ರಾಜ್ಯದಲ್ಲಿ ಮದುವೆಗೆ ಹೆಣ್ಣು ಸಿಗದೆ ಯುವಕರು ಪಾದಯಾತ್ರೆ, ಹರಕೆಗಳ ಮೊರೆ ಹೋಗುತ್ತಿರುವುದು ಹೊಸತೇನಲ್ಲ. ಆದರೆ, ಇದೇ ಹತಾಶೆಯನ್ನು ಬಂಡವಾಳ ಮಾಡಿಕೊಂಡ ಖತರ್ನಾಕ್ ಗ್ಯಾಂಗ್ವೊಂದು ಯುವಕನಿಗೆ ಲಕ್ಷಾಂತರ ರೂಪಾಯಿ ಮೋಸ ಮಾಡಿ ಮದುವೆ ಮಾಡಿಸಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ನಡೆದಿದೆ.
ತುಮ್ಮಿನಕಟ್ಟಿ ಗ್ರಾಮದ ರವೀಂದ್ರ ಜವಳಿ ಎಂಬ ಯುವಕ ಮದುವೆಗಾಗಿ ಹೆಣ್ಣು ಹುಡುಕುತ್ತಿದ್ದರು. ಇದನ್ನು ತಿಳಿದ ಬ್ರೋಕರ್, ರೇಖಾ ಎಂಬಾಕೆಯನ್ನು ಪರಿಚಯಿಸಿದ್ದಾರೆ. ರೇಖಾ ನೋಡಲು ಲಕ್ಷಣವಾಗಿದ್ದಾಳೆಂದು ನಂಬಿದ ರವೀಂದ್ರ ಮತ್ತು ಅವರ ಕುಟುಂಬಸ್ಥರು ಮದುವೆಗೆ ಒಪ್ಪಿಗೆ ನೀಡಿದ್ದಾರೆ.
ಈ ಐನಾತಿ ಲೇಡಿ ಮತ್ತು ಆಕೆಯ ಗ್ಯಾಂಗ್ ಮದುವೆಗೆ ಮುನ್ನವೇ ವಧುದಕ್ಷಣೆಯ ಹೆಸರಿನಲ್ಲಿ ರವೀಂದ್ರ ಅವರಿಂದ ಬರೋಬ್ಬರಿ 2.5 ಲಕ್ಷ ರೂಪಾಯಿ ಹಣವನ್ನು ಪೀಕಿದ್ದಾರೆ. ಅಷ್ಟೇ ಅಲ್ಲದೆ, ವಯಸ್ಸಿನ ವ್ಯತ್ಯಾಸ ತಿಳಿಯಬಾರದೆಂದು ಆಧಾರ್ ಕಾರ್ಡ್ನಲ್ಲಿ ಜನ್ಮ ದಿನಾಂಕವನ್ನೇ ಎಡಿಟ್ ಮಾಡಿ ವಂಚಿಸಿದ್ದರು. ಇಬ್ಬರು ಮಕ್ಕಳ ತಾಯಿಯಾಗಿದ್ದ ರೇಖಾ, ತಾನು ಕನ್ಯೆ ಎಂದು ನಂಬಿಸಿ ರವೀಂದ್ರ ಅವರೊಂದಿಗೆ ವೈವಾಹವಾಗಿದ್ದಾರೆ.
ಮದುವೆಯಾಗಿ ಕೇವಲ ಐದು ದಿನಗಳು ಕಳೆದಿರಲಿಲ್ಲ, ಅಷ್ಟರಲ್ಲೇ ಈ ಯುವತಿಯ ಅಸಲಿ ಮುಖವಾಡ ಕಳಚಿ ಬಿದ್ದಿದೆ. ಮನೆಗೆ ಬಂದಿದ್ದ ರೇಖಾಳಿಗೆ ಆಕೆಯ ಮಕ್ಕಳು ಫೋನ್ ಮಾಡಿದ್ದರು. ಮಕ್ಕಳೊಂದಿಗೆ ಮಾತನಾಡುತ್ತಿದ್ದಾಗ ಬಂದ ಅನುಮಾನದಿಂದ ರವೀಂದ್ರ ರೇಖಾಳನ್ನು ವಿಚಾರಿಸಿದ್ದಾರೆ. ಬಳಿಕ ತನಗೆ ಈಗಾಗಲೇ ಎರಡು-ಮೂರು ಮದುವೆಯಾಗಿರುವುದು ಮತ್ತು ಇಬ್ಬರು ಮಕ್ಕಳಿರುವ ಸತ್ಯವನ್ನು ಆಕೆ ಒಪ್ಪಿಕೊಂಡಿದ್ದಾಳೆ.
ತನ್ನ ಕಳ್ಳಾಟ ಬಯಲಾಗುತ್ತಿದ್ದಂತೆ ರೇಖಾ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾಳೆ. ಗ್ರಾಮದಿಂದ ಸುಮಾರು 2 ಕಿಲೋಮೀಟರ್ ದೂರದವರೆಗೂ ಓಡಿ ಹೋಗಿದ್ದಾಳೆ. ಆದರೆ ಬಿಡದ ರವೀಂದ್ರ ಮತ್ತು ಗ್ರಾಮಸ್ಥರು ಆಕೆಯನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಸದ್ಯ ಹತಾಶನಾಗಿರುವ ರವೀಂದ್ರ, ಅತ್ತ ಮದುವೆಯೂ ಇಲ್ಲದೆ, ಇತ್ತ ಹಣವೂ ಇಲ್ಲದೆ ಕಂಗಾಲಾಗಿದ್ದು, ನ್ಯಾಯಕ್ಕಾಗಿ ಹಲಗೇರಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…