ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ: ಮುಂದಿನ ಸ್ವಾತಂತ್ರ್ಯ ದಿನಾಚರಣೆ ವೇಳೆಗೆ ನೂತನ ಉಪವಿಭಾಗಾಧಿಕಾರಿ ಕಚೇರಿಗೆ ಶೀಲಾನ್ಯಾಸ- ಶಾಸಕ ಧೀರಜ್ ಮುನಿರಾಜು

ಮುಂದಿನ ಸ್ವಾತಂತ್ರ್ಯ ದಿನಾಚರಣೆ ವೇಳೆಗೆ ನೂತನ ಉಪವಿಭಾಗಾಧಿಕಾರಿ ಕಚೇರಿಯ ಕಟ್ಟಡ ನಿರ್ಮಾಣಕ್ಕೆ ಶೀಲಾನ್ಯಾಸ ನೇರವೇರಿಸಲು ಎಲ್ಲಾ ತೊಡಕುಗಳನ್ನು ನಿವಾರಣೆ ಮಾಡಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಮಂಗಳವಾರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ‌ನಡೆದ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ದೇಶ ಸ್ವಾತಂತ್ರ್ಯವಾಗಲು ಹಲವಾರು ಸ್ವಾತಂತ್ರ್ಯ ಹೋರಾಟಗಾರರು ತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಅದರ ಫಲವಾಗಿ ನಮಗೆ ಸ್ವಾತಂತ್ರ್ಯ ಲಭಿಸಿದೆ ಎಂದು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.

ತಾಲೂಕಿನ ಜನತೆಯ ಸಮಸ್ಯೆಗಳನ್ನು ಉತ್ತಮವಾಗಿ ಜನಸ್ನೇಹಿಯಾಗಿ ಬಗೆಹರಿಸಲು ಯತ್ನಿಸಲಾಗುತ್ತದೆ. ಜನರ ಕುಂದುಕೊರತೆಗಳನ್ನು ಸರಕಾರದ ಗಮನಕ್ಕೆ ತರಲಾಗುತ್ತದೆ. ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ 2016ರಲ್ಲಿ ತಾಲೂಕಿಗೆ ಅನುಮೋದನೆ ಸಿಕ್ಕಿದೆ. ಮುಂದಿನ ಸ್ವಾತಂತ್ರ್ಯ ದಿನಾಚರಣೆಯನ್ನು ನಿರ್ಮಾಣಗೊಂಡ ನೂತನ ಕ್ರೀಡಾಂಗಣದಲ್ಲಿ ಮಾಡಲು ಕ್ರಮವಹಿಸಲಾಗುತ್ತದೆ ಎಂದು ತಿಳಿಸಿದರು.

ತಾಲೂಕಿನ ಬಹು ವರ್ಷದ ಬೇಡಿಕೆಯಾದ ಜಿಲ್ಲಾಸ್ಪತ್ರೆ, ಎಸ್.ಪಿ ಕಚೇರಿ, ಜಿಲ್ಲಾ ಕಾರಾಗೃಹ ವಿಚಾರಗಳಲ್ಲಿ ಜಿಲ್ಲಾಕೇಂದ್ರ ಹೋರಾಟ ಸಮಿತಿಗೆ ಶಕ್ತಿ ತುಂಬಲಾಗುತ್ತದೆ. ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಮಾದರಿ ತಾಲ್ಲೂಕು ಮಾಡಲು ಅಧಿಕಾರಿಗಳು ಸಹಕರಿಸಬೇಕಾಗಿದೆ ಎಂದರು.

ನಂತರ ಉಪವಿಭಾಗಾಧಿಕಾರಿ ಶ್ರೀನಿವಾಸ್ ಮಾತನಾಡಿ, ವಿಶ್ವದಲ್ಲೇ ಪರಮಾಣು ಶಕ್ತಿ ಹೊಂದಿದ ಕೆಲವೇ ಕೆಲವು ದೇಶಗಳಲ್ಲಿ ಭಾರತವು ಒಂದಾಗಿದೆ. ಇತ್ತೀಚಿನ ವರ್ಷಗಳಲ್ಲಿ ಮೂಲಭೂತ ಸೌಕರ್ಯಗಳ ವಿಚಾರದಲ್ಲಿ ದೇಶ ಅಸಾಮಾನ್ಯ ಸಾಧನೆ ಮಾಡಿದೆ. ಯುವ ಸಮುದಾಯ ಕೂಡ ದೇಶದ ಅಭಿವೃದ್ಧಿಯಲ್ಲಿ ಭಾಗವಾಗಿ ದೇಶವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸಲು ಪ್ರಯತ್ನಿಸಬೇಕು‌. ಪ್ರತಿಯೊಬ್ಬರು ಸ್ವಾತಂತ್ರ್ಯ ಹೋರಾಟಗಾರನ್ನು ಸ್ಮರಿಸಿ‌ ಸಡಗರ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಬೇಕು ಎಂದರು.

ತಾ.ಪಂ ಇಒ ಮುನಿರಾಜು ಮಾತನಾಡಿ, ನನ್ನ ಮಣ್ಣು ನನ್ನ ದೇಶದ ಅಭಿಯಾನದ ಭಾಗವಾಗಿ ಪ್ರತಿಯೊಂದು ಗ್ರಾ.ಪಂಚಾಯಿತಿಯಿಂದಲೂ ಪವಿತ್ರವಾದ ಮಣ್ಣನ್ನಯ ಸಂಗ್ರಹಿಸಲಾಗುತ್ತಿದೆ. ಇದನ್ನು ದೆಹಲಿಗೆ ತಲುಪಿಸುವಂತ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ರಂಗಕಲೆಯ ಕೋಡಿಹಳ್ಳಿಯ ಮಾಲೂರಪ್ಪ , ಸಾಮಾಜಿಕ ಸೇವೆ ವಿಭಾಗದಲ್ಲಿ ರವಿ ಮಾವಿನಕುಂಟೆ, ಕ್ಷಯ ರೋಗಿ ದತ್ತು ಪಡೆದು ಅವರಿಗೆ ನೆರವಾದ ಶ್ರೀನಿವಾಸ ಮೂರ್ತಿ.ಎಲ್ , ಹರಿಕಥೆ ವಿಭಾಗದಲ್ಲಿ ರಾಮಮೂರ್ತಿ ಡಿ.ಆರ್ , ಜಾನಪದ ಕಲೆಯ ಜೆ.ವಿ ಸುಬ್ರಮಣ್ಯ, ಟೇಕ್ವಾಂಡೋ ವಿಭಾಗದಲ್ಲಿ ಯಶವಂತ್. ಎನ್ ಅವರಿಗೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿ ಜೈಲು ಶಿಕ್ಷೆ ಅನುಭವಿಸಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ಸಿ ನಾರಾಯಣಸ್ವಾಮಿಗೆ ವಿಶೇಷ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ವಿಭಾ ರಾಠೋಡ್, ಇಓ ಮುನಿರಾಜು, ನಗರಸಭೆ ಅಧ್ಯಕ್ಷೆ ಸುಧಾರಣಿ ಲಕ್ಷ್ಮೀನಾರಾಯಣ, ಉಪಾಧ್ಯಕ್ಷೆ ಫರ್ಹಾನ್ ತಾಜ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ್, ಟಿಎಪಿಎಂಸಿಎಸ್ ಅಧ್ಯಕ್ಷ ಆಂಜನೇಗೌಡ, ಪೌರಾಯುಕ್ತ ಶಿವಶಂಕರ್, ನಗರಸಭೆ ಸದಸ್ಯರಾದ ತ.ನ ಪ್ರಭುದೇವ, ವೆಂಕಟೇಶ್, ರವಿ, ಆರ್ ಆನಂದ್ ಮೂರ್ತಿ ಸೇರಿದಂತೆ ಅನೇಕರು ಹಾಜರಿದ್ದರು.

Ramesh Babu

Journalist

Recent Posts

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

3 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

6 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

6 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

17 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

18 hours ago

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…

18 hours ago