Categories: ಹಾವೇರಿ

ಬ್ರೋಕರ್‌ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ…!:ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಯುವಕ

ರಾಜ್ಯದಲ್ಲಿ ಮದುವೆಗೆ ಹೆಣ್ಣು ಸಿಗದೆ ಯುವಕರು ಪಾದಯಾತ್ರೆ, ಹರಕೆಗಳ ಮೊರೆ ಹೋಗುತ್ತಿರುವುದು ಹೊಸತೇನಲ್ಲ. ಆದರೆ, ಇದೇ ಹತಾಶೆಯನ್ನು ಬಂಡವಾಳ ಮಾಡಿಕೊಂಡ ಖತರ್ನಾಕ್ ಗ್ಯಾಂಗ್‌ವೊಂದು ಯುವಕನಿಗೆ ಲಕ್ಷಾಂತರ ರೂಪಾಯಿ ಮೋಸ ಮಾಡಿ ಮದುವೆ ಮಾಡಿಸಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ನಡೆದಿದೆ.

ತುಮ್ಮಿನಕಟ್ಟಿ ಗ್ರಾಮದ ರವೀಂದ್ರ ಜವಳಿ ಎಂಬ ಯುವಕ ಮದುವೆಗಾಗಿ ಹೆಣ್ಣು ಹುಡುಕುತ್ತಿದ್ದರು. ಇದನ್ನು ತಿಳಿದ ಬ್ರೋಕರ್, ರೇಖಾ ಎಂಬಾಕೆಯನ್ನು ಪರಿಚಯಿಸಿದ್ದಾರೆ. ರೇಖಾ ನೋಡಲು ಲಕ್ಷಣವಾಗಿದ್ದಾಳೆಂದು ನಂಬಿದ ರವೀಂದ್ರ ಮತ್ತು ಅವರ ಕುಟುಂಬಸ್ಥರು ಮದುವೆಗೆ ಒಪ್ಪಿಗೆ ನೀಡಿದ್ದಾರೆ.

ಈ ಐನಾತಿ ಲೇಡಿ ಮತ್ತು ಆಕೆಯ ಗ್ಯಾಂಗ್ ಮದುವೆಗೆ ಮುನ್ನವೇ ವಧುದಕ್ಷಣೆಯ ಹೆಸರಿನಲ್ಲಿ ರವೀಂದ್ರ ಅವರಿಂದ ಬರೋಬ್ಬರಿ 2.5 ಲಕ್ಷ ರೂಪಾಯಿ ಹಣವನ್ನು ಪೀಕಿದ್ದಾರೆ. ಅಷ್ಟೇ ಅಲ್ಲದೆ, ವಯಸ್ಸಿನ ವ್ಯತ್ಯಾಸ ತಿಳಿಯಬಾರದೆಂದು ಆಧಾರ್ ಕಾರ್ಡ್‌ನಲ್ಲಿ ಜನ್ಮ ದಿನಾಂಕವನ್ನೇ ಎಡಿಟ್ ಮಾಡಿ ವಂಚಿಸಿದ್ದರು. ಇಬ್ಬರು ಮಕ್ಕಳ ತಾಯಿಯಾಗಿದ್ದ ರೇಖಾ, ತಾನು ಕನ್ಯೆ ಎಂದು ನಂಬಿಸಿ ರವೀಂದ್ರ ಅವರೊಂದಿಗೆ ವೈವಾಹವಾಗಿದ್ದಾರೆ.

ಮದುವೆಯಾಗಿ ಕೇವಲ ಐದು ದಿನಗಳು ಕಳೆದಿರಲಿಲ್ಲ, ಅಷ್ಟರಲ್ಲೇ ಈ ಯುವತಿಯ ಅಸಲಿ ಮುಖವಾಡ ಕಳಚಿ ಬಿದ್ದಿದೆ. ಮನೆಗೆ ಬಂದಿದ್ದ ರೇಖಾಳಿಗೆ ಆಕೆಯ ಮಕ್ಕಳು ಫೋನ್ ಮಾಡಿದ್ದರು. ಮಕ್ಕಳೊಂದಿಗೆ ಮಾತನಾಡುತ್ತಿದ್ದಾಗ ಬಂದ ಅನುಮಾನದಿಂದ ರವೀಂದ್ರ ರೇಖಾಳನ್ನು ವಿಚಾರಿಸಿದ್ದಾರೆ. ಬಳಿಕ ತನಗೆ ಈಗಾಗಲೇ ಎರಡು-ಮೂರು ಮದುವೆಯಾಗಿರುವುದು ಮತ್ತು ಇಬ್ಬರು ಮಕ್ಕಳಿರುವ ಸತ್ಯವನ್ನು ಆಕೆ ಒಪ್ಪಿಕೊಂಡಿದ್ದಾಳೆ.

ತನ್ನ ಕಳ್ಳಾಟ ಬಯಲಾಗುತ್ತಿದ್ದಂತೆ ರೇಖಾ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾಳೆ. ಗ್ರಾಮದಿಂದ ಸುಮಾರು 2 ಕಿಲೋಮೀಟರ್ ದೂರದವರೆಗೂ ಓಡಿ ಹೋಗಿದ್ದಾಳೆ. ಆದರೆ ಬಿಡದ ರವೀಂದ್ರ ಮತ್ತು ಗ್ರಾಮಸ್ಥರು ಆಕೆಯನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಸದ್ಯ ಹತಾಶನಾಗಿರುವ ರವೀಂದ್ರ, ಅತ್ತ ಮದುವೆಯೂ ಇಲ್ಲದೆ, ಇತ್ತ ಹಣವೂ ಇಲ್ಲದೆ ಕಂಗಾಲಾಗಿದ್ದು, ನ್ಯಾಯಕ್ಕಾಗಿ ಹಲಗೇರಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

Ramesh Babu

Journalist

Recent Posts

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

45 minutes ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

5 days ago