ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ: ಮುಂದಿನ ಸ್ವಾತಂತ್ರ್ಯ ದಿನಾಚರಣೆ ವೇಳೆಗೆ ನೂತನ ಉಪವಿಭಾಗಾಧಿಕಾರಿ ಕಚೇರಿಗೆ ಶೀಲಾನ್ಯಾಸ- ಶಾಸಕ ಧೀರಜ್ ಮುನಿರಾಜು

ಮುಂದಿನ ಸ್ವಾತಂತ್ರ್ಯ ದಿನಾಚರಣೆ ವೇಳೆಗೆ ನೂತನ ಉಪವಿಭಾಗಾಧಿಕಾರಿ ಕಚೇರಿಯ ಕಟ್ಟಡ ನಿರ್ಮಾಣಕ್ಕೆ ಶೀಲಾನ್ಯಾಸ ನೇರವೇರಿಸಲು ಎಲ್ಲಾ ತೊಡಕುಗಳನ್ನು ನಿವಾರಣೆ ಮಾಡಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಮಂಗಳವಾರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ‌ನಡೆದ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ದೇಶ ಸ್ವಾತಂತ್ರ್ಯವಾಗಲು ಹಲವಾರು ಸ್ವಾತಂತ್ರ್ಯ ಹೋರಾಟಗಾರರು ತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಅದರ ಫಲವಾಗಿ ನಮಗೆ ಸ್ವಾತಂತ್ರ್ಯ ಲಭಿಸಿದೆ ಎಂದು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.

ತಾಲೂಕಿನ ಜನತೆಯ ಸಮಸ್ಯೆಗಳನ್ನು ಉತ್ತಮವಾಗಿ ಜನಸ್ನೇಹಿಯಾಗಿ ಬಗೆಹರಿಸಲು ಯತ್ನಿಸಲಾಗುತ್ತದೆ. ಜನರ ಕುಂದುಕೊರತೆಗಳನ್ನು ಸರಕಾರದ ಗಮನಕ್ಕೆ ತರಲಾಗುತ್ತದೆ. ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ 2016ರಲ್ಲಿ ತಾಲೂಕಿಗೆ ಅನುಮೋದನೆ ಸಿಕ್ಕಿದೆ. ಮುಂದಿನ ಸ್ವಾತಂತ್ರ್ಯ ದಿನಾಚರಣೆಯನ್ನು ನಿರ್ಮಾಣಗೊಂಡ ನೂತನ ಕ್ರೀಡಾಂಗಣದಲ್ಲಿ ಮಾಡಲು ಕ್ರಮವಹಿಸಲಾಗುತ್ತದೆ ಎಂದು ತಿಳಿಸಿದರು.

ತಾಲೂಕಿನ ಬಹು ವರ್ಷದ ಬೇಡಿಕೆಯಾದ ಜಿಲ್ಲಾಸ್ಪತ್ರೆ, ಎಸ್.ಪಿ ಕಚೇರಿ, ಜಿಲ್ಲಾ ಕಾರಾಗೃಹ ವಿಚಾರಗಳಲ್ಲಿ ಜಿಲ್ಲಾಕೇಂದ್ರ ಹೋರಾಟ ಸಮಿತಿಗೆ ಶಕ್ತಿ ತುಂಬಲಾಗುತ್ತದೆ. ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಮಾದರಿ ತಾಲ್ಲೂಕು ಮಾಡಲು ಅಧಿಕಾರಿಗಳು ಸಹಕರಿಸಬೇಕಾಗಿದೆ ಎಂದರು.

ನಂತರ ಉಪವಿಭಾಗಾಧಿಕಾರಿ ಶ್ರೀನಿವಾಸ್ ಮಾತನಾಡಿ, ವಿಶ್ವದಲ್ಲೇ ಪರಮಾಣು ಶಕ್ತಿ ಹೊಂದಿದ ಕೆಲವೇ ಕೆಲವು ದೇಶಗಳಲ್ಲಿ ಭಾರತವು ಒಂದಾಗಿದೆ. ಇತ್ತೀಚಿನ ವರ್ಷಗಳಲ್ಲಿ ಮೂಲಭೂತ ಸೌಕರ್ಯಗಳ ವಿಚಾರದಲ್ಲಿ ದೇಶ ಅಸಾಮಾನ್ಯ ಸಾಧನೆ ಮಾಡಿದೆ. ಯುವ ಸಮುದಾಯ ಕೂಡ ದೇಶದ ಅಭಿವೃದ್ಧಿಯಲ್ಲಿ ಭಾಗವಾಗಿ ದೇಶವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸಲು ಪ್ರಯತ್ನಿಸಬೇಕು‌. ಪ್ರತಿಯೊಬ್ಬರು ಸ್ವಾತಂತ್ರ್ಯ ಹೋರಾಟಗಾರನ್ನು ಸ್ಮರಿಸಿ‌ ಸಡಗರ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಬೇಕು ಎಂದರು.

ತಾ.ಪಂ ಇಒ ಮುನಿರಾಜು ಮಾತನಾಡಿ, ನನ್ನ ಮಣ್ಣು ನನ್ನ ದೇಶದ ಅಭಿಯಾನದ ಭಾಗವಾಗಿ ಪ್ರತಿಯೊಂದು ಗ್ರಾ.ಪಂಚಾಯಿತಿಯಿಂದಲೂ ಪವಿತ್ರವಾದ ಮಣ್ಣನ್ನಯ ಸಂಗ್ರಹಿಸಲಾಗುತ್ತಿದೆ. ಇದನ್ನು ದೆಹಲಿಗೆ ತಲುಪಿಸುವಂತ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ರಂಗಕಲೆಯ ಕೋಡಿಹಳ್ಳಿಯ ಮಾಲೂರಪ್ಪ , ಸಾಮಾಜಿಕ ಸೇವೆ ವಿಭಾಗದಲ್ಲಿ ರವಿ ಮಾವಿನಕುಂಟೆ, ಕ್ಷಯ ರೋಗಿ ದತ್ತು ಪಡೆದು ಅವರಿಗೆ ನೆರವಾದ ಶ್ರೀನಿವಾಸ ಮೂರ್ತಿ.ಎಲ್ , ಹರಿಕಥೆ ವಿಭಾಗದಲ್ಲಿ ರಾಮಮೂರ್ತಿ ಡಿ.ಆರ್ , ಜಾನಪದ ಕಲೆಯ ಜೆ.ವಿ ಸುಬ್ರಮಣ್ಯ, ಟೇಕ್ವಾಂಡೋ ವಿಭಾಗದಲ್ಲಿ ಯಶವಂತ್. ಎನ್ ಅವರಿಗೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿ ಜೈಲು ಶಿಕ್ಷೆ ಅನುಭವಿಸಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ಸಿ ನಾರಾಯಣಸ್ವಾಮಿಗೆ ವಿಶೇಷ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ವಿಭಾ ರಾಠೋಡ್, ಇಓ ಮುನಿರಾಜು, ನಗರಸಭೆ ಅಧ್ಯಕ್ಷೆ ಸುಧಾರಣಿ ಲಕ್ಷ್ಮೀನಾರಾಯಣ, ಉಪಾಧ್ಯಕ್ಷೆ ಫರ್ಹಾನ್ ತಾಜ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ್, ಟಿಎಪಿಎಂಸಿಎಸ್ ಅಧ್ಯಕ್ಷ ಆಂಜನೇಗೌಡ, ಪೌರಾಯುಕ್ತ ಶಿವಶಂಕರ್, ನಗರಸಭೆ ಸದಸ್ಯರಾದ ತ.ನ ಪ್ರಭುದೇವ, ವೆಂಕಟೇಶ್, ರವಿ, ಆರ್ ಆನಂದ್ ಮೂರ್ತಿ ಸೇರಿದಂತೆ ಅನೇಕರು ಹಾಜರಿದ್ದರು.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

9 minutes ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

22 minutes ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

13 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

14 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

16 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago