ದೊಡ್ಡಬಳ್ಳಾಪುರ: ಬೈಕ್ ಮತ್ತು ಕಾರು ಅಪಘಾತದಲ್ಲಿ ತೀವ್ರವಾಗಿ ಯುವಕ ಗಾಯಗೊಂಡಿದ್ದ, ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಯುವಕ ಸಾವನ್ನಪ್ಪಿದ್ದು, ಮೃತ ಯುವಕನ ಕುಟುಂಬದವರು ಅಂಗಾಂಗ ದಾನ ಮಾಡುವ ಮೂಲಕ ಬೇರೆಯವರ ಬದುಕಿಗೆ ಬೆಳಕಾಗಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕು ಕಂಚಿಗನಾಳ ಗ್ರಾಮದ ಅನಿಲ್ ಕುಮಾರ್ ಅಪಘಾತದಲ್ಲಿ ಮೃತ ಪಟ್ಟ ಯುವಕ, ನವೆಂಬರ್ 28 ರಂದು ರಾಜಘಟ್ಟದ ಪೆಟ್ರೋಲ್ ಬಂಕ್ ಬಳಿ ನಡೆದ ಕಾರು ಮತ್ತು ಬೈಕ್ ಅಪಘಾತದಲ್ಲಿ ಅನಿಲ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು, ಗಾಯಗೊಂಡಿದ್ದ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಪ್ರಜ್ಞೆ ಕಳೆದುಕೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಯುವಕನ ಬ್ರೈನ್ ಡೆತ್ ಆಗಿದೆ, ಚೇತರಿಸಿ ಕೊಳ್ಳುವ ಯಾವುದೇ ಸಾಧ್ಯತೆ ಇಲ್ಲದೆ ಇದ್ದಿದ್ದರಿಂದ ವೈದ್ಯರು ಯುವಕ ಸಾವನ್ನ ಘೋಷಿಸಿದ್ದಾರೆ.
ಮಗನ ಸಾವಿನ ನಡುವೆಯು ತಂದೆ ರಾಮಚಂದ್ರಪ್ಪ ಮತ್ತು ಕುಟುಂಬದವರು ಅಂಗಾಂಗ ದಾನ ಮಾಡುವ ತೀರ್ಮಾನ ಮಾಡಿದ್ದಾರೆ, ಮೃತ ಯುವಕನ ದೇಹದಿಂದ ಹೃದಯ, ಹೃದಯದ ನಾಳ, ಲಿವರ್, ಶ್ವಾಸಕೋಶ,ಮೂತ್ರಪಿಂಡಗಳನ್ನ ಅಗತ್ಯ ಇರುವ ರೋಗಿಗಳಿಗೆ ದಾನ ಮಾಡಲಾಗಿದೆ, ಈ ಮೂಲಕ ಬೇರೆಯವರ ಬದುಕಿನಲ್ಲಿ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಕಂಡಿದ್ದಾನೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…