ಬ್ರಿಟಿಷ್ ಕಾಲದ ಪೊಲೀಸ್ ಟೋಪಿಗಳನ್ನು ಬದಲಿಸುವ ಕೂಗು ಮುನ್ನೆಲೆಗೆ: ವೃತ್ತಾಕಾರದ ದೊಡ್ಡ ಟೋಪಿ ಬದಲು ಸ್ಮಾರ್ಟ್ ಪೀಕ್ ಕ್ಯಾಪ್ ನೀಡಲು ಚಿಂತನೆ

ಕರ್ನಾಟಕ ಪೊಲೀಸ್ ಇಲಾಖೆಯ ಮುಖ್ಯ ಪೇದೆ ಮತ್ತು ಪೇದೆಗಳು ಹಲವು ವರ್ಷಗಳಿಂದ ಬ್ರಿಟಿಷ್ ಕಾಲದ ವೃತ್ತಾಕಾರದ ದೊಡ್ಡ ಟೋಪಿ ಧರಿಸುತ್ತಿದ್ದಾರೆ. ಇದು ಆರೋಗ್ಯ ಮತ್ತು ಇತರೆ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಈ ಹಿನ್ನೆಲೆ ಹೊಸ ಪೀಕ್ ಟೋಪಿಗಳನ್ನು ನೀಡಲು ಪೊಲೀಸ್ ಇಲಾಖೆ ಚಿಂತಿಸುತ್ತಿದೆ. ಈ ಕುರಿತು ಇದೇ ಏಪ್ರಿಲ್​ 4ರಂದು ಉನ್ನತ‌ ಮಟ್ಟದ ಅಧಿಕಾರಿಗಳ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.

ಬ್ರಿಟಿಷ್ ಕಾಲದ ಟೋಪಿಗಳನ್ನು ಬದಲಿಸುವ ಕೂಗು ಬಹಳ ಹಿಂದಿನಿಂದಲೂ ಕೇಳಿಬರುತ್ತಿತ್ತು. ಇದು ಪೊಲೀಸರ ಬಹುವರ್ಷಗಳ ಬೇಡಿಕೆ ಕೂಡ ಆಗಿತ್ತು. ಇದೀಗ ಅದಕ್ಕೆ ಸಮಯ ಬಂದಿದ್ದು, ದೊಡ್ಡ ಟೋಪಿ ಬದಲಾಗಿ ಸ್ಮಾರ್ಟ್​​ ಪೀಕ್​ ಹ್ಯಾಟ್​ ಹೆಡ್​ ಕಾನ್​​ಸ್ಟೆಬಲ್​​ ಹಾಗೂ ಕಾನ್​​ ಸ್ಟೆಬಲ್​ಗಳ ತಲೆಯನ್ನು ಅಲಂಕರಿಸಲಿದೆ. ಇಂತಹದೊಂದು ಸಾಹಸಕ್ಕೆ ಪೊಲೀಸ್​ ಇಲಾಖೆ ದಿಟ್ಟ ಹೆಜ್ಜೆಯಿಟ್ಟಿದೆ.

ಆಂಧ್ರಪ್ರದೇಶ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಅಲ್ಲಿನ ಪೊಲೀಸ್‌ ಹೆಡ್ ಕಾನ್‌ಸ್ಟೆಬಲ್ ಹಾಗೂ ಕಾನ್ ಸ್ಟೆಬಲ್‌ಗಳಿಗೆ ಪೀಕ್‌ ಕ್ಯಾಪ್‌ಗಳನ್ನು ನೀಡಲಾಗಿದೆ.

ಇದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಪೀಕ್ ಟೋಪಿಗಳನ್ನು ಕೊಡುವ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಡಿಜಿ-ಐಜಿಪಿ ಡಾ.ಅಲೋಕ್ ಮೋಹನ್ ಆದೇಶಿಸಿದ್ದಾರೆ. ಹೀಗಾಗಿ ಪೀಕ್ ಟೋಪಿ ವಿತರಣೆ ಕುರಿತು ಚರ್ಚಿಸಲು ರಾಜ್ಯ ಸಶಸ್ತ್ರ ಮೀಸಲು ಪಡೆ (ಕೆಎಸ್ಸಾರ್ಪಿ) ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರ ಅಧ್ಯಕ್ಷತೆಯಲ್ಲಿ ಏ.4ಕ್ಕೆ ಕಿಟ್ ನಿರ್ದಿಷ್ಟತಾ ಸಮಿತಿ ಸಭೆಯನ್ನು ಕರೆಯಲಾಗಿದೆ ಎಂದು ತಿಳಿದುಬಂದಿದೆ.

Ramesh Babu

Journalist

Recent Posts

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

1 hour ago

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

12 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

12 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

17 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

19 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

23 hours ago