ಮುಂದಿನ ಸ್ವಾತಂತ್ರ್ಯ ದಿನಾಚರಣೆ ವೇಳೆಗೆ ನೂತನ ಉಪವಿಭಾಗಾಧಿಕಾರಿ ಕಚೇರಿಯ ಕಟ್ಟಡ ನಿರ್ಮಾಣಕ್ಕೆ ಶೀಲಾನ್ಯಾಸ ನೇರವೇರಿಸಲು ಎಲ್ಲಾ ತೊಡಕುಗಳನ್ನು ನಿವಾರಣೆ ಮಾಡಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಮಂಗಳವಾರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ದೇಶ ಸ್ವಾತಂತ್ರ್ಯವಾಗಲು ಹಲವಾರು ಸ್ವಾತಂತ್ರ್ಯ ಹೋರಾಟಗಾರರು ತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಅದರ ಫಲವಾಗಿ ನಮಗೆ ಸ್ವಾತಂತ್ರ್ಯ ಲಭಿಸಿದೆ ಎಂದು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.
ತಾಲೂಕಿನ ಜನತೆಯ ಸಮಸ್ಯೆಗಳನ್ನು ಉತ್ತಮವಾಗಿ ಜನಸ್ನೇಹಿಯಾಗಿ ಬಗೆಹರಿಸಲು ಯತ್ನಿಸಲಾಗುತ್ತದೆ. ಜನರ ಕುಂದುಕೊರತೆಗಳನ್ನು ಸರಕಾರದ ಗಮನಕ್ಕೆ ತರಲಾಗುತ್ತದೆ. ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ 2016ರಲ್ಲಿ ತಾಲೂಕಿಗೆ ಅನುಮೋದನೆ ಸಿಕ್ಕಿದೆ. ಮುಂದಿನ ಸ್ವಾತಂತ್ರ್ಯ ದಿನಾಚರಣೆಯನ್ನು ನಿರ್ಮಾಣಗೊಂಡ ನೂತನ ಕ್ರೀಡಾಂಗಣದಲ್ಲಿ ಮಾಡಲು ಕ್ರಮವಹಿಸಲಾಗುತ್ತದೆ ಎಂದು ತಿಳಿಸಿದರು.
ತಾಲೂಕಿನ ಬಹು ವರ್ಷದ ಬೇಡಿಕೆಯಾದ ಜಿಲ್ಲಾಸ್ಪತ್ರೆ, ಎಸ್.ಪಿ ಕಚೇರಿ, ಜಿಲ್ಲಾ ಕಾರಾಗೃಹ ವಿಚಾರಗಳಲ್ಲಿ ಜಿಲ್ಲಾಕೇಂದ್ರ ಹೋರಾಟ ಸಮಿತಿಗೆ ಶಕ್ತಿ ತುಂಬಲಾಗುತ್ತದೆ. ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಮಾದರಿ ತಾಲ್ಲೂಕು ಮಾಡಲು ಅಧಿಕಾರಿಗಳು ಸಹಕರಿಸಬೇಕಾಗಿದೆ ಎಂದರು.
ನಂತರ ಉಪವಿಭಾಗಾಧಿಕಾರಿ ಶ್ರೀನಿವಾಸ್ ಮಾತನಾಡಿ, ವಿಶ್ವದಲ್ಲೇ ಪರಮಾಣು ಶಕ್ತಿ ಹೊಂದಿದ ಕೆಲವೇ ಕೆಲವು ದೇಶಗಳಲ್ಲಿ ಭಾರತವು ಒಂದಾಗಿದೆ. ಇತ್ತೀಚಿನ ವರ್ಷಗಳಲ್ಲಿ ಮೂಲಭೂತ ಸೌಕರ್ಯಗಳ ವಿಚಾರದಲ್ಲಿ ದೇಶ ಅಸಾಮಾನ್ಯ ಸಾಧನೆ ಮಾಡಿದೆ. ಯುವ ಸಮುದಾಯ ಕೂಡ ದೇಶದ ಅಭಿವೃದ್ಧಿಯಲ್ಲಿ ಭಾಗವಾಗಿ ದೇಶವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸಲು ಪ್ರಯತ್ನಿಸಬೇಕು. ಪ್ರತಿಯೊಬ್ಬರು ಸ್ವಾತಂತ್ರ್ಯ ಹೋರಾಟಗಾರನ್ನು ಸ್ಮರಿಸಿ ಸಡಗರ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಬೇಕು ಎಂದರು.
ತಾ.ಪಂ ಇಒ ಮುನಿರಾಜು ಮಾತನಾಡಿ, ನನ್ನ ಮಣ್ಣು ನನ್ನ ದೇಶದ ಅಭಿಯಾನದ ಭಾಗವಾಗಿ ಪ್ರತಿಯೊಂದು ಗ್ರಾ.ಪಂಚಾಯಿತಿಯಿಂದಲೂ ಪವಿತ್ರವಾದ ಮಣ್ಣನ್ನಯ ಸಂಗ್ರಹಿಸಲಾಗುತ್ತಿದೆ. ಇದನ್ನು ದೆಹಲಿಗೆ ತಲುಪಿಸುವಂತ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ರಂಗಕಲೆಯ ಕೋಡಿಹಳ್ಳಿಯ ಮಾಲೂರಪ್ಪ , ಸಾಮಾಜಿಕ ಸೇವೆ ವಿಭಾಗದಲ್ಲಿ ರವಿ ಮಾವಿನಕುಂಟೆ, ಕ್ಷಯ ರೋಗಿ ದತ್ತು ಪಡೆದು ಅವರಿಗೆ ನೆರವಾದ ಶ್ರೀನಿವಾಸ ಮೂರ್ತಿ.ಎಲ್ , ಹರಿಕಥೆ ವಿಭಾಗದಲ್ಲಿ ರಾಮಮೂರ್ತಿ ಡಿ.ಆರ್ , ಜಾನಪದ ಕಲೆಯ ಜೆ.ವಿ ಸುಬ್ರಮಣ್ಯ, ಟೇಕ್ವಾಂಡೋ ವಿಭಾಗದಲ್ಲಿ ಯಶವಂತ್. ಎನ್ ಅವರಿಗೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿ ಜೈಲು ಶಿಕ್ಷೆ ಅನುಭವಿಸಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ಸಿ ನಾರಾಯಣಸ್ವಾಮಿಗೆ ವಿಶೇಷ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ವಿಭಾ ರಾಠೋಡ್, ಇಓ ಮುನಿರಾಜು, ನಗರಸಭೆ ಅಧ್ಯಕ್ಷೆ ಸುಧಾರಣಿ ಲಕ್ಷ್ಮೀನಾರಾಯಣ, ಉಪಾಧ್ಯಕ್ಷೆ ಫರ್ಹಾನ್ ತಾಜ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ್, ಟಿಎಪಿಎಂಸಿಎಸ್ ಅಧ್ಯಕ್ಷ ಆಂಜನೇಗೌಡ, ಪೌರಾಯುಕ್ತ ಶಿವಶಂಕರ್, ನಗರಸಭೆ ಸದಸ್ಯರಾದ ತ.ನ ಪ್ರಭುದೇವ, ವೆಂಕಟೇಶ್, ರವಿ, ಆರ್ ಆನಂದ್ ಮೂರ್ತಿ ಸೇರಿದಂತೆ ಅನೇಕರು ಹಾಜರಿದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…