ದೊಡ್ಡಬಳ್ಳಾಪುರ: ಬೈಕ್ ಮತ್ತು ಕಾರು ಅಪಘಾತದಲ್ಲಿ ತೀವ್ರವಾಗಿ ಯುವಕ ಗಾಯಗೊಂಡಿದ್ದ, ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಯುವಕ ಸಾವನ್ನಪ್ಪಿದ್ದು, ಮೃತ ಯುವಕನ ಕುಟುಂಬದವರು ಅಂಗಾಂಗ ದಾನ ಮಾಡುವ ಮೂಲಕ ಬೇರೆಯವರ ಬದುಕಿಗೆ ಬೆಳಕಾಗಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕು ಕಂಚಿಗನಾಳ ಗ್ರಾಮದ ಅನಿಲ್ ಕುಮಾರ್ ಅಪಘಾತದಲ್ಲಿ ಮೃತ ಪಟ್ಟ ಯುವಕ, ನವೆಂಬರ್ 28 ರಂದು ರಾಜಘಟ್ಟದ ಪೆಟ್ರೋಲ್ ಬಂಕ್ ಬಳಿ ನಡೆದ ಕಾರು ಮತ್ತು ಬೈಕ್ ಅಪಘಾತದಲ್ಲಿ ಅನಿಲ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು, ಗಾಯಗೊಂಡಿದ್ದ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಪ್ರಜ್ಞೆ ಕಳೆದುಕೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಯುವಕನ ಬ್ರೈನ್ ಡೆತ್ ಆಗಿದೆ, ಚೇತರಿಸಿ ಕೊಳ್ಳುವ ಯಾವುದೇ ಸಾಧ್ಯತೆ ಇಲ್ಲದೆ ಇದ್ದಿದ್ದರಿಂದ ವೈದ್ಯರು ಯುವಕ ಸಾವನ್ನ ಘೋಷಿಸಿದ್ದಾರೆ.
ಮಗನ ಸಾವಿನ ನಡುವೆಯು ತಂದೆ ರಾಮಚಂದ್ರಪ್ಪ ಮತ್ತು ಕುಟುಂಬದವರು ಅಂಗಾಂಗ ದಾನ ಮಾಡುವ ತೀರ್ಮಾನ ಮಾಡಿದ್ದಾರೆ, ಮೃತ ಯುವಕನ ದೇಹದಿಂದ ಹೃದಯ, ಹೃದಯದ ನಾಳ, ಲಿವರ್, ಶ್ವಾಸಕೋಶ,ಮೂತ್ರಪಿಂಡಗಳನ್ನ ಅಗತ್ಯ ಇರುವ ರೋಗಿಗಳಿಗೆ ದಾನ ಮಾಡಲಾಗಿದೆ, ಈ ಮೂಲಕ ಬೇರೆಯವರ ಬದುಕಿನಲ್ಲಿ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಕಂಡಿದ್ದಾನೆ.
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…