ಭಗತ್ ಸಿಂಗ್ ಮೈದಾನದಲ್ಲಿ ಸೆ. 27 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

2023-24ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಸೆ. 27 ಹಾಗೂ ಸೆ.28ರಂದು ಆಯೋಜಿಸಲಾಗುತ್ತಿದ್ದು, ಈಗಾಗಲೇ ದಿನಾಂಕ 21 ಮತ್ತು 22 ಸೆಪ್ಟೆಂಬರ್ 2023 ರಂದು ನಡೆದ 4 ತಾಲ್ಲೂಕಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು/ ಕ್ರೀಡಾಪಟುಗಳು  ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.

ಆದ್ದರಿಂದ ದಿನಾಂಕ 27.09.2023 ರಂದು ಭಗತ್‌ಸಿಂಗ್ ಕ್ರೀಡಾಂಗಣ ದೊಡ್ಡಬಳ್ಳಾಪುರದಲ್ಲಿ ಬೆಳಿಗ್ಗೆ 9.00 ಗಂಟೆಗೆ ಆಧಾರ್ ಕಾರ್ಡ್ ಮತ್ತು ಪಾಸ್ ಪೋರ್ಟ್ ಅಳತೆಯ ಭಾವ ಚಿತ್ರದೊಂದಿಗೆ  ಎಂ ಪ್ರಭು, ಅಥ್ಲೆಟಿಕ್ ತರಬೇತುದಾರರು 9945029942 ರವರಲ್ಲಿ ವರದಿ ಮಾಡಿಕೊಂಡು ನೋಂದಣಿ ಮಾಡಿಕೊಳ್ಳುವುದು.

ಆಯೋಜಿಸಲಾಗುವ ಕ್ರೀಡೆಗಳ ವಿವರ

ಅಥ್ಲೆಟಿಕ್ಸ್ – ಪುರುಷ ಮತ್ತು ಮಹಿಳೆಯರಿಗೆ, ವಾಲಿಬಾಲ್ – ಪುರುಷ ಮತ್ತು ಮಹಿಳೆಯರಿಗೆ, ಪುಟ್ಬಾಲ್ – ಪುರುಷರಿಗೆ,

ಖೋ ಖೋ – ಪುರುಷ ಮತ್ತು ಮಹಿಳೆಯರಿಗೆ, ಕಬಡ್ಡಿ – ಪುರುಷ ಮತ್ತು ಮಹಿಳೆಯರಿಗೆ,

ಥ್ರೋಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಬ್ಯಾಸ್ಕೆಟ್‌ಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಹಾಕಿ – ಪುರುಷ ಮತ್ತು ಮಹಿಳೆಯರಿಗೆ,

ಹ್ಯಾಂಡ್‌ಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಟೇಬಲ್ ಟೆನ್ನಿಸ್ – ಪುರುಷ ಮತ್ತು ಮಹಿಳೆಯರಿಗೆ,

ಬಾಲ್ ಬ್ಯಾಡ್ಮಿಂಟನ್ – ಪುರುಷ ಮತ್ತು ಮಹಿಳೆಯರಿಗೆ,

ಕುಸ್ತಿ – ಪುರುಷ ಮತ್ತು ಮಹಿಳೆಯರಿಗೆ,

ಯೋಗ -‌ಪುರುಷ ಮತ್ತು ಮಹಿಳೆಯರಿಗೆ,

ಬ್ಯಾಡ್ಮಿಂಟನ್ – ಪುರುಷ ಮತ್ತು ಮಹಿಳೆಯರಿಗೆ,

ನೆಟ್‌ಬಾಲ್ – ಪುರುಷ ಮತ್ತು ಮಹಿಳೆಯರಿಗೆ.

ಟೆನ್ನಿಸ್ – ಪುರುಷ ಮತ್ತು ಮಹಿಳೆಯರಿಗೆ,

ಈಜು – ಪುರುಷ ಮತ್ತು ಮಹಿಳೆಯರಿಗೆ,

  ಷರತ್ತು ಮತ್ತು ನಿಬಂಧನೆಗಳು

ಜಿಲ್ಲಾ ಮಟ್ಟದಲ್ಲಿ ನಡೆದ ಕ್ರೀಡೆಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಜಿಲ್ಲಾ ಮಟ್ಟದಲ್ಲಿ ನಡೆದ ಕ್ರೀಡೆಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ವಿಭಾಗ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ‌.

ಕ್ರೀಡಾಕೂಟದಲ್ಲಿ ರಕ್ಷಣಾಪಡೆ, ಅರೆರಕ್ಷಣಾಪಡೆ ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅವಕಾಶವಿರುವುದಿಲ್ಲ. ಒಬ್ಬ ಕ್ರೀಡಾಪಟು ಅಥವಾ ತಂಡ ಯಾವುದೇ ಜಿಲ್ಲೆಯಲ್ಲಿ ಒಂದು ಬಾರಿ ತಾಲ್ಲೂಕು ಅಥವಾ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ನಂತರ ಬೇರೆ ಯಾವುದೇ ಜಿಲ್ಲೆಯ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.  ಅಂತಹ ಪ್ರಕರಣವೇನಾದರೂ ದಾಖಲಾದಲ್ಲಿ ಅಥವಾ ಗಮನಕ್ಕೆ ಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು.

ಒಬ್ಬ ಕ್ರೀಡಾಪಟು 3 ಸ್ಪರ್ಧೆಯಲ್ಲಿ ಮಾತ್ರ (ರಿಲೇ ಸಹಿತ) ಭಾಗವಹಿಸಲು ಅವಕಾಶವಿರುತ್ತದೆ. (ಒಂದು ಟ್ರಾಕ್ ಅಥವಾ 2 ಫೀಲ್ಡ್ / ಒಂದು ಫೀಲ್ಡ್ ಅಥವಾ 2 ಟ್ರಾಕ್ ಈವೆಂಟ್‌ಗಳಲ್ಲಿ ಭಾಗವಹಿಸಲು ಮಾತ್ರ ಅವಕಾಶವಿರುತ್ತದೆ) ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ. ಅದಕ್ಕೆ ಕ್ರೀಡಾಪಟುಗಳು ಬದ್ಧರಾಗಿರುವುದು. ತೀರ್ಪುಗಾರರ ತೀರ್ಮಾನದ ವಿರುದ್ಧ ಯಾವುದೇ ಕ್ರೀಡಾಪಟುಗಳು ಅಶಿಸ್ತಿನಿಂದ ವರ್ತಿಸಿದಲ್ಲಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.

ಕ್ರೀಡಾಕೂಟದ ಸಮಯದಲ್ಲಿ ಕ್ರೀಡಾಪಟುಗಳು ಶಿಸ್ತಿನಿಂದ ವರ್ತಿಸುವುದು. ಯಾವುದೇ ಕ್ರೀಡಾಪಟು ಅಶಿಸ್ತಿನಿಂದ ಅಥವಾ ಯಾವುದೇ ಅಹಿತಕರ ಘಟನೆಯಲ್ಲಿ ಭಾಗಿಯಾದಲ್ಲಿ ಅಂತಹವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.

ಭಾಗವಹಿಸುವ ಕ್ರೀಡಾಪಟುಗಳು ಕಡ್ಡಾಯವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯವರೇ ಆಗಿರಬೇಕು, ಜಿಲ್ಲಾ  ಮಟ್ಟದ ದಸರಾ ಕ್ರೀಡಾಕೂಟದ ಸಂದರ್ಭದಲ್ಲಿ ಸ್ಥಳೀಯ ತಾಲ್ಲೂಕಿನ ಆಧಾರ್‌ಕಾರ್ಡ್ ಅನ್ನು ಹಾಜರು ಪಡಿಸಬೇಕು ಹಾಗೂ ವಿದ್ಯಾರ್ಥಿಯಾಗಿದ್ದಲ್ಲಿ ಶಾಲಾ/ ಕಾಲೇಜು ಗುರುತಿನ ಚೀಟಿಯನ್ನು ಹಾಜರು ಪಡಿಸಬೇಕು.

ಹೆಚ್ಚಿನ ಮಾಹಿತಿಗಾಗಿ 080-29787443 / 9980590960 ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

9 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

20 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

21 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

21 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

23 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago