ಭಗತ್ ಸಿಂಗ್ ಕ್ರೀಡಾಂಗಣಕ್ಕೆ ಬೆಳಕಿನ ಸ್ಪರ್ಶ ನೀಡಿದ ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ನಗರದಲ್ಲಿರುವ ಹೆಸರಾಂತ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 8 ಫೆಡ್ ಲೈಟ್ ಐ ಮಾಸ್ಟ್, ಕ್ರೀಡಾಂಗಣ ಸುತ್ತಲೂ ಸುಮಾರು 100 ಲೈಟ್ ಗಳ ಅಳವಡಿಕೆಗೆ ಶಾಸಕ ಧೀರಜ್ ಮುನಿರಾಜ್ ಅವರು ಚಾಲನೆ ನೀಡಿದರು.

ಕ್ರೀಡಾಂಗಣ ರಾತ್ರಿ ವೇಳೆ ಸೂಕ್ತ ಬೆಳಕಿನ ವ್ಯವಸ್ಥೆ ಇಲ್ಲದೆ ಕತ್ತಲಲ್ಲಿ ಸೊರಗುತ್ತಿತ್ತು. ಈ ಹಿನ್ನೆಲೆ ಸಂಜೆ ಹೊತ್ತು ಜನ ವಾಕಿಂಗ್ ಮಾಡಲು, ಆಟವಾಡಲು ಆಗುತ್ತಿರಲಿಲ್ಲ. ಹಾಗೂ ರಾತ್ರಿ‌ ವೇಳೆ ಮೈದಾನವೇ ಕಾಣುತ್ತಿರಲಿಲ್ಲ. ಆದ್ದರಿಂದ ಇದನ್ನ ಮನಗೊಂಡ ಶಾಸಕ ಧೀರಜ್ ಮುನಿರಾಜ್ ಅವರು ತಮ್ಮ ಮುಂದುವರಿದ ಯೋಜನೆಯ ಅನುದಾನದಲ್ಲಿ 8 ಫೆಡ್ ಲೈಟ್ ಐ ಮಾಸ್ಟ್, ಕ್ರೀಡಾಂಗಣ ಸುತ್ತಲೂ ಸುಮಾರು 100 ಲೈಟ್ ಗಳ ಅಳವಡಿಕೆಗೆ ಚಾಲನೆ ನೀಡಿದ್ದಾರೆ. ಈ ಮೂಲಕ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ  ಸುಮಿತ್ರಾ ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ರವಿಕುಮಾರ್, ನಗರಸಭಾ ಸದಸ್ಯರಾದ ಬಂತಿ ವೆಂಕಟೇಶ್, ಶಿವು, ಪದ್ಮನಾಭ, ರೂಪಿಣಿ ಮಂಜುನಾಥ್, ಇತರೆ ನಗರಸಭಾ ಸದಸ್ಯರುಗಳು, ಬಿಜೆಪಿ ಅಧ್ಯಕ್ಷ ನಾಗೇಶ್, ಮುದ್ದಪ್ಪ, ಪುಷ್ಪ ಶಿವಶಂಕರ್ ಸೇರಿದಂತೆ ಅನೇಕ ಮುಖಂಡರುಗಳು ಉಪಸ್ಥಿತಿ ಇದ್ದರು.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

13 minutes ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

4 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

5 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

17 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

18 hours ago