ರಾಜ್ಯದಲ್ಲಿ ಮದುವೆಗೆ ಹೆಣ್ಣು ಸಿಗದೆ ಯುವಕರು ಪಾದಯಾತ್ರೆ, ಹರಕೆಗಳ ಮೊರೆ ಹೋಗುತ್ತಿರುವುದು ಹೊಸತೇನಲ್ಲ. ಆದರೆ, ಇದೇ ಹತಾಶೆಯನ್ನು ಬಂಡವಾಳ ಮಾಡಿಕೊಂಡ ಖತರ್ನಾಕ್ ಗ್ಯಾಂಗ್ವೊಂದು ಯುವಕನಿಗೆ ಲಕ್ಷಾಂತರ ರೂಪಾಯಿ ಮೋಸ ಮಾಡಿ ಮದುವೆ ಮಾಡಿಸಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ನಡೆದಿದೆ.
ತುಮ್ಮಿನಕಟ್ಟಿ ಗ್ರಾಮದ ರವೀಂದ್ರ ಜವಳಿ ಎಂಬ ಯುವಕ ಮದುವೆಗಾಗಿ ಹೆಣ್ಣು ಹುಡುಕುತ್ತಿದ್ದರು. ಇದನ್ನು ತಿಳಿದ ಬ್ರೋಕರ್, ರೇಖಾ ಎಂಬಾಕೆಯನ್ನು ಪರಿಚಯಿಸಿದ್ದಾರೆ. ರೇಖಾ ನೋಡಲು ಲಕ್ಷಣವಾಗಿದ್ದಾಳೆಂದು ನಂಬಿದ ರವೀಂದ್ರ ಮತ್ತು ಅವರ ಕುಟುಂಬಸ್ಥರು ಮದುವೆಗೆ ಒಪ್ಪಿಗೆ ನೀಡಿದ್ದಾರೆ.
ಈ ಐನಾತಿ ಲೇಡಿ ಮತ್ತು ಆಕೆಯ ಗ್ಯಾಂಗ್ ಮದುವೆಗೆ ಮುನ್ನವೇ ವಧುದಕ್ಷಣೆಯ ಹೆಸರಿನಲ್ಲಿ ರವೀಂದ್ರ ಅವರಿಂದ ಬರೋಬ್ಬರಿ 2.5 ಲಕ್ಷ ರೂಪಾಯಿ ಹಣವನ್ನು ಪೀಕಿದ್ದಾರೆ. ಅಷ್ಟೇ ಅಲ್ಲದೆ, ವಯಸ್ಸಿನ ವ್ಯತ್ಯಾಸ ತಿಳಿಯಬಾರದೆಂದು ಆಧಾರ್ ಕಾರ್ಡ್ನಲ್ಲಿ ಜನ್ಮ ದಿನಾಂಕವನ್ನೇ ಎಡಿಟ್ ಮಾಡಿ ವಂಚಿಸಿದ್ದರು. ಇಬ್ಬರು ಮಕ್ಕಳ ತಾಯಿಯಾಗಿದ್ದ ರೇಖಾ, ತಾನು ಕನ್ಯೆ ಎಂದು ನಂಬಿಸಿ ರವೀಂದ್ರ ಅವರೊಂದಿಗೆ ವೈವಾಹವಾಗಿದ್ದಾರೆ.
ಮದುವೆಯಾಗಿ ಕೇವಲ ಐದು ದಿನಗಳು ಕಳೆದಿರಲಿಲ್ಲ, ಅಷ್ಟರಲ್ಲೇ ಈ ಯುವತಿಯ ಅಸಲಿ ಮುಖವಾಡ ಕಳಚಿ ಬಿದ್ದಿದೆ. ಮನೆಗೆ ಬಂದಿದ್ದ ರೇಖಾಳಿಗೆ ಆಕೆಯ ಮಕ್ಕಳು ಫೋನ್ ಮಾಡಿದ್ದರು. ಮಕ್ಕಳೊಂದಿಗೆ ಮಾತನಾಡುತ್ತಿದ್ದಾಗ ಬಂದ ಅನುಮಾನದಿಂದ ರವೀಂದ್ರ ರೇಖಾಳನ್ನು ವಿಚಾರಿಸಿದ್ದಾರೆ. ಬಳಿಕ ತನಗೆ ಈಗಾಗಲೇ ಎರಡು-ಮೂರು ಮದುವೆಯಾಗಿರುವುದು ಮತ್ತು ಇಬ್ಬರು ಮಕ್ಕಳಿರುವ ಸತ್ಯವನ್ನು ಆಕೆ ಒಪ್ಪಿಕೊಂಡಿದ್ದಾಳೆ.
ತನ್ನ ಕಳ್ಳಾಟ ಬಯಲಾಗುತ್ತಿದ್ದಂತೆ ರೇಖಾ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾಳೆ. ಗ್ರಾಮದಿಂದ ಸುಮಾರು 2 ಕಿಲೋಮೀಟರ್ ದೂರದವರೆಗೂ ಓಡಿ ಹೋಗಿದ್ದಾಳೆ. ಆದರೆ ಬಿಡದ ರವೀಂದ್ರ ಮತ್ತು ಗ್ರಾಮಸ್ಥರು ಆಕೆಯನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಸದ್ಯ ಹತಾಶನಾಗಿರುವ ರವೀಂದ್ರ, ಅತ್ತ ಮದುವೆಯೂ ಇಲ್ಲದೆ, ಇತ್ತ ಹಣವೂ ಇಲ್ಲದೆ ಕಂಗಾಲಾಗಿದ್ದು, ನ್ಯಾಯಕ್ಕಾಗಿ ಹಲಗೇರಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…