ದೊಡ್ಡಬಳ್ಳಾಪುರ: ಬೈಕ್ ಮತ್ತು ಕಾರು ಅಪಘಾತದಲ್ಲಿ ತೀವ್ರವಾಗಿ ಯುವಕ ಗಾಯಗೊಂಡಿದ್ದ, ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಯುವಕ ಸಾವನ್ನಪ್ಪಿದ್ದು, ಮೃತ ಯುವಕನ ಕುಟುಂಬದವರು ಅಂಗಾಂಗ ದಾನ ಮಾಡುವ ಮೂಲಕ ಬೇರೆಯವರ ಬದುಕಿಗೆ ಬೆಳಕಾಗಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕು ಕಂಚಿಗನಾಳ ಗ್ರಾಮದ ಅನಿಲ್ ಕುಮಾರ್ ಅಪಘಾತದಲ್ಲಿ ಮೃತ ಪಟ್ಟ ಯುವಕ, ನವೆಂಬರ್ 28 ರಂದು ರಾಜಘಟ್ಟದ ಪೆಟ್ರೋಲ್ ಬಂಕ್ ಬಳಿ ನಡೆದ ಕಾರು ಮತ್ತು ಬೈಕ್ ಅಪಘಾತದಲ್ಲಿ ಅನಿಲ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು, ಗಾಯಗೊಂಡಿದ್ದ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಪ್ರಜ್ಞೆ ಕಳೆದುಕೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಯುವಕನ ಬ್ರೈನ್ ಡೆತ್ ಆಗಿದೆ, ಚೇತರಿಸಿ ಕೊಳ್ಳುವ ಯಾವುದೇ ಸಾಧ್ಯತೆ ಇಲ್ಲದೆ ಇದ್ದಿದ್ದರಿಂದ ವೈದ್ಯರು ಯುವಕ ಸಾವನ್ನ ಘೋಷಿಸಿದ್ದಾರೆ.
ಮಗನ ಸಾವಿನ ನಡುವೆಯು ತಂದೆ ರಾಮಚಂದ್ರಪ್ಪ ಮತ್ತು ಕುಟುಂಬದವರು ಅಂಗಾಂಗ ದಾನ ಮಾಡುವ ತೀರ್ಮಾನ ಮಾಡಿದ್ದಾರೆ, ಮೃತ ಯುವಕನ ದೇಹದಿಂದ ಹೃದಯ, ಹೃದಯದ ನಾಳ, ಲಿವರ್, ಶ್ವಾಸಕೋಶ,ಮೂತ್ರಪಿಂಡಗಳನ್ನ ಅಗತ್ಯ ಇರುವ ರೋಗಿಗಳಿಗೆ ದಾನ ಮಾಡಲಾಗಿದೆ, ಈ ಮೂಲಕ ಬೇರೆಯವರ ಬದುಕಿನಲ್ಲಿ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಕಂಡಿದ್ದಾನೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…