ಬ್ರೈನ್ ಡೆತ್ ಆದ ಯುವಕನ ಅಂಗಾಂಗ ದಾನ; ಸಾವಿನಲ್ಲೂ ಸಾರ್ಥಕತೆ ಮೆರೆದ ಮೃತ ಯುವಕನ ಕುಟುಂಬಸ್ಥರು

ದೊಡ್ಡಬಳ್ಳಾಪುರ: ಬೈಕ್ ಮತ್ತು ಕಾರು ಅಪಘಾತದಲ್ಲಿ ತೀವ್ರವಾಗಿ ಯುವಕ ಗಾಯಗೊಂಡಿದ್ದ, ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಯುವಕ ಸಾವನ್ನಪ್ಪಿದ್ದು, ಮೃತ ಯುವಕನ ಕುಟುಂಬದವರು ಅಂಗಾಂಗ ದಾನ ಮಾಡುವ ಮೂಲಕ ಬೇರೆಯವರ ಬದುಕಿಗೆ ಬೆಳಕಾಗಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕು ಕಂಚಿಗನಾಳ ಗ್ರಾಮದ ಅನಿಲ್ ಕುಮಾರ್ ಅಪಘಾತದಲ್ಲಿ ಮೃತ ಪಟ್ಟ ಯುವಕ, ನವೆಂಬರ್ 28 ರಂದು ರಾಜಘಟ್ಟದ ಪೆಟ್ರೋಲ್ ಬಂಕ್ ಬಳಿ ನಡೆದ ಕಾರು ಮತ್ತು ಬೈಕ್ ಅಪಘಾತದಲ್ಲಿ ಅನಿಲ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು, ಗಾಯಗೊಂಡಿದ್ದ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಪ್ರಜ್ಞೆ ಕಳೆದುಕೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಯುವಕನ ಬ್ರೈನ್ ಡೆತ್ ಆಗಿದೆ, ಚೇತರಿಸಿ ಕೊಳ್ಳುವ ಯಾವುದೇ ಸಾಧ್ಯತೆ ಇಲ್ಲದೆ ಇದ್ದಿದ್ದರಿಂದ ವೈದ್ಯರು ಯುವಕ ಸಾವನ್ನ ಘೋಷಿಸಿದ್ದಾರೆ.

ಮಗನ ಸಾವಿನ ನಡುವೆಯು ತಂದೆ ರಾಮಚಂದ್ರಪ್ಪ ಮತ್ತು ಕುಟುಂಬದವರು ಅಂಗಾಂಗ ದಾನ ಮಾಡುವ ತೀರ್ಮಾನ ಮಾಡಿದ್ದಾರೆ, ಮೃತ ಯುವಕನ ದೇಹದಿಂದ ಹೃದಯ, ಹೃದಯದ ನಾಳ, ಲಿವರ್, ಶ್ವಾಸಕೋಶ,ಮೂತ್ರಪಿಂಡಗಳನ್ನ ಅಗತ್ಯ ಇರುವ ರೋಗಿಗಳಿಗೆ ದಾನ ಮಾಡಲಾಗಿದೆ, ಈ ಮೂಲಕ ಬೇರೆಯವರ ಬದುಕಿನಲ್ಲಿ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಕಂಡಿದ್ದಾನೆ.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

6 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

6 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

10 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

11 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

17 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

18 hours ago