Categories: ಲೇಖನ

ಬ್ಲೇಡ್ ಕಂಪನಿಗಳ ಅಟ್ಟಹಾಸ…….ಸುಮಾರು 20 ಕೋಟಿಗೂ ಹೆಚ್ಚು ಹಣ ವಂಚನೆ: ಒಂದು ಸಾವಿರಕ್ಕೂ ಹೆಚ್ಚು ಬ್ಲೇಡ್ ಕಂಪನಿಗಳ ವಿರುದ್ಧ ಪ್ರಕರಣ ದಾಖಲು

ಕೇವಲ ನಾಲ್ಕು ತಿಂಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಬ್ಲೇಡ್ ಕಂಪನಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಸುಮಾರು 20 ಕೋಟಿಗೂ ಹೆಚ್ಚು ಹಣ ವಂಚನೆಯಾಗಿದೆ…….

ಹಣ ದ್ವಿಗುಣ, ಹೆಚ್ಚಿನ ಬಡ್ಡಿ ಮತ್ತು ಲಾಭದ ದುರಾಸೆಯಿಂದ ಹಣಕಾಸಿನ ವ್ಯವಹಾರಗಳಲ್ಲಿ ಮೋಸ ಹೋಗುವ ಘಟನೆಗಳನ್ನು ನಾವು ಬಹಳ ಹಿಂದಿನಿಂದಲೂ ಕೇಳುತ್ತಲೇ ಬಂದಿದ್ದೇವೆ‌ ಮತ್ತು ‌ಈಗಲೂ ಸಹ………….

ಡಿಜಿಟಲ್ ಇಂಡಿಯಾದತ್ತ ಹೆಜ್ಜೆ ಹಾಕುತ್ತಿರುವ ಸಂದರ್ಭದಲ್ಲಿ ಈ ವಂಚಕ ಸಂಸ್ಥೆಗಳ ಅವ್ಯವಹಾರಗಳು ನಮ್ಮ ಕಣ್ಣ ಮುಂದೆಯೇ ನಡೆಯುತ್ತಿರುವುದು ಬ್ಯಾಂಕಿಂಗ್ ವ್ಯವಸ್ಥೆಯನ್ನೇ ಅಣಕಿಸುವಂತಿದೆ……

ಸಮೂಹ ಸಂಪರ್ಕ ಮಾಧ್ಯಮಗಳ ಕ್ರಾಂತಿಯಾಗಿ ಎಲ್ಲಾ ಮಾಹಿತಿಗಳು ನಮ್ಮ ಕಣ್ಣ ಮುಂದೆ, ಬೆರಳ ತುದಿಯಲ್ಲಿ ಇರುವಾಗ, ಬ್ಯಾಂಕಿಂಗ್ ವ್ಯವಸ್ಥೆ ವ್ಯಾಪಕವಾಗಿ ಹರಡಿರುವಾಗ, ಕಾನೂನಿನ ಕಣ್ಗಾವಲು ಎಲ್ಲವನ್ನೂ ಸುತ್ತುವರಿದಿರುವಾಗ ಈಗಲೂ ಜನ ಸಮೂಹಗಳಿಗೆ ಮೋಸವಾಗುತ್ತಿದೆ ಎಂದರೆ ಜನರು ಮುಗ್ಧತೆಗೆ, ಮೂರ್ಖತನಕ್ಕೆ ಮತ್ತು ನಮ್ಮ ಆಡಳಿತ ವ್ಯವಸ್ಥೆಯ ವೈಫಲ್ಯಕ್ಕೆ ನಾವೇ ತಲೆ ತಗ್ಗಿಸಬೇಕಾಗಿದೆ…….

ಇಲ್ಲಿ ಜನರ ಅಜ್ಞಾನ, ಅತಿಯಾಸೆ, ತಿಳಿವಳಿಕೆಯ ಕೊರತೆಯನ್ನು ದೂಷಿಸುವುದು ಒಂದು ನೆಪ ಅಥವಾ ಕಾರಣ ಮಾತ್ರ. ಯಾರೋ ಹೇಳುವಂತೆ ಭಾರತ ಮುಂದುವರಿದ ಶ್ರೀಮಂತ ರಾಷ್ಟ್ರವಲ್ಲ. ವಿಶ್ವಗುರುವೂ ಅಲ್ಲ. ಆಂತರ್ಯದಲ್ಲಿ ನಮ್ಮ ದೇಶ ಬಡತನ, ಅಜ್ಞಾನ, ರೋಗ ರುಜಿನಗಳಿಂದ ನರಳುತ್ತಿದೆ. ಇಲ್ಲಿನ ಜನರನ್ನು ಬಹುಬೇಗ ದೇವರ, ಧರ್ಮದ, ಹಣದ, ಜಾತಿಯ ಆಮಿಷ ತೋರಿಸಿ ಯಾಮಾರಿಸಬಹುದು.
ಪೋಲೀಸ್ ಮತ್ತು ಕಾನೂನು ವ್ಯವಸ್ಥೆ ಮೋಸ ಹೋದ ನಂತರವೇ ಪ್ರವೇಶಿಸುತ್ತದೆ. ಅಲ್ಲದೆ ನಿಯಮಗಳು, ನ್ಯಾಯಾಲಯಗಳು ವಂಚಕರಿಗೆ ಹೆಚ್ಚಿನ ಅನುಕೂಲಕರ ವಾತಾವರಣ ಕಲ್ಪಿಸಿದೆ.
ಅಮಾಯಕರು, ನಿರಪರಾಧಿಗಳು ನ್ಯಾಯ ಪಡೆಯಲು ತುಂಬಾ ತುಂಬಾ ಕಷ್ಟ ಪಡಬೇಕು. ಆದರೂ ನ್ಯಾಯ ಸಿಗುತ್ತದೆ ಎಂಬ ಗ್ಯಾರಂಟಿ ಇಲ್ಲ. ಇದು ವಾಸ್ತವ………

ಸಾರ್ವಜನಿಕವಾಗಿ ಅನೇಕ ಜನರಿಗೆ ಅನೇಕ ವರ್ಷಗಳಿಂದ ಅನ್ಯಾಯವಾಗುತ್ತಿದೆ. ಇದು ವಂಚಕ ಕಂಪನಿ ಎಂದು ಗೊತ್ತಿದ್ದರೂ ಆಡಳಿತ ವ್ಯವಸ್ಥೆ ಅದನ್ನು ತಡೆಯುವ ಯಾವ ಪ್ರಯತ್ನವನ್ನೂ ಮಾಡುವುದಿಲ್ಲ. ಬದಲಾಗಿ ಪೋಲೀಸರು ಮತ್ತು ರಾಜಕಾರಣಿಗಳು ಅವರಿಗೆ ನೇರವಾಗಿಯೇ ಸಹಾಯ ಮಾಡುತ್ತಾರೆ……

ಕೆಲವು ವರ್ಷಗಳ ಹಿಂದೆ ನಡೆದ ಘಟನೆಯ ವಿಚಿತ್ರ ನೋಡಿ.
ಇಸ್ಲಾಂ ಧರ್ಮದಲ್ಲಿ ಬಡ್ಡಿ ವ್ಯವಹಾರಗಳಿಗೆ ನಿಷೇಧವಿದೆ. ಆದರೆ ಅದನ್ನು ಅಲ್ಲಿನ ಧರ್ಮದ ಮುಖಂಡರ ಮಾತುಗಳಲ್ಲಿ ತಿರುಚಿ, ಅದಕ್ಕೆ ಬೇರೆ ರೂಪ ನೀಡಿ, ಇದು ಬಡ್ಡಿ ವ್ಯವಹಾರ ಅಲ್ಲ, ನೀವು ಕಂಪನಿಯ ಪಾಲುದಾರರು ಅಥವಾ ಇನ್ವೆಸ್ಟರ್ ಗಳು ಎಂದು ಏನೇನೂ ಹೇಳಿ ಮುಗ್ದ ಜನರನ್ನು ಅದೇ ಧರ್ಮದ ಹೆಸರಿನಲ್ಲಿ ವಂಚಿಸುತ್ತಾರೆ. ಆ ಸಮಯದಲ್ಲಿ ಇದು ದೊಡ್ಡ ಸುದ್ದಿಯಾಗಿತ್ತು. ಅನೇಕ ಮುಸ್ಲಿಂ ಬೇಡ ಕುಟುಂಬಗಳು ಬೀದಿ ಪಾಲಾದವು.
ವಂಚನೆಗೆ – ವಂಚಕರಿಗೆ ಯಾವ ಧರ್ಮ ಆದರೇನು ?…..

ಈ ರೀತಿಯ ಕಂಪನಿಗಳು ಜನರನ್ನು ಸಮೂಹ ಸನ್ನಿಗೆ ಒಳಪಡಿಸುತ್ತವೆ. ದೊಡ್ಡ ದೊಡ್ಡ ಎಂಎಲ್ಎ, ಮಂತ್ರಿಗಳು, ಅಧಿಕಾರಿಗಳು, ಧಾರ್ಮಿಕ ಮುಖಂಡರು, ಶ್ರೀಮಂತರು, ವ್ಯಾಪಾರಿಗಳು ಎಲ್ಲರನ್ನೂ ಇದರೊಳಗೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಒಳಗೊಳ್ಳುವಂತೆ ಮಾಡುತ್ತಾರೆ. ಸಾರ್ವಜನಿಕ ಸೇವೆಯ ನೆಪದಲ್ಲಿ ಒಂದಷ್ಟು ಹಣವನ್ನು ಅದ್ದೂರಿಯಾಗಿ ಚೆಲ್ಲಿ ಸಮಾರಂಭಗಳನ್ನು ಮಾಡಿ ಜನರನ್ನು ಮರುಳು ಮಾಡುತ್ತಾರೆ. ಸಾವಿರಾರು ಕುರಿಗಳು ಒಟ್ಟೊಟ್ಟಾಗಿ ಬಲೆಗೆ ಬೀಳುತ್ತವೆ………

ಇದಕ್ಕೆಲ್ಲ ನೇರ ಹೊಣೆ ನಮ್ಮ ‌ಆಡಳಿತ ವ್ಯವಸ್ಥೆ. ಕಣ್ಣ ಮುಂದಿನ ಅಪರಾಧಗಳನ್ನು ಬಹಳಷ್ಟು ಬೆಳೆಯಲು ಬಿಟ್ಟು ಅದು ವೃಣವಾಗಿ ಕೊನೆಯ ಹಂತ ತಲುಪಿದಾಗ ಕಣ್ಣೊರೆಸುವ ನಾಟಕ ಮಾಡುತ್ತಾರೆ.
ಜನರ ಅಸಹಾಯಕ ಸ್ಥಿತಿಯನ್ನು ಹೀಗೂ ದುರುಪಯೋಗ ಪಡಿಸಿಕೊಳ್ಳುತ್ತಾರೆ…..

ರಾಜಕಾರಣಿಗಳಿಗೆ ಅಧಿಕಾರ ಸಿಗದಿದ್ದರೆ ಅದು ಅನ್ಯಾಯ, ಎಂಎಲ್ಎಗೆ ಮಂತ್ರಿ ಸ್ಥಾನ ಸಿಗದಿದ್ದರೆ ಅದು ಅನ್ಯಾಯ, ಅಧಿಕಾರಿಗಳಿಗೆ ಬಡ್ತಿ ಸಿಗದಿದ್ದರೆ ಅದು ಅನ್ಯಾಯ, ಚುನಾವಣೆಯಲ್ಲಿ ಜಯ ಗಳಿಸದಿದ್ದರೆ ಅದು ಅನ್ಯಾಯ. ಆದರೆ ಬಡವರಿಗೆ ಸಂಸ್ಥೆಯೊಂದು ಸಾಮೂಹಿಕವಾಗಿ ವಂಚಿಸಿದರೆ ಅದಕ್ಕೆ ಜನರೇ ಹೊಣೆ. ಇದು ನಮ್ಮ ಆಡಳಿತ ವ್ಯವಸ್ಥೆಯ ಮನೋಭಾವ……

ಮತ್ತೆ ಮತ್ತೆ ನಿರಂತರವಾಗಿ ಇಂತಹ ಘಟನೆಗಳು ನಡೆಯುತ್ತಲೇ ಇವೆ. ಎಷ್ಟೋ ಕುಟುಂಬಗಳು ಸರ್ವನಾಶವಾಗಿದೆ. ಅಮಾಯಕರ ನರಳಾಟ ನೋಡಿ ಸಹಿಸಲಾಗುತ್ತಿಲ್ಲ. ಬದಲಾವಣೆ ಎಲ್ಲಿಂದ ಪ್ರಾರಂಭಿಸಬೇಕು ಎಂದು ಅರ್ಥವಾಗುತ್ತಿಲ್ಲ. ಇದಕ್ಕೆ ಮುಕ್ತಿ ಎಂದು ??????????….

ಕಾನೂನುಗಳು ಬಲವಾಗಿದೆ. ಆದರೆ ಅದನ್ನು ಜಾರಿ ಮಾಡುವವರು ವಂಚಕರಾದರೇ ಅಥವಾ ಅಸಹಾಯಕರಾದರೇ !!!!!!!!!

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

8 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

9 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

1 day ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

1 day ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

1 day ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

1 day ago