ಬ್ಯೂಟಿ ಪಾರ್ಲರ್ ಆಂಟಿಯ ಸ್ಕೆಚ್: ಫೈನಾನ್ಶಿಯರ್ ನಿಂದ ಮುಹೂರ್ತ: ಜಿಮ್ ಟ್ರೈನರ್ ಮರ್ಡರ್: ಮೂವರು ಪರಿಚಿತರ ನಡುವಿನ ಕ್ರೈಂ ಕಹಾನಿ…!

ಬ್ಯೂಟಿ ಪಾರ್ಲರ್ ಆಂಟಿಯ ಮೇಲಿನ ವ್ಯಾಮೋಹಕ್ಕೆ ಬಿದ್ದು ಆಂಟಿಯನ್ನ ಪರಿಚಯ ಮಾಡಿಕೊಟ್ಟ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಅ.25ರ ರಾತ್ರಿ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ವರ್ತೂರು ಕೋಡಿ ಬಳಿ ನಡೆದಿದೆ.

ಕೆ.ಆರ್.ಪುರಂ ನಿವಾಸಿ ಚೇತನ್ ಹತ್ಯೆಗೊಳಗಾದ ವ್ಯಕ್ತಿ, ಗಂಡನನ್ನ ಬಿಟ್ಟು ಕೆ.ಆರ್.ಪುರಂ ಟಿಸಿಪಾಳ್ಯದಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಶೋಭಾ ಎಂಬಾಕೆಯ ಜೊತೆ ಚೇತನ್ ಒಡನಾಟ ಇಟ್ಟಿಕೊಂಡಿದ್ದ, ಚೇತನ್ ಹಾಗೂ ಶೋಭಾ ಕೆಲಕಾಲ ಪ್ರೀತಿಸುತ್ತಿದ್ದರು. ಚೇತನ್ ಒಂದು ದಿನ ತನ್ನ ಗೆಳೆಯನಾದ ಸತೀಶ್ ನನ್ನು ಶೋಭಾಳಿಗೆ ಪರಿಚಯ ಮಾಡಿಕೊಟ್ಟ. ಪರಿಚಯ ಮಾಡಿಕೊಟ್ಟ ತಪ್ಪಿಗೆ ಸತೀಶ್ ನಿಂದಲೇ ಚೇತನ್ ಕೊಲೆಯಾಗಿಟ್ಟ.

ಸ್ನೇಹಿತನನ್ನೇ ಸತೀಶ್ ಕೊಲೆ ಮಾಡಿದ್ದೇಕೆ?

ಶೋಭಾಳಿಗೆ ಸತೀಶ್ ಪರಿಚಯವಾದ ನಂತರ ಚೇತನ್ ಜೊತೆ ಒಡನಾಟ ಕಡಿಮೆ ಮಾಡಿದ್ದಾಳೆ. ಚೇತನ್ ನಿಂದಲೇ ಹಣ ತೆಗೆದುಕೊಂಡು ಸತೀಶ್ ಜೊತೆ ಶೋಭಾ ಸುತ್ತಾಡುತ್ತಿದ್ದಳು. ಇದನ್ನ ಗಮನಿಸಿದ ಚೇತನ್ ಶೋಭಾಗೆ ಕ್ಲಾಸ್ ತೆಗೆದುಕೊಂಡಿದ್ದ.ಈ ಕುರಿತು ಶೋಭಾ ಸತೀಶ್ ಗೆ ದೂರು ನೀಡಿದ್ದಳು. ಆಗ ಹೇಗಾದರೂ ಮಾಡಿ ಚೇತನನ್ನ ಮುಗಿಸಲೇಬೇಕು ಎಂದು ಸತೀಶ್ ಹಾಗೂ ಶೋಭಾ ಪ್ಲಾನ್ ಮಾಡಿ, ಬರ್ತಡೇ ನೆಪದಲ್ಲಿ ಚೇತನನ್ನ ಪಾರ್ಟಿಗೆ ಕರೆದು ಹೊಸಕೋಟೆ ಬಾರ್ ನಲ್ಲಿ ಕಂಠಪೂರ್ತಿ ಕುಡಿಸಿ ಎಣ್ಣೆಮತ್ತಲ್ಲಿ ಹೊಸಕೋಟೆಯಿಂದ ಮಧ್ಯರಾತ್ರಿ ವರ್ತೂರು ಕೋಡಿ ಬಳಿ ಚೇತನ್ ನನ್ನ ಕರೆತಂದು ತಲೆಗೆ ಮಚ್ಚು ಬೀಸಲಾಗಿದೆ.

ಕೊಲೆಯಾದ ನಂತರ ಮೃತದೇಹವನ್ನ ಬಿಸಾಡಿ ಕಾರಲ್ಲಿ ಸತೀಶ್, ಶೋಭಾ ಹಾಗೂ ಮತ್ತಿಬ್ಬರು ಎಸ್ಕೇಪ್ ಆಗಿದ್ದಾರೆ. ಮೃತ ಚೇತನ್ ಕುಟುಂಬಸ್ಥರು ಅಕ್ಟೋಬರ್ 24 ರಂದು ಕೆ.ಆರ್.ಪುರಂ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ರಿಜಿಸ್ಟರ್ ಮಾಡಿದ್ದಾರೆ.

ಮೃತ ಚೇತನ್ ನ ಕಾಲ್ ಡೀಟೆಲ್ಸ್ ಪರಿಶೀಲಿಸಿದಾಗ ರೆಕಾರ್ಡ್ಸ್ ನಲ್ಲಿ ಸತೀಶ್ ಹಾಗೂ ಶೋಭಾ ನಡುವಿನ ಫೋನ್ ಕಾಲ್ ವಿವರ ಪತ್ತೆಯಾಗಿದೆ. ಸತೀಶನನ್ನ ವಶಕ್ಕೆ ಪಡೆದು ವಿಚಾರಿಸಿದಾಗ ಆಂಟಿಯ ಪ್ರೇಮಪ್ರಸಂಗ ಬೆಳಕಿಗೆ ಬಂದಿದೆ.

ಗಂಡನ ಮನೆಯಲ್ಲೂ ಶೋಭಾ ಕಿರಿಕ್

ಕಳೆದ ಎರಡು ವರ್ಷಗಳ ಹಿಂದೆ ಅತ್ತಿಬೆಲೆ ವ್ಯಾಪ್ತಿಯ ಯಡುವನಹಳ್ಳಿಯಲ್ಲಿ ತನ್ನ ಗಂಡ ಹಾಗೂ ಅತ್ತೆಯನ್ನ ಕೊಲೆ ಮಾಡಲು ಇದೇ ಶೋಭಾ ಯತ್ನಿಸಿದ್ದಳು ಎಂಬ ಆರೋಪ ಕೂಡ ಶೋಭಾ ಮೇಲ‌ಎ ಇದೆ. ಗ್ಯಾಸ್ ಸಿಲಿಂಡರ್ ಆನ್ ಮಾಡಿ ಗಂಡ ಅತ್ತೆ ನಿದ್ದೆ ಮಾಡುವ ವೇಳೆ ಮನೆ ಬಾಗಿಲು ಲಾಕ್ ಮಾಡಿ ಹೊರಗೆ ಕೂತಿದ್ದಳಂತೆ. ಅಕ್ಕಪಕ್ಕದವರು ಗ್ಯಾಸ್ ಸ್ಮೆಲ್ ಬರ್ತಿದೆಯೆಂದು ಬಂದು ಮನೆ ಡೋರ್ ಒಪನ್ ಮಾಡಿದ್ದರು‌. ಕಡೆಗೆ ಪೊಲೀಸರ ವಿಚಾರಣೆ ವೇಳೆ ಶೋಭಾ ಕೊಲೆಗೆ ಯತ್ನಿಸಿರೋದು ಗೊತ್ತಾಗಿ ಈ ಹಿಂದೆ ಜೈಲು ಸೇರಿದ್ದಳಂತೆ. ಜೈಲು ಸೇರಿ ಹೊರಬಂದ ನಂತರ ಕೆ.ಆರ್.ಪುರಂ ಟಿಸಿಪಾಳ್ಯದಲ್ಲಿ ಬ್ಯೂಟಿಪಾರ್ಲರ್  ಮಾಡಿದ್ದಳು.

ಸದ್ಯ ಸರ್ಜಾಪುರ ಪೊಲೀಸರಿಂದ ಆರೋಪಿಗಳಾದ ಶೋಭ, ಸತೀಶ್ ಹಾಗೂ ಆತನ ಗೆಳೆಯ ಶಶಿ ಬಂಧನವಾಗಿದೆ.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

9 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

10 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

12 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

14 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

17 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

22 hours ago