ದೊಡ್ಡಬಳ್ಳಾಪುರ ನಗರದಲ್ಲಿರುವ ಹೆಸರಾಂತ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 8 ಫೆಡ್ ಲೈಟ್ ಐ ಮಾಸ್ಟ್, ಕ್ರೀಡಾಂಗಣ ಸುತ್ತಲೂ ಸುಮಾರು 100 ಲೈಟ್ ಗಳ ಅಳವಡಿಕೆಗೆ ಶಾಸಕ ಧೀರಜ್ ಮುನಿರಾಜ್ ಅವರು ಚಾಲನೆ ನೀಡಿದರು.
ಕ್ರೀಡಾಂಗಣ ರಾತ್ರಿ ವೇಳೆ ಸೂಕ್ತ ಬೆಳಕಿನ ವ್ಯವಸ್ಥೆ ಇಲ್ಲದೆ ಕತ್ತಲಲ್ಲಿ ಸೊರಗುತ್ತಿತ್ತು. ಈ ಹಿನ್ನೆಲೆ ಸಂಜೆ ಹೊತ್ತು ಜನ ವಾಕಿಂಗ್ ಮಾಡಲು, ಆಟವಾಡಲು ಆಗುತ್ತಿರಲಿಲ್ಲ. ಹಾಗೂ ರಾತ್ರಿ ವೇಳೆ ಮೈದಾನವೇ ಕಾಣುತ್ತಿರಲಿಲ್ಲ. ಆದ್ದರಿಂದ ಇದನ್ನ ಮನಗೊಂಡ ಶಾಸಕ ಧೀರಜ್ ಮುನಿರಾಜ್ ಅವರು ತಮ್ಮ ಮುಂದುವರಿದ ಯೋಜನೆಯ ಅನುದಾನದಲ್ಲಿ 8 ಫೆಡ್ ಲೈಟ್ ಐ ಮಾಸ್ಟ್, ಕ್ರೀಡಾಂಗಣ ಸುತ್ತಲೂ ಸುಮಾರು 100 ಲೈಟ್ ಗಳ ಅಳವಡಿಕೆಗೆ ಚಾಲನೆ ನೀಡಿದ್ದಾರೆ. ಈ ಮೂಲಕ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ರವಿಕುಮಾರ್, ನಗರಸಭಾ ಸದಸ್ಯರಾದ ಬಂತಿ ವೆಂಕಟೇಶ್, ಶಿವು, ಪದ್ಮನಾಭ, ರೂಪಿಣಿ ಮಂಜುನಾಥ್, ಇತರೆ ನಗರಸಭಾ ಸದಸ್ಯರುಗಳು, ಬಿಜೆಪಿ ಅಧ್ಯಕ್ಷ ನಾಗೇಶ್, ಮುದ್ದಪ್ಪ, ಪುಷ್ಪ ಶಿವಶಂಕರ್ ಸೇರಿದಂತೆ ಅನೇಕ ಮುಖಂಡರುಗಳು ಉಪಸ್ಥಿತಿ ಇದ್ದರು.
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…