದ ಪರಾರಿಯಾಗಿದ್ದಾನೆ.

ಈ ವಿಡಿಯೋಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವರು  ಕಮೆಂಟ್ ಸಹ ಮಾಡಿದ್ದಾರೆ. ಇದೇ ವೇಳೆ ಕೆಲವರು ಇದು ನಕಲಿ ಎಂದು ಪ್ರತಿಕ್ರಿಯಿಸಿದ್ದಾರೆ. ವೈರಲ್ ವಿಡಿಯೋಗಾಗಿ ಮಾಡಿದ ನಕಲಿ ನಾಟಕ ಎಂದಿದ್ದಾರೆ. ನಕಲಿ ಮಾಡುವಾಗಲು ಕೆಲ ತಪ್ಪುಗಳನ್ನು ಮಾಡಿದ್ದಾರೆ. ಈ ರೀತಿ ಕಪಟ ವಿಡಿಯೋಗಳಿಗೆ ಮಾರುಹೋಗಬೇಡಿ ಎಂದು ಎಚ್ಚರಿಸಿದ್ದಾರೆ. ಮತ್ತೆ ಕೆಲವರು ಕಳಪೆ ನಾಯಕತ್ವ ಎಂದು ಕಮೆಂಟ್ ಮಾಡಿದ್ದಾರೆ. ಬ್ಯಾಟಿಂಗ್ ಕಳ್ಳ ಎಂದು ಹೆಸರಿಟ್ಟಿದ್ದಾರೆ.

Ramesh Babu

Journalist

Recent Posts

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

5 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

15 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

16 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

1 day ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

3 days ago