ಬ್ರಿಟಿಷ್ ಕಾಲದ ಪೊಲೀಸ್ ಟೋಪಿಗಳನ್ನು ಬದಲಿಸುವ ಕೂಗು ಮುನ್ನೆಲೆಗೆ: ವೃತ್ತಾಕಾರದ ದೊಡ್ಡ ಟೋಪಿ ಬದಲು ಸ್ಮಾರ್ಟ್ ಪೀಕ್ ಕ್ಯಾಪ್ ನೀಡಲು ಚಿಂತನೆ

ಕರ್ನಾಟಕ ಪೊಲೀಸ್ ಇಲಾಖೆಯ ಮುಖ್ಯ ಪೇದೆ ಮತ್ತು ಪೇದೆಗಳು ಹಲವು ವರ್ಷಗಳಿಂದ ಬ್ರಿಟಿಷ್ ಕಾಲದ ವೃತ್ತಾಕಾರದ ದೊಡ್ಡ ಟೋಪಿ ಧರಿಸುತ್ತಿದ್ದಾರೆ. ಇದು ಆರೋಗ್ಯ ಮತ್ತು ಇತರೆ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಈ ಹಿನ್ನೆಲೆ ಹೊಸ ಪೀಕ್ ಟೋಪಿಗಳನ್ನು ನೀಡಲು ಪೊಲೀಸ್ ಇಲಾಖೆ ಚಿಂತಿಸುತ್ತಿದೆ. ಈ ಕುರಿತು ಇದೇ ಏಪ್ರಿಲ್​ 4ರಂದು ಉನ್ನತ‌ ಮಟ್ಟದ ಅಧಿಕಾರಿಗಳ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.

ಬ್ರಿಟಿಷ್ ಕಾಲದ ಟೋಪಿಗಳನ್ನು ಬದಲಿಸುವ ಕೂಗು ಬಹಳ ಹಿಂದಿನಿಂದಲೂ ಕೇಳಿಬರುತ್ತಿತ್ತು. ಇದು ಪೊಲೀಸರ ಬಹುವರ್ಷಗಳ ಬೇಡಿಕೆ ಕೂಡ ಆಗಿತ್ತು. ಇದೀಗ ಅದಕ್ಕೆ ಸಮಯ ಬಂದಿದ್ದು, ದೊಡ್ಡ ಟೋಪಿ ಬದಲಾಗಿ ಸ್ಮಾರ್ಟ್​​ ಪೀಕ್​ ಹ್ಯಾಟ್​ ಹೆಡ್​ ಕಾನ್​​ಸ್ಟೆಬಲ್​​ ಹಾಗೂ ಕಾನ್​​ ಸ್ಟೆಬಲ್​ಗಳ ತಲೆಯನ್ನು ಅಲಂಕರಿಸಲಿದೆ. ಇಂತಹದೊಂದು ಸಾಹಸಕ್ಕೆ ಪೊಲೀಸ್​ ಇಲಾಖೆ ದಿಟ್ಟ ಹೆಜ್ಜೆಯಿಟ್ಟಿದೆ.

ಆಂಧ್ರಪ್ರದೇಶ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಅಲ್ಲಿನ ಪೊಲೀಸ್‌ ಹೆಡ್ ಕಾನ್‌ಸ್ಟೆಬಲ್ ಹಾಗೂ ಕಾನ್ ಸ್ಟೆಬಲ್‌ಗಳಿಗೆ ಪೀಕ್‌ ಕ್ಯಾಪ್‌ಗಳನ್ನು ನೀಡಲಾಗಿದೆ.

ಇದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಪೀಕ್ ಟೋಪಿಗಳನ್ನು ಕೊಡುವ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಡಿಜಿ-ಐಜಿಪಿ ಡಾ.ಅಲೋಕ್ ಮೋಹನ್ ಆದೇಶಿಸಿದ್ದಾರೆ. ಹೀಗಾಗಿ ಪೀಕ್ ಟೋಪಿ ವಿತರಣೆ ಕುರಿತು ಚರ್ಚಿಸಲು ರಾಜ್ಯ ಸಶಸ್ತ್ರ ಮೀಸಲು ಪಡೆ (ಕೆಎಸ್ಸಾರ್ಪಿ) ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರ ಅಧ್ಯಕ್ಷತೆಯಲ್ಲಿ ಏ.4ಕ್ಕೆ ಕಿಟ್ ನಿರ್ದಿಷ್ಟತಾ ಸಮಿತಿ ಸಭೆಯನ್ನು ಕರೆಯಲಾಗಿದೆ ಎಂದು ತಿಳಿದುಬಂದಿದೆ.

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

6 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

9 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

10 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

18 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 day ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 day ago