ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ನಗರದ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ಶ್ರೀ ರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆ ಏ.11ರಿಂದ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆಯಿತು.
ನಗರದಾದ್ಯಂತ ಏ.13ರಂದು ಬೃಹತ್ ಶ್ರೀರಾಮ ಶೋಭಾಯಾತ್ರೆ ನಡೆಯಿತು. ಕಾರ್ಯಕ್ರಮದ ಅಂಗವಾಗಿ ವಾಹನ ಜಾಥಾ, ಹೋಮ ಹವನಾದಿಗಳು, ಕಲ್ಯಾಣೋತ್ಸವ ನಡೆಯಿತು.
ಭಾನುವಾರ ಸಂಜೆ ಬಹತ್ ಶೋಭಾಯಾತ್ರೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು. ಭಾರತ ಮಾತೆ, ಶ್ರೀರಾಮ, ಹನುಮ, ಶಿವ, ಭುವನೇಶ್ವರಿ, ಡಾ.ಬಿ.ಆರ್.ಅಂಬೇಡ್ಕರ್, ಶಿವಾಜಿ ಪ್ರತಿಮೆಗಳೊಂದಿಗೆ ವಿವಿಧ ಕಲಾತಂಡಗಳು ಶೋಭಾಯಾತ್ರೆಯ ಮೆರವಣಿಗೆಯಲ್ಲಿ ಭಾಗವಹಿಸಿದ್ದವು.
ಶ್ರೀರಾಮನ ಚಿತ್ರವುಳ್ಳ ಕೇಸರಿ ಧ್ವಜ ಹಿಡಿದು ‘ಜೈ ಶ್ರೀರಾಮ್’ ಘೋಷಣೆಯೊಂದಿಗೆ ಸಾವಿರಾರು ಜನ ಭಾಗವಹಿಸಿದ್ದರು. ಶೋಭಾ ಯಾತ್ರೆ ಸಾಗುವ ರಸ್ತೆಯ ಎರಡೂ ಬದಿಯಲ್ಲೂ ಜನರು ಸಾಲುಗಟ್ಟಿ ನಿಂತು ಬೃಹ್ ಮೆರವಣಿಗೆ ವೀಕ್ಷಣೆ ಮಾಡಿದರು.
ಶೋಭಾ ಯಾತ್ರೆಯಲ್ಲಿ ಸಾವಿರಾರು ಯುವಕರು ಶ್ರೀರಾಮನ ಭಕ್ತಿಗೀತೆಗಳಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರೆ, ಯುವತಿಯರು ತಮಟೆ ನಾದಕ್ಕೆ ಕುಣಿಯುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು.
ನಂತರ ಸಂಜೆ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ಲೇಸರ್ ಶೋ, ಬೃಹತ್ ರಾವಣ ದಹನ ಮತ್ತು ಆಕರ್ಷಕ ಸಿಡಿಮದ್ದುಗಳ ಪ್ರದರ್ಶನ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದವು.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…