ರಾಜ್ಯದಲ್ಲಿ ಮದುವೆಗೆ ಹೆಣ್ಣು ಸಿಗದೆ ಯುವಕರು ಪಾದಯಾತ್ರೆ, ಹರಕೆಗಳ ಮೊರೆ ಹೋಗುತ್ತಿರುವುದು ಹೊಸತೇನಲ್ಲ. ಆದರೆ, ಇದೇ ಹತಾಶೆಯನ್ನು ಬಂಡವಾಳ ಮಾಡಿಕೊಂಡ ಖತರ್ನಾಕ್ ಗ್ಯಾಂಗ್ವೊಂದು ಯುವಕನಿಗೆ ಲಕ್ಷಾಂತರ ರೂಪಾಯಿ ಮೋಸ ಮಾಡಿ ಮದುವೆ ಮಾಡಿಸಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ನಡೆದಿದೆ.
ತುಮ್ಮಿನಕಟ್ಟಿ ಗ್ರಾಮದ ರವೀಂದ್ರ ಜವಳಿ ಎಂಬ ಯುವಕ ಮದುವೆಗಾಗಿ ಹೆಣ್ಣು ಹುಡುಕುತ್ತಿದ್ದರು. ಇದನ್ನು ತಿಳಿದ ಬ್ರೋಕರ್, ರೇಖಾ ಎಂಬಾಕೆಯನ್ನು ಪರಿಚಯಿಸಿದ್ದಾರೆ. ರೇಖಾ ನೋಡಲು ಲಕ್ಷಣವಾಗಿದ್ದಾಳೆಂದು ನಂಬಿದ ರವೀಂದ್ರ ಮತ್ತು ಅವರ ಕುಟುಂಬಸ್ಥರು ಮದುವೆಗೆ ಒಪ್ಪಿಗೆ ನೀಡಿದ್ದಾರೆ.
ಈ ಐನಾತಿ ಲೇಡಿ ಮತ್ತು ಆಕೆಯ ಗ್ಯಾಂಗ್ ಮದುವೆಗೆ ಮುನ್ನವೇ ವಧುದಕ್ಷಣೆಯ ಹೆಸರಿನಲ್ಲಿ ರವೀಂದ್ರ ಅವರಿಂದ ಬರೋಬ್ಬರಿ 2.5 ಲಕ್ಷ ರೂಪಾಯಿ ಹಣವನ್ನು ಪೀಕಿದ್ದಾರೆ. ಅಷ್ಟೇ ಅಲ್ಲದೆ, ವಯಸ್ಸಿನ ವ್ಯತ್ಯಾಸ ತಿಳಿಯಬಾರದೆಂದು ಆಧಾರ್ ಕಾರ್ಡ್ನಲ್ಲಿ ಜನ್ಮ ದಿನಾಂಕವನ್ನೇ ಎಡಿಟ್ ಮಾಡಿ ವಂಚಿಸಿದ್ದರು. ಇಬ್ಬರು ಮಕ್ಕಳ ತಾಯಿಯಾಗಿದ್ದ ರೇಖಾ, ತಾನು ಕನ್ಯೆ ಎಂದು ನಂಬಿಸಿ ರವೀಂದ್ರ ಅವರೊಂದಿಗೆ ವೈವಾಹವಾಗಿದ್ದಾರೆ.
ಮದುವೆಯಾಗಿ ಕೇವಲ ಐದು ದಿನಗಳು ಕಳೆದಿರಲಿಲ್ಲ, ಅಷ್ಟರಲ್ಲೇ ಈ ಯುವತಿಯ ಅಸಲಿ ಮುಖವಾಡ ಕಳಚಿ ಬಿದ್ದಿದೆ. ಮನೆಗೆ ಬಂದಿದ್ದ ರೇಖಾಳಿಗೆ ಆಕೆಯ ಮಕ್ಕಳು ಫೋನ್ ಮಾಡಿದ್ದರು. ಮಕ್ಕಳೊಂದಿಗೆ ಮಾತನಾಡುತ್ತಿದ್ದಾಗ ಬಂದ ಅನುಮಾನದಿಂದ ರವೀಂದ್ರ ರೇಖಾಳನ್ನು ವಿಚಾರಿಸಿದ್ದಾರೆ. ಬಳಿಕ ತನಗೆ ಈಗಾಗಲೇ ಎರಡು-ಮೂರು ಮದುವೆಯಾಗಿರುವುದು ಮತ್ತು ಇಬ್ಬರು ಮಕ್ಕಳಿರುವ ಸತ್ಯವನ್ನು ಆಕೆ ಒಪ್ಪಿಕೊಂಡಿದ್ದಾಳೆ.
ತನ್ನ ಕಳ್ಳಾಟ ಬಯಲಾಗುತ್ತಿದ್ದಂತೆ ರೇಖಾ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾಳೆ. ಗ್ರಾಮದಿಂದ ಸುಮಾರು 2 ಕಿಲೋಮೀಟರ್ ದೂರದವರೆಗೂ ಓಡಿ ಹೋಗಿದ್ದಾಳೆ. ಆದರೆ ಬಿಡದ ರವೀಂದ್ರ ಮತ್ತು ಗ್ರಾಮಸ್ಥರು ಆಕೆಯನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಸದ್ಯ ಹತಾಶನಾಗಿರುವ ರವೀಂದ್ರ, ಅತ್ತ ಮದುವೆಯೂ ಇಲ್ಲದೆ, ಇತ್ತ ಹಣವೂ ಇಲ್ಲದೆ ಕಂಗಾಲಾಗಿದ್ದು, ನ್ಯಾಯಕ್ಕಾಗಿ ಹಲಗೇರಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…