ಭಗತ್ ಸಿಂಗ್ ಮೈದಾನದಲ್ಲಿ ಸೆ. 27 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

2023-24ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಸೆ. 27 ಹಾಗೂ ಸೆ.28ರಂದು ಆಯೋಜಿಸಲಾಗುತ್ತಿದ್ದು, ಈಗಾಗಲೇ ದಿನಾಂಕ 21 ಮತ್ತು 22 ಸೆಪ್ಟೆಂಬರ್ 2023 ರಂದು ನಡೆದ 4 ತಾಲ್ಲೂಕಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು/ ಕ್ರೀಡಾಪಟುಗಳು  ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.

ಆದ್ದರಿಂದ ದಿನಾಂಕ 27.09.2023 ರಂದು ಭಗತ್‌ಸಿಂಗ್ ಕ್ರೀಡಾಂಗಣ ದೊಡ್ಡಬಳ್ಳಾಪುರದಲ್ಲಿ ಬೆಳಿಗ್ಗೆ 9.00 ಗಂಟೆಗೆ ಆಧಾರ್ ಕಾರ್ಡ್ ಮತ್ತು ಪಾಸ್ ಪೋರ್ಟ್ ಅಳತೆಯ ಭಾವ ಚಿತ್ರದೊಂದಿಗೆ  ಎಂ ಪ್ರಭು, ಅಥ್ಲೆಟಿಕ್ ತರಬೇತುದಾರರು 9945029942 ರವರಲ್ಲಿ ವರದಿ ಮಾಡಿಕೊಂಡು ನೋಂದಣಿ ಮಾಡಿಕೊಳ್ಳುವುದು.

ಆಯೋಜಿಸಲಾಗುವ ಕ್ರೀಡೆಗಳ ವಿವರ

ಅಥ್ಲೆಟಿಕ್ಸ್ – ಪುರುಷ ಮತ್ತು ಮಹಿಳೆಯರಿಗೆ, ವಾಲಿಬಾಲ್ – ಪುರುಷ ಮತ್ತು ಮಹಿಳೆಯರಿಗೆ, ಪುಟ್ಬಾಲ್ – ಪುರುಷರಿಗೆ,

ಖೋ ಖೋ – ಪುರುಷ ಮತ್ತು ಮಹಿಳೆಯರಿಗೆ, ಕಬಡ್ಡಿ – ಪುರುಷ ಮತ್ತು ಮಹಿಳೆಯರಿಗೆ,

ಥ್ರೋಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಬ್ಯಾಸ್ಕೆಟ್‌ಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಹಾಕಿ – ಪುರುಷ ಮತ್ತು ಮಹಿಳೆಯರಿಗೆ,

ಹ್ಯಾಂಡ್‌ಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಟೇಬಲ್ ಟೆನ್ನಿಸ್ – ಪುರುಷ ಮತ್ತು ಮಹಿಳೆಯರಿಗೆ,

ಬಾಲ್ ಬ್ಯಾಡ್ಮಿಂಟನ್ – ಪುರುಷ ಮತ್ತು ಮಹಿಳೆಯರಿಗೆ,

ಕುಸ್ತಿ – ಪುರುಷ ಮತ್ತು ಮಹಿಳೆಯರಿಗೆ,

ಯೋಗ -‌ಪುರುಷ ಮತ್ತು ಮಹಿಳೆಯರಿಗೆ,

ಬ್ಯಾಡ್ಮಿಂಟನ್ – ಪುರುಷ ಮತ್ತು ಮಹಿಳೆಯರಿಗೆ,

ನೆಟ್‌ಬಾಲ್ – ಪುರುಷ ಮತ್ತು ಮಹಿಳೆಯರಿಗೆ.

ಟೆನ್ನಿಸ್ – ಪುರುಷ ಮತ್ತು ಮಹಿಳೆಯರಿಗೆ,

ಈಜು – ಪುರುಷ ಮತ್ತು ಮಹಿಳೆಯರಿಗೆ,

  ಷರತ್ತು ಮತ್ತು ನಿಬಂಧನೆಗಳು

ಜಿಲ್ಲಾ ಮಟ್ಟದಲ್ಲಿ ನಡೆದ ಕ್ರೀಡೆಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಜಿಲ್ಲಾ ಮಟ್ಟದಲ್ಲಿ ನಡೆದ ಕ್ರೀಡೆಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ವಿಭಾಗ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ‌.

ಕ್ರೀಡಾಕೂಟದಲ್ಲಿ ರಕ್ಷಣಾಪಡೆ, ಅರೆರಕ್ಷಣಾಪಡೆ ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅವಕಾಶವಿರುವುದಿಲ್ಲ. ಒಬ್ಬ ಕ್ರೀಡಾಪಟು ಅಥವಾ ತಂಡ ಯಾವುದೇ ಜಿಲ್ಲೆಯಲ್ಲಿ ಒಂದು ಬಾರಿ ತಾಲ್ಲೂಕು ಅಥವಾ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ನಂತರ ಬೇರೆ ಯಾವುದೇ ಜಿಲ್ಲೆಯ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.  ಅಂತಹ ಪ್ರಕರಣವೇನಾದರೂ ದಾಖಲಾದಲ್ಲಿ ಅಥವಾ ಗಮನಕ್ಕೆ ಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು.

ಒಬ್ಬ ಕ್ರೀಡಾಪಟು 3 ಸ್ಪರ್ಧೆಯಲ್ಲಿ ಮಾತ್ರ (ರಿಲೇ ಸಹಿತ) ಭಾಗವಹಿಸಲು ಅವಕಾಶವಿರುತ್ತದೆ. (ಒಂದು ಟ್ರಾಕ್ ಅಥವಾ 2 ಫೀಲ್ಡ್ / ಒಂದು ಫೀಲ್ಡ್ ಅಥವಾ 2 ಟ್ರಾಕ್ ಈವೆಂಟ್‌ಗಳಲ್ಲಿ ಭಾಗವಹಿಸಲು ಮಾತ್ರ ಅವಕಾಶವಿರುತ್ತದೆ) ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ. ಅದಕ್ಕೆ ಕ್ರೀಡಾಪಟುಗಳು ಬದ್ಧರಾಗಿರುವುದು. ತೀರ್ಪುಗಾರರ ತೀರ್ಮಾನದ ವಿರುದ್ಧ ಯಾವುದೇ ಕ್ರೀಡಾಪಟುಗಳು ಅಶಿಸ್ತಿನಿಂದ ವರ್ತಿಸಿದಲ್ಲಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.

ಕ್ರೀಡಾಕೂಟದ ಸಮಯದಲ್ಲಿ ಕ್ರೀಡಾಪಟುಗಳು ಶಿಸ್ತಿನಿಂದ ವರ್ತಿಸುವುದು. ಯಾವುದೇ ಕ್ರೀಡಾಪಟು ಅಶಿಸ್ತಿನಿಂದ ಅಥವಾ ಯಾವುದೇ ಅಹಿತಕರ ಘಟನೆಯಲ್ಲಿ ಭಾಗಿಯಾದಲ್ಲಿ ಅಂತಹವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.

ಭಾಗವಹಿಸುವ ಕ್ರೀಡಾಪಟುಗಳು ಕಡ್ಡಾಯವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯವರೇ ಆಗಿರಬೇಕು, ಜಿಲ್ಲಾ  ಮಟ್ಟದ ದಸರಾ ಕ್ರೀಡಾಕೂಟದ ಸಂದರ್ಭದಲ್ಲಿ ಸ್ಥಳೀಯ ತಾಲ್ಲೂಕಿನ ಆಧಾರ್‌ಕಾರ್ಡ್ ಅನ್ನು ಹಾಜರು ಪಡಿಸಬೇಕು ಹಾಗೂ ವಿದ್ಯಾರ್ಥಿಯಾಗಿದ್ದಲ್ಲಿ ಶಾಲಾ/ ಕಾಲೇಜು ಗುರುತಿನ ಚೀಟಿಯನ್ನು ಹಾಜರು ಪಡಿಸಬೇಕು.

ಹೆಚ್ಚಿನ ಮಾಹಿತಿಗಾಗಿ 080-29787443 / 9980590960 ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

15 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

24 hours ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

1 day ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago

ಜು.25ರಂದು ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…

2 days ago

ಆಕ್ರೋಶ, ಅರಾಜಕತೆ ಮತ್ತು ಮಾಧ್ಯಮಗಳು…..

ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…

2 days ago