ದೊಡ್ಡಬಳ್ಳಾಪುರ ನಗರದಲ್ಲಿರುವ ಹೆಸರಾಂತ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 8 ಫೆಡ್ ಲೈಟ್ ಐ ಮಾಸ್ಟ್, ಕ್ರೀಡಾಂಗಣ ಸುತ್ತಲೂ ಸುಮಾರು 100 ಲೈಟ್ ಗಳ ಅಳವಡಿಕೆಗೆ ಶಾಸಕ ಧೀರಜ್ ಮುನಿರಾಜ್ ಅವರು ಚಾಲನೆ ನೀಡಿದರು.
ಕ್ರೀಡಾಂಗಣ ರಾತ್ರಿ ವೇಳೆ ಸೂಕ್ತ ಬೆಳಕಿನ ವ್ಯವಸ್ಥೆ ಇಲ್ಲದೆ ಕತ್ತಲಲ್ಲಿ ಸೊರಗುತ್ತಿತ್ತು. ಈ ಹಿನ್ನೆಲೆ ಸಂಜೆ ಹೊತ್ತು ಜನ ವಾಕಿಂಗ್ ಮಾಡಲು, ಆಟವಾಡಲು ಆಗುತ್ತಿರಲಿಲ್ಲ. ಹಾಗೂ ರಾತ್ರಿ ವೇಳೆ ಮೈದಾನವೇ ಕಾಣುತ್ತಿರಲಿಲ್ಲ. ಆದ್ದರಿಂದ ಇದನ್ನ ಮನಗೊಂಡ ಶಾಸಕ ಧೀರಜ್ ಮುನಿರಾಜ್ ಅವರು ತಮ್ಮ ಮುಂದುವರಿದ ಯೋಜನೆಯ ಅನುದಾನದಲ್ಲಿ 8 ಫೆಡ್ ಲೈಟ್ ಐ ಮಾಸ್ಟ್, ಕ್ರೀಡಾಂಗಣ ಸುತ್ತಲೂ ಸುಮಾರು 100 ಲೈಟ್ ಗಳ ಅಳವಡಿಕೆಗೆ ಚಾಲನೆ ನೀಡಿದ್ದಾರೆ. ಈ ಮೂಲಕ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ರವಿಕುಮಾರ್, ನಗರಸಭಾ ಸದಸ್ಯರಾದ ಬಂತಿ ವೆಂಕಟೇಶ್, ಶಿವು, ಪದ್ಮನಾಭ, ರೂಪಿಣಿ ಮಂಜುನಾಥ್, ಇತರೆ ನಗರಸಭಾ ಸದಸ್ಯರುಗಳು, ಬಿಜೆಪಿ ಅಧ್ಯಕ್ಷ ನಾಗೇಶ್, ಮುದ್ದಪ್ಪ, ಪುಷ್ಪ ಶಿವಶಂಕರ್ ಸೇರಿದಂತೆ ಅನೇಕ ಮುಖಂಡರುಗಳು ಉಪಸ್ಥಿತಿ ಇದ್ದರು.
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…