ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ: ಮುಂದಿನ ಸ್ವಾತಂತ್ರ್ಯ ದಿನಾಚರಣೆ ವೇಳೆಗೆ ನೂತನ ಉಪವಿಭಾಗಾಧಿಕಾರಿ ಕಚೇರಿಗೆ ಶೀಲಾನ್ಯಾಸ- ಶಾಸಕ ಧೀರಜ್ ಮುನಿರಾಜು

ಮುಂದಿನ ಸ್ವಾತಂತ್ರ್ಯ ದಿನಾಚರಣೆ ವೇಳೆಗೆ ನೂತನ ಉಪವಿಭಾಗಾಧಿಕಾರಿ ಕಚೇರಿಯ ಕಟ್ಟಡ ನಿರ್ಮಾಣಕ್ಕೆ ಶೀಲಾನ್ಯಾಸ ನೇರವೇರಿಸಲು ಎಲ್ಲಾ ತೊಡಕುಗಳನ್ನು ನಿವಾರಣೆ ಮಾಡಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಮಂಗಳವಾರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ‌ನಡೆದ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ದೇಶ ಸ್ವಾತಂತ್ರ್ಯವಾಗಲು ಹಲವಾರು ಸ್ವಾತಂತ್ರ್ಯ ಹೋರಾಟಗಾರರು ತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಅದರ ಫಲವಾಗಿ ನಮಗೆ ಸ್ವಾತಂತ್ರ್ಯ ಲಭಿಸಿದೆ ಎಂದು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.

ತಾಲೂಕಿನ ಜನತೆಯ ಸಮಸ್ಯೆಗಳನ್ನು ಉತ್ತಮವಾಗಿ ಜನಸ್ನೇಹಿಯಾಗಿ ಬಗೆಹರಿಸಲು ಯತ್ನಿಸಲಾಗುತ್ತದೆ. ಜನರ ಕುಂದುಕೊರತೆಗಳನ್ನು ಸರಕಾರದ ಗಮನಕ್ಕೆ ತರಲಾಗುತ್ತದೆ. ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ 2016ರಲ್ಲಿ ತಾಲೂಕಿಗೆ ಅನುಮೋದನೆ ಸಿಕ್ಕಿದೆ. ಮುಂದಿನ ಸ್ವಾತಂತ್ರ್ಯ ದಿನಾಚರಣೆಯನ್ನು ನಿರ್ಮಾಣಗೊಂಡ ನೂತನ ಕ್ರೀಡಾಂಗಣದಲ್ಲಿ ಮಾಡಲು ಕ್ರಮವಹಿಸಲಾಗುತ್ತದೆ ಎಂದು ತಿಳಿಸಿದರು.

ತಾಲೂಕಿನ ಬಹು ವರ್ಷದ ಬೇಡಿಕೆಯಾದ ಜಿಲ್ಲಾಸ್ಪತ್ರೆ, ಎಸ್.ಪಿ ಕಚೇರಿ, ಜಿಲ್ಲಾ ಕಾರಾಗೃಹ ವಿಚಾರಗಳಲ್ಲಿ ಜಿಲ್ಲಾಕೇಂದ್ರ ಹೋರಾಟ ಸಮಿತಿಗೆ ಶಕ್ತಿ ತುಂಬಲಾಗುತ್ತದೆ. ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಮಾದರಿ ತಾಲ್ಲೂಕು ಮಾಡಲು ಅಧಿಕಾರಿಗಳು ಸಹಕರಿಸಬೇಕಾಗಿದೆ ಎಂದರು.

ನಂತರ ಉಪವಿಭಾಗಾಧಿಕಾರಿ ಶ್ರೀನಿವಾಸ್ ಮಾತನಾಡಿ, ವಿಶ್ವದಲ್ಲೇ ಪರಮಾಣು ಶಕ್ತಿ ಹೊಂದಿದ ಕೆಲವೇ ಕೆಲವು ದೇಶಗಳಲ್ಲಿ ಭಾರತವು ಒಂದಾಗಿದೆ. ಇತ್ತೀಚಿನ ವರ್ಷಗಳಲ್ಲಿ ಮೂಲಭೂತ ಸೌಕರ್ಯಗಳ ವಿಚಾರದಲ್ಲಿ ದೇಶ ಅಸಾಮಾನ್ಯ ಸಾಧನೆ ಮಾಡಿದೆ. ಯುವ ಸಮುದಾಯ ಕೂಡ ದೇಶದ ಅಭಿವೃದ್ಧಿಯಲ್ಲಿ ಭಾಗವಾಗಿ ದೇಶವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸಲು ಪ್ರಯತ್ನಿಸಬೇಕು‌. ಪ್ರತಿಯೊಬ್ಬರು ಸ್ವಾತಂತ್ರ್ಯ ಹೋರಾಟಗಾರನ್ನು ಸ್ಮರಿಸಿ‌ ಸಡಗರ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಬೇಕು ಎಂದರು.

ತಾ.ಪಂ ಇಒ ಮುನಿರಾಜು ಮಾತನಾಡಿ, ನನ್ನ ಮಣ್ಣು ನನ್ನ ದೇಶದ ಅಭಿಯಾನದ ಭಾಗವಾಗಿ ಪ್ರತಿಯೊಂದು ಗ್ರಾ.ಪಂಚಾಯಿತಿಯಿಂದಲೂ ಪವಿತ್ರವಾದ ಮಣ್ಣನ್ನಯ ಸಂಗ್ರಹಿಸಲಾಗುತ್ತಿದೆ. ಇದನ್ನು ದೆಹಲಿಗೆ ತಲುಪಿಸುವಂತ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ರಂಗಕಲೆಯ ಕೋಡಿಹಳ್ಳಿಯ ಮಾಲೂರಪ್ಪ , ಸಾಮಾಜಿಕ ಸೇವೆ ವಿಭಾಗದಲ್ಲಿ ರವಿ ಮಾವಿನಕುಂಟೆ, ಕ್ಷಯ ರೋಗಿ ದತ್ತು ಪಡೆದು ಅವರಿಗೆ ನೆರವಾದ ಶ್ರೀನಿವಾಸ ಮೂರ್ತಿ.ಎಲ್ , ಹರಿಕಥೆ ವಿಭಾಗದಲ್ಲಿ ರಾಮಮೂರ್ತಿ ಡಿ.ಆರ್ , ಜಾನಪದ ಕಲೆಯ ಜೆ.ವಿ ಸುಬ್ರಮಣ್ಯ, ಟೇಕ್ವಾಂಡೋ ವಿಭಾಗದಲ್ಲಿ ಯಶವಂತ್. ಎನ್ ಅವರಿಗೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿ ಜೈಲು ಶಿಕ್ಷೆ ಅನುಭವಿಸಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ಸಿ ನಾರಾಯಣಸ್ವಾಮಿಗೆ ವಿಶೇಷ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ವಿಭಾ ರಾಠೋಡ್, ಇಓ ಮುನಿರಾಜು, ನಗರಸಭೆ ಅಧ್ಯಕ್ಷೆ ಸುಧಾರಣಿ ಲಕ್ಷ್ಮೀನಾರಾಯಣ, ಉಪಾಧ್ಯಕ್ಷೆ ಫರ್ಹಾನ್ ತಾಜ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ್, ಟಿಎಪಿಎಂಸಿಎಸ್ ಅಧ್ಯಕ್ಷ ಆಂಜನೇಗೌಡ, ಪೌರಾಯುಕ್ತ ಶಿವಶಂಕರ್, ನಗರಸಭೆ ಸದಸ್ಯರಾದ ತ.ನ ಪ್ರಭುದೇವ, ವೆಂಕಟೇಶ್, ರವಿ, ಆರ್ ಆನಂದ್ ಮೂರ್ತಿ ಸೇರಿದಂತೆ ಅನೇಕರು ಹಾಜರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

19 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago