ರಾಜ್ಯದಲ್ಲಿ ಮದುವೆಗೆ ಹೆಣ್ಣು ಸಿಗದೆ ಯುವಕರು ಪಾದಯಾತ್ರೆ, ಹರಕೆಗಳ ಮೊರೆ ಹೋಗುತ್ತಿರುವುದು ಹೊಸತೇನಲ್ಲ. ಆದರೆ, ಇದೇ ಹತಾಶೆಯನ್ನು ಬಂಡವಾಳ ಮಾಡಿಕೊಂಡ ಖತರ್ನಾಕ್ ಗ್ಯಾಂಗ್ವೊಂದು ಯುವಕನಿಗೆ ಲಕ್ಷಾಂತರ ರೂಪಾಯಿ ಮೋಸ ಮಾಡಿ ಮದುವೆ ಮಾಡಿಸಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ನಡೆದಿದೆ.
ತುಮ್ಮಿನಕಟ್ಟಿ ಗ್ರಾಮದ ರವೀಂದ್ರ ಜವಳಿ ಎಂಬ ಯುವಕ ಮದುವೆಗಾಗಿ ಹೆಣ್ಣು ಹುಡುಕುತ್ತಿದ್ದರು. ಇದನ್ನು ತಿಳಿದ ಬ್ರೋಕರ್, ರೇಖಾ ಎಂಬಾಕೆಯನ್ನು ಪರಿಚಯಿಸಿದ್ದಾರೆ. ರೇಖಾ ನೋಡಲು ಲಕ್ಷಣವಾಗಿದ್ದಾಳೆಂದು ನಂಬಿದ ರವೀಂದ್ರ ಮತ್ತು ಅವರ ಕುಟುಂಬಸ್ಥರು ಮದುವೆಗೆ ಒಪ್ಪಿಗೆ ನೀಡಿದ್ದಾರೆ.
ಈ ಐನಾತಿ ಲೇಡಿ ಮತ್ತು ಆಕೆಯ ಗ್ಯಾಂಗ್ ಮದುವೆಗೆ ಮುನ್ನವೇ ವಧುದಕ್ಷಣೆಯ ಹೆಸರಿನಲ್ಲಿ ರವೀಂದ್ರ ಅವರಿಂದ ಬರೋಬ್ಬರಿ 2.5 ಲಕ್ಷ ರೂಪಾಯಿ ಹಣವನ್ನು ಪೀಕಿದ್ದಾರೆ. ಅಷ್ಟೇ ಅಲ್ಲದೆ, ವಯಸ್ಸಿನ ವ್ಯತ್ಯಾಸ ತಿಳಿಯಬಾರದೆಂದು ಆಧಾರ್ ಕಾರ್ಡ್ನಲ್ಲಿ ಜನ್ಮ ದಿನಾಂಕವನ್ನೇ ಎಡಿಟ್ ಮಾಡಿ ವಂಚಿಸಿದ್ದರು. ಇಬ್ಬರು ಮಕ್ಕಳ ತಾಯಿಯಾಗಿದ್ದ ರೇಖಾ, ತಾನು ಕನ್ಯೆ ಎಂದು ನಂಬಿಸಿ ರವೀಂದ್ರ ಅವರೊಂದಿಗೆ ವೈವಾಹವಾಗಿದ್ದಾರೆ.
ಮದುವೆಯಾಗಿ ಕೇವಲ ಐದು ದಿನಗಳು ಕಳೆದಿರಲಿಲ್ಲ, ಅಷ್ಟರಲ್ಲೇ ಈ ಯುವತಿಯ ಅಸಲಿ ಮುಖವಾಡ ಕಳಚಿ ಬಿದ್ದಿದೆ. ಮನೆಗೆ ಬಂದಿದ್ದ ರೇಖಾಳಿಗೆ ಆಕೆಯ ಮಕ್ಕಳು ಫೋನ್ ಮಾಡಿದ್ದರು. ಮಕ್ಕಳೊಂದಿಗೆ ಮಾತನಾಡುತ್ತಿದ್ದಾಗ ಬಂದ ಅನುಮಾನದಿಂದ ರವೀಂದ್ರ ರೇಖಾಳನ್ನು ವಿಚಾರಿಸಿದ್ದಾರೆ. ಬಳಿಕ ತನಗೆ ಈಗಾಗಲೇ ಎರಡು-ಮೂರು ಮದುವೆಯಾಗಿರುವುದು ಮತ್ತು ಇಬ್ಬರು ಮಕ್ಕಳಿರುವ ಸತ್ಯವನ್ನು ಆಕೆ ಒಪ್ಪಿಕೊಂಡಿದ್ದಾಳೆ.
ತನ್ನ ಕಳ್ಳಾಟ ಬಯಲಾಗುತ್ತಿದ್ದಂತೆ ರೇಖಾ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾಳೆ. ಗ್ರಾಮದಿಂದ ಸುಮಾರು 2 ಕಿಲೋಮೀಟರ್ ದೂರದವರೆಗೂ ಓಡಿ ಹೋಗಿದ್ದಾಳೆ. ಆದರೆ ಬಿಡದ ರವೀಂದ್ರ ಮತ್ತು ಗ್ರಾಮಸ್ಥರು ಆಕೆಯನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಸದ್ಯ ಹತಾಶನಾಗಿರುವ ರವೀಂದ್ರ, ಅತ್ತ ಮದುವೆಯೂ ಇಲ್ಲದೆ, ಇತ್ತ ಹಣವೂ ಇಲ್ಲದೆ ಕಂಗಾಲಾಗಿದ್ದು, ನ್ಯಾಯಕ್ಕಾಗಿ ಹಲಗೇರಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.
ದೊಡ್ಡಬಳ್ಳಾಪುರ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಪ್ರತಿ ವರ್ಷವೂ ಕೇವಲ ಹೆಣ್ಣು ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರೀಪುರ ಗ್ರಾಮ ಪಂಚಾಯಿತಿ…
ಶಾಲಾ ಬಸ್ ಹರಿದು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಗರದ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್ ಬಳಿ ನಡೆದಿದೆ. ವರ್ಷಾ(2)…
ನಟಿ ತಮನ್ನಾ ಭಾಟಿಯಾ KSDL ಉತ್ಪನ್ನಗಳ ರಾಯಭಾರಿ ವಿಚಾರ: ಸಂಸದ ಡಾ.ಕೆ.ಸುಧಾಕರ್ ಕಿಡಿ: ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಕನ್ನಡದ ಸಿನಿತಾರೆಗಳು…
ಮೆಟ್ರೋ ಬೆಲೆ ಏರಿಕೆ.... " ನಾನು ಮೂರ್ಖ ಅಲ್ಲ " ಎರಡೂ ರಾಜಕೀಯ ಪಕ್ಷಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು,…
ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ…