ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ: ಮುಂದಿನ ಸ್ವಾತಂತ್ರ್ಯ ದಿನಾಚರಣೆ ವೇಳೆಗೆ ನೂತನ ಉಪವಿಭಾಗಾಧಿಕಾರಿ ಕಚೇರಿಗೆ ಶೀಲಾನ್ಯಾಸ- ಶಾಸಕ ಧೀರಜ್ ಮುನಿರಾಜು

ಮುಂದಿನ ಸ್ವಾತಂತ್ರ್ಯ ದಿನಾಚರಣೆ ವೇಳೆಗೆ ನೂತನ ಉಪವಿಭಾಗಾಧಿಕಾರಿ ಕಚೇರಿಯ ಕಟ್ಟಡ ನಿರ್ಮಾಣಕ್ಕೆ ಶೀಲಾನ್ಯಾಸ ನೇರವೇರಿಸಲು ಎಲ್ಲಾ ತೊಡಕುಗಳನ್ನು ನಿವಾರಣೆ ಮಾಡಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಮಂಗಳವಾರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ‌ನಡೆದ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ದೇಶ ಸ್ವಾತಂತ್ರ್ಯವಾಗಲು ಹಲವಾರು ಸ್ವಾತಂತ್ರ್ಯ ಹೋರಾಟಗಾರರು ತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಅದರ ಫಲವಾಗಿ ನಮಗೆ ಸ್ವಾತಂತ್ರ್ಯ ಲಭಿಸಿದೆ ಎಂದು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.

ತಾಲೂಕಿನ ಜನತೆಯ ಸಮಸ್ಯೆಗಳನ್ನು ಉತ್ತಮವಾಗಿ ಜನಸ್ನೇಹಿಯಾಗಿ ಬಗೆಹರಿಸಲು ಯತ್ನಿಸಲಾಗುತ್ತದೆ. ಜನರ ಕುಂದುಕೊರತೆಗಳನ್ನು ಸರಕಾರದ ಗಮನಕ್ಕೆ ತರಲಾಗುತ್ತದೆ. ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ 2016ರಲ್ಲಿ ತಾಲೂಕಿಗೆ ಅನುಮೋದನೆ ಸಿಕ್ಕಿದೆ. ಮುಂದಿನ ಸ್ವಾತಂತ್ರ್ಯ ದಿನಾಚರಣೆಯನ್ನು ನಿರ್ಮಾಣಗೊಂಡ ನೂತನ ಕ್ರೀಡಾಂಗಣದಲ್ಲಿ ಮಾಡಲು ಕ್ರಮವಹಿಸಲಾಗುತ್ತದೆ ಎಂದು ತಿಳಿಸಿದರು.

ತಾಲೂಕಿನ ಬಹು ವರ್ಷದ ಬೇಡಿಕೆಯಾದ ಜಿಲ್ಲಾಸ್ಪತ್ರೆ, ಎಸ್.ಪಿ ಕಚೇರಿ, ಜಿಲ್ಲಾ ಕಾರಾಗೃಹ ವಿಚಾರಗಳಲ್ಲಿ ಜಿಲ್ಲಾಕೇಂದ್ರ ಹೋರಾಟ ಸಮಿತಿಗೆ ಶಕ್ತಿ ತುಂಬಲಾಗುತ್ತದೆ. ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಮಾದರಿ ತಾಲ್ಲೂಕು ಮಾಡಲು ಅಧಿಕಾರಿಗಳು ಸಹಕರಿಸಬೇಕಾಗಿದೆ ಎಂದರು.

ನಂತರ ಉಪವಿಭಾಗಾಧಿಕಾರಿ ಶ್ರೀನಿವಾಸ್ ಮಾತನಾಡಿ, ವಿಶ್ವದಲ್ಲೇ ಪರಮಾಣು ಶಕ್ತಿ ಹೊಂದಿದ ಕೆಲವೇ ಕೆಲವು ದೇಶಗಳಲ್ಲಿ ಭಾರತವು ಒಂದಾಗಿದೆ. ಇತ್ತೀಚಿನ ವರ್ಷಗಳಲ್ಲಿ ಮೂಲಭೂತ ಸೌಕರ್ಯಗಳ ವಿಚಾರದಲ್ಲಿ ದೇಶ ಅಸಾಮಾನ್ಯ ಸಾಧನೆ ಮಾಡಿದೆ. ಯುವ ಸಮುದಾಯ ಕೂಡ ದೇಶದ ಅಭಿವೃದ್ಧಿಯಲ್ಲಿ ಭಾಗವಾಗಿ ದೇಶವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸಲು ಪ್ರಯತ್ನಿಸಬೇಕು‌. ಪ್ರತಿಯೊಬ್ಬರು ಸ್ವಾತಂತ್ರ್ಯ ಹೋರಾಟಗಾರನ್ನು ಸ್ಮರಿಸಿ‌ ಸಡಗರ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಬೇಕು ಎಂದರು.

ತಾ.ಪಂ ಇಒ ಮುನಿರಾಜು ಮಾತನಾಡಿ, ನನ್ನ ಮಣ್ಣು ನನ್ನ ದೇಶದ ಅಭಿಯಾನದ ಭಾಗವಾಗಿ ಪ್ರತಿಯೊಂದು ಗ್ರಾ.ಪಂಚಾಯಿತಿಯಿಂದಲೂ ಪವಿತ್ರವಾದ ಮಣ್ಣನ್ನಯ ಸಂಗ್ರಹಿಸಲಾಗುತ್ತಿದೆ. ಇದನ್ನು ದೆಹಲಿಗೆ ತಲುಪಿಸುವಂತ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ರಂಗಕಲೆಯ ಕೋಡಿಹಳ್ಳಿಯ ಮಾಲೂರಪ್ಪ , ಸಾಮಾಜಿಕ ಸೇವೆ ವಿಭಾಗದಲ್ಲಿ ರವಿ ಮಾವಿನಕುಂಟೆ, ಕ್ಷಯ ರೋಗಿ ದತ್ತು ಪಡೆದು ಅವರಿಗೆ ನೆರವಾದ ಶ್ರೀನಿವಾಸ ಮೂರ್ತಿ.ಎಲ್ , ಹರಿಕಥೆ ವಿಭಾಗದಲ್ಲಿ ರಾಮಮೂರ್ತಿ ಡಿ.ಆರ್ , ಜಾನಪದ ಕಲೆಯ ಜೆ.ವಿ ಸುಬ್ರಮಣ್ಯ, ಟೇಕ್ವಾಂಡೋ ವಿಭಾಗದಲ್ಲಿ ಯಶವಂತ್. ಎನ್ ಅವರಿಗೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿ ಜೈಲು ಶಿಕ್ಷೆ ಅನುಭವಿಸಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ಸಿ ನಾರಾಯಣಸ್ವಾಮಿಗೆ ವಿಶೇಷ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ವಿಭಾ ರಾಠೋಡ್, ಇಓ ಮುನಿರಾಜು, ನಗರಸಭೆ ಅಧ್ಯಕ್ಷೆ ಸುಧಾರಣಿ ಲಕ್ಷ್ಮೀನಾರಾಯಣ, ಉಪಾಧ್ಯಕ್ಷೆ ಫರ್ಹಾನ್ ತಾಜ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ್, ಟಿಎಪಿಎಂಸಿಎಸ್ ಅಧ್ಯಕ್ಷ ಆಂಜನೇಗೌಡ, ಪೌರಾಯುಕ್ತ ಶಿವಶಂಕರ್, ನಗರಸಭೆ ಸದಸ್ಯರಾದ ತ.ನ ಪ್ರಭುದೇವ, ವೆಂಕಟೇಶ್, ರವಿ, ಆರ್ ಆನಂದ್ ಮೂರ್ತಿ ಸೇರಿದಂತೆ ಅನೇಕರು ಹಾಜರಿದ್ದರು.

Ramesh Babu

Journalist

Recent Posts

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

3 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

6 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

8 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

12 hours ago

“ಕಾಂಗ್ರೆಸ್ ನಡೆ – ಮತ ರಕ್ಷಣೆಯ ಕಡೆ”: ಕೆಪಿಸಿಸಿ ವತಿಯಿಂದ ಮಹತ್ವದ ಕಾರ್ಯಾಗಾರ: ಸಿಎಂ, ಡಿಸಿಎಂ‌ ಭಾಗಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ‌ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…

14 hours ago

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

2 days ago