ದೊಡ್ಡಬಳ್ಳಾಪುರ: ಬೈಕ್ ಮತ್ತು ಕಾರು ಅಪಘಾತದಲ್ಲಿ ತೀವ್ರವಾಗಿ ಯುವಕ ಗಾಯಗೊಂಡಿದ್ದ, ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಯುವಕ ಸಾವನ್ನಪ್ಪಿದ್ದು, ಮೃತ ಯುವಕನ ಕುಟುಂಬದವರು ಅಂಗಾಂಗ ದಾನ ಮಾಡುವ ಮೂಲಕ ಬೇರೆಯವರ ಬದುಕಿಗೆ ಬೆಳಕಾಗಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕು ಕಂಚಿಗನಾಳ ಗ್ರಾಮದ ಅನಿಲ್ ಕುಮಾರ್ ಅಪಘಾತದಲ್ಲಿ ಮೃತ ಪಟ್ಟ ಯುವಕ, ನವೆಂಬರ್ 28 ರಂದು ರಾಜಘಟ್ಟದ ಪೆಟ್ರೋಲ್ ಬಂಕ್ ಬಳಿ ನಡೆದ ಕಾರು ಮತ್ತು ಬೈಕ್ ಅಪಘಾತದಲ್ಲಿ ಅನಿಲ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು, ಗಾಯಗೊಂಡಿದ್ದ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಪ್ರಜ್ಞೆ ಕಳೆದುಕೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಯುವಕನ ಬ್ರೈನ್ ಡೆತ್ ಆಗಿದೆ, ಚೇತರಿಸಿ ಕೊಳ್ಳುವ ಯಾವುದೇ ಸಾಧ್ಯತೆ ಇಲ್ಲದೆ ಇದ್ದಿದ್ದರಿಂದ ವೈದ್ಯರು ಯುವಕ ಸಾವನ್ನ ಘೋಷಿಸಿದ್ದಾರೆ.
ಮಗನ ಸಾವಿನ ನಡುವೆಯು ತಂದೆ ರಾಮಚಂದ್ರಪ್ಪ ಮತ್ತು ಕುಟುಂಬದವರು ಅಂಗಾಂಗ ದಾನ ಮಾಡುವ ತೀರ್ಮಾನ ಮಾಡಿದ್ದಾರೆ, ಮೃತ ಯುವಕನ ದೇಹದಿಂದ ಹೃದಯ, ಹೃದಯದ ನಾಳ, ಲಿವರ್, ಶ್ವಾಸಕೋಶ,ಮೂತ್ರಪಿಂಡಗಳನ್ನ ಅಗತ್ಯ ಇರುವ ರೋಗಿಗಳಿಗೆ ದಾನ ಮಾಡಲಾಗಿದೆ, ಈ ಮೂಲಕ ಬೇರೆಯವರ ಬದುಕಿನಲ್ಲಿ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಕಂಡಿದ್ದಾನೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…