ಬ್ಯೂಟಿ ಪಾರ್ಲರ್ ಆಂಟಿಯ ಸ್ಕೆಚ್: ಫೈನಾನ್ಶಿಯರ್ ನಿಂದ ಮುಹೂರ್ತ: ಜಿಮ್ ಟ್ರೈನರ್ ಮರ್ಡರ್: ಮೂವರು ಪರಿಚಿತರ ನಡುವಿನ ಕ್ರೈಂ ಕಹಾನಿ…!

ಬ್ಯೂಟಿ ಪಾರ್ಲರ್ ಆಂಟಿಯ ಮೇಲಿನ ವ್ಯಾಮೋಹಕ್ಕೆ ಬಿದ್ದು ಆಂಟಿಯನ್ನ ಪರಿಚಯ ಮಾಡಿಕೊಟ್ಟ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಅ.25ರ ರಾತ್ರಿ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ವರ್ತೂರು ಕೋಡಿ ಬಳಿ ನಡೆದಿದೆ.

ಕೆ.ಆರ್.ಪುರಂ ನಿವಾಸಿ ಚೇತನ್ ಹತ್ಯೆಗೊಳಗಾದ ವ್ಯಕ್ತಿ, ಗಂಡನನ್ನ ಬಿಟ್ಟು ಕೆ.ಆರ್.ಪುರಂ ಟಿಸಿಪಾಳ್ಯದಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಶೋಭಾ ಎಂಬಾಕೆಯ ಜೊತೆ ಚೇತನ್ ಒಡನಾಟ ಇಟ್ಟಿಕೊಂಡಿದ್ದ, ಚೇತನ್ ಹಾಗೂ ಶೋಭಾ ಕೆಲಕಾಲ ಪ್ರೀತಿಸುತ್ತಿದ್ದರು. ಚೇತನ್ ಒಂದು ದಿನ ತನ್ನ ಗೆಳೆಯನಾದ ಸತೀಶ್ ನನ್ನು ಶೋಭಾಳಿಗೆ ಪರಿಚಯ ಮಾಡಿಕೊಟ್ಟ. ಪರಿಚಯ ಮಾಡಿಕೊಟ್ಟ ತಪ್ಪಿಗೆ ಸತೀಶ್ ನಿಂದಲೇ ಚೇತನ್ ಕೊಲೆಯಾಗಿಟ್ಟ.

ಸ್ನೇಹಿತನನ್ನೇ ಸತೀಶ್ ಕೊಲೆ ಮಾಡಿದ್ದೇಕೆ?

ಶೋಭಾಳಿಗೆ ಸತೀಶ್ ಪರಿಚಯವಾದ ನಂತರ ಚೇತನ್ ಜೊತೆ ಒಡನಾಟ ಕಡಿಮೆ ಮಾಡಿದ್ದಾಳೆ. ಚೇತನ್ ನಿಂದಲೇ ಹಣ ತೆಗೆದುಕೊಂಡು ಸತೀಶ್ ಜೊತೆ ಶೋಭಾ ಸುತ್ತಾಡುತ್ತಿದ್ದಳು. ಇದನ್ನ ಗಮನಿಸಿದ ಚೇತನ್ ಶೋಭಾಗೆ ಕ್ಲಾಸ್ ತೆಗೆದುಕೊಂಡಿದ್ದ.ಈ ಕುರಿತು ಶೋಭಾ ಸತೀಶ್ ಗೆ ದೂರು ನೀಡಿದ್ದಳು. ಆಗ ಹೇಗಾದರೂ ಮಾಡಿ ಚೇತನನ್ನ ಮುಗಿಸಲೇಬೇಕು ಎಂದು ಸತೀಶ್ ಹಾಗೂ ಶೋಭಾ ಪ್ಲಾನ್ ಮಾಡಿ, ಬರ್ತಡೇ ನೆಪದಲ್ಲಿ ಚೇತನನ್ನ ಪಾರ್ಟಿಗೆ ಕರೆದು ಹೊಸಕೋಟೆ ಬಾರ್ ನಲ್ಲಿ ಕಂಠಪೂರ್ತಿ ಕುಡಿಸಿ ಎಣ್ಣೆಮತ್ತಲ್ಲಿ ಹೊಸಕೋಟೆಯಿಂದ ಮಧ್ಯರಾತ್ರಿ ವರ್ತೂರು ಕೋಡಿ ಬಳಿ ಚೇತನ್ ನನ್ನ ಕರೆತಂದು ತಲೆಗೆ ಮಚ್ಚು ಬೀಸಲಾಗಿದೆ.

ಕೊಲೆಯಾದ ನಂತರ ಮೃತದೇಹವನ್ನ ಬಿಸಾಡಿ ಕಾರಲ್ಲಿ ಸತೀಶ್, ಶೋಭಾ ಹಾಗೂ ಮತ್ತಿಬ್ಬರು ಎಸ್ಕೇಪ್ ಆಗಿದ್ದಾರೆ. ಮೃತ ಚೇತನ್ ಕುಟುಂಬಸ್ಥರು ಅಕ್ಟೋಬರ್ 24 ರಂದು ಕೆ.ಆರ್.ಪುರಂ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ರಿಜಿಸ್ಟರ್ ಮಾಡಿದ್ದಾರೆ.

ಮೃತ ಚೇತನ್ ನ ಕಾಲ್ ಡೀಟೆಲ್ಸ್ ಪರಿಶೀಲಿಸಿದಾಗ ರೆಕಾರ್ಡ್ಸ್ ನಲ್ಲಿ ಸತೀಶ್ ಹಾಗೂ ಶೋಭಾ ನಡುವಿನ ಫೋನ್ ಕಾಲ್ ವಿವರ ಪತ್ತೆಯಾಗಿದೆ. ಸತೀಶನನ್ನ ವಶಕ್ಕೆ ಪಡೆದು ವಿಚಾರಿಸಿದಾಗ ಆಂಟಿಯ ಪ್ರೇಮಪ್ರಸಂಗ ಬೆಳಕಿಗೆ ಬಂದಿದೆ.

ಗಂಡನ ಮನೆಯಲ್ಲೂ ಶೋಭಾ ಕಿರಿಕ್

ಕಳೆದ ಎರಡು ವರ್ಷಗಳ ಹಿಂದೆ ಅತ್ತಿಬೆಲೆ ವ್ಯಾಪ್ತಿಯ ಯಡುವನಹಳ್ಳಿಯಲ್ಲಿ ತನ್ನ ಗಂಡ ಹಾಗೂ ಅತ್ತೆಯನ್ನ ಕೊಲೆ ಮಾಡಲು ಇದೇ ಶೋಭಾ ಯತ್ನಿಸಿದ್ದಳು ಎಂಬ ಆರೋಪ ಕೂಡ ಶೋಭಾ ಮೇಲ‌ಎ ಇದೆ. ಗ್ಯಾಸ್ ಸಿಲಿಂಡರ್ ಆನ್ ಮಾಡಿ ಗಂಡ ಅತ್ತೆ ನಿದ್ದೆ ಮಾಡುವ ವೇಳೆ ಮನೆ ಬಾಗಿಲು ಲಾಕ್ ಮಾಡಿ ಹೊರಗೆ ಕೂತಿದ್ದಳಂತೆ. ಅಕ್ಕಪಕ್ಕದವರು ಗ್ಯಾಸ್ ಸ್ಮೆಲ್ ಬರ್ತಿದೆಯೆಂದು ಬಂದು ಮನೆ ಡೋರ್ ಒಪನ್ ಮಾಡಿದ್ದರು‌. ಕಡೆಗೆ ಪೊಲೀಸರ ವಿಚಾರಣೆ ವೇಳೆ ಶೋಭಾ ಕೊಲೆಗೆ ಯತ್ನಿಸಿರೋದು ಗೊತ್ತಾಗಿ ಈ ಹಿಂದೆ ಜೈಲು ಸೇರಿದ್ದಳಂತೆ. ಜೈಲು ಸೇರಿ ಹೊರಬಂದ ನಂತರ ಕೆ.ಆರ್.ಪುರಂ ಟಿಸಿಪಾಳ್ಯದಲ್ಲಿ ಬ್ಯೂಟಿಪಾರ್ಲರ್  ಮಾಡಿದ್ದಳು.

ಸದ್ಯ ಸರ್ಜಾಪುರ ಪೊಲೀಸರಿಂದ ಆರೋಪಿಗಳಾದ ಶೋಭ, ಸತೀಶ್ ಹಾಗೂ ಆತನ ಗೆಳೆಯ ಶಶಿ ಬಂಧನವಾಗಿದೆ.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

8 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

8 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

11 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago