Categories: ವೈರಲ್

ಬ್ಯಾಟ್ ಹಿಡಿದು ಬೌಂಡರಿ, ಸಿಕ್ಸರ್ ಅಭ್ಯಾಸ, ಕ್ರಿಕೆಟಿಂಗ್ ಶಾಟ್ಸ್ ಅಭ್ಯಾಸದ ನೆಪದಲ್ಲಿ ಬೈಕ್ ಕಳ್ಳತನಕ್ಕೆ ಯತ್ನ: ಸಿಸಿಟಿವಿ‌ ನೋಡಿ‌ ಅಲ್ಲಿಂದ ಪರಾರಿಯಾದ ಕಳ್ಳ: ಅಸಲಿಗೆ ನೆಟ್ಟಿಗರು ಈ ವಿಡಿಯೋ‌ ನೋಡಿ ಏನಂದ್ರು..?

ಅಪರಾಧ ಕೃತ್ಯಗಳಲ್ಲಿ‌ ಭಾಗಿಯಾಗಲೂ ಹೊಸ ಹೊಸ ಮಾರ್ಗ, ತಂತ್ರಜ್ಞಾನ, ಐಡಿಯಾ, ಕಸರತ್ತು, ಆಕ್ಟಿಂಗ್ ಸೇರಿದಂತೆ ತರಹೇವಾರಿ ಬುದ್ದಿ ಉಪಯೋಗಿಸಲಾಗುತ್ತದೆ.

ಅದೇ ರೀತಿ ಇಲ್ಲೊಬ್ಬ ಆಸಾಮಿ ಬೈಕ್ ಕಳ್ಳತನಕ್ಕೆ ಯಾರೂ ಊಹಿಸಲು ಸಾಧ್ಯವಾಗದ ರೀತಿ ಆ್ಯಕ್ಚಿಂಗ್ ಜೊತೆಗೆ ಐಡಿಯಾ ಉಪಯೋಗಿಸಿದ್ದಾನೆ. ಆದರೆ, ಇನ್ನೇನು ಬೈಕ್ ಕಳ್ಳತನ ಮಾಡಬೇಕು ಅನ್ನುವಷ್ಟರಲ್ಲೆ ಸಿಸಿಟಿವಿಯಿಂದ ಎಲ್ಲಾ ಪ್ರಯತ್ನ ವಿಫಲಗೊಂಡಿದ್ದರಿಂದ ಬ್ಯಾಟ್ ನಿಂದ ಮುಖ‌ಮುಚ್ಚಿಕೊಂಡು ಅಲ್ಲಿಂದ ಪರಾರಿಯಾಗಿದ್ದಾನೆ. ಕಳ್ಳನ‌ ಈ ಎಲ್ಲಾ ವೈಯ್ಯಾರಗಳು ಸಿಸಿಟಿಯಲ್ಲಿ ರೇಕಾರ್ಡ್ ಆಗಿದ್ದು, ಸದ್ಯ ವಿಡಿಯೋ ಭಾರಿ ವೈರಲ್ ಆಗಿದೆ.

ಮೊದಮೊದಲು ಈ‌ ವಿಡಿಯೋ‌ ನೋಡಿದಾಗ ಆ ವ್ಯಕ್ತಿ ಬ್ಯಾಟ್ ಹಿಡಿದು ಬೌಂಡರಿ, ಸಿಕ್ಸರ್ ಅಭ್ಯಾಸ, ಕ್ರಿಕೆಟಿಂಗ್ ಶಾಟ್ಸ್ ಅಭ್ಯಾಸ ಮಾಡುತ್ತಿರುವುದು ನೋಡಿದರೆ ಮುಂದೊಂದು ದಿನ ಉತ್ತಮ ಕ್ರಿಕೆಟಿಗನಾಗುತ್ತಾನೆ ಅನ್ನೋ ಆಲೋಚನೆಗಳು ಎಲ್ಲರ ಮನಸ್ಸಿನಲ್ಲಿ ಮೂಡುವುದು ಸಹಜ.

ಈತನ ಕ್ರಿಕೆಟ್ ಆಸಕ್ತಿಯನ್ನು ಕೊಂಡಾಡಿದರೂ ಅಚ್ಚರಿ ಇಲ್ಲ. ಆದರೆ, ಇವೆಲ್ಲವೂ ಕೇವಲ ನಟನೆಯಾಗಿತ್ತು. ಅಸಲಿಗ ಈತ ಬೈಕ್ ಕಳ್ಳತನಕ್ಕೆ ಬಂದಿದ್ದಾನೆ. ಅದೇ ಕ್ರಿಕೆಟ್ ಆಟದಲ್ಲೇ ಹ್ಯಾಂಡಲ್ ಲಾಕ್ ಚೆಕ್ ಮಾಡಿದ್ದಾನೆ. ಇನ್ನೇನು ಬೈಕ್ ಕಳ್ಳತನ ಮಾಡಬೇಕು ಅನ್ನುವಷ್ಟರಲ್ಲಿ ಸಿಸಿಟಿವಿ ಕ್ಯಾಮೆರಾ ನೋಡಿ ಅರ್ಧಕ್ಕೆ ಕೈಬಿಟ್ಟ ಸಿಸಿಟಿವಿಗೆ ತನ್ನ ಮುಖ ಕಾಣಿಸಬಾರದು ಎಂದು ಬ್ಯಾಟ್ ನಿಂದ ಮುಖ‌ಮುಚ್ಚಿಕೊಂಡು ಅಲ್ಲಿಂದ ಪರಾರಿಯಾಗಿದ್ದಾನೆ.

ಈ ವಿಡಿಯೋಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವರು  ಕಮೆಂಟ್ ಸಹ ಮಾಡಿದ್ದಾರೆ. ಇದೇ ವೇಳೆ ಕೆಲವರು ಇದು ನಕಲಿ ಎಂದು ಪ್ರತಿಕ್ರಿಯಿಸಿದ್ದಾರೆ. ವೈರಲ್ ವಿಡಿಯೋಗಾಗಿ ಮಾಡಿದ ನಕಲಿ ನಾಟಕ ಎಂದಿದ್ದಾರೆ. ನಕಲಿ ಮಾಡುವಾಗಲು ಕೆಲ ತಪ್ಪುಗಳನ್ನು ಮಾಡಿದ್ದಾರೆ. ಈ ರೀತಿ ಕಪಟ ವಿಡಿಯೋಗಳಿಗೆ ಮಾರುಹೋಗಬೇಡಿ ಎಂದು ಎಚ್ಚರಿಸಿದ್ದಾರೆ. ಮತ್ತೆ ಕೆಲವರು ಕಳಪೆ ನಾಯಕತ್ವ ಎಂದು ಕಮೆಂಟ್ ಮಾಡಿದ್ದಾರೆ. ಬ್ಯಾಟಿಂಗ್ ಕಳ್ಳ ಎಂದು ಹೆಸರಿಟ್ಟಿದ್ದಾರೆ.

Ramesh Babu

Journalist

Recent Posts

ಶಿಷ್ಟಾಚಾರದ ಹೆಸರಲ್ಲಿ ವಾಗ್ಯುದ್ಧ: ಹಾಲಿ ಶಾಸಕ ಧೀರಜ್ ಮುನಿರಾಜು–ಮಾಜಿ ಶಾಸಕ ವೆಂಕಟರಮಣಯ್ಯ ನಡುವೆ ಬಹಿರಂಗ ಕಿತ್ತಾಟ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…

5 hours ago

ನಿಷೇಧದ ನಡುವೆಯೂ ಡಿಜೆ ಬಳಕೆ: ವಾಹನ ವಶ, ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…

18 hours ago

ಲಾಡ್ಜ್‌ನಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕೊಲೆ ಶಂಕಿತ ಪತಿ ಆನಂದ್ ನೇಣಿಗೆ ಶರಣು

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ…

20 hours ago

ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯ- ಕೆಪಿಸಿಸಿ ಸದಸ್ಯ ಎಸ್.ಆರ್. ಮುನಿರಾಜ್

ದೊಡ್ಡಬಳ್ಳಾಪುರ: ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು…

23 hours ago

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

2 days ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

2 days ago