ಭಜರಂಗದಳ ಸಂಘಟನೆ ಯಾವುದೇ ದೇಶ ವಿರೋಧಿ, ಭಯೋತ್ಪಾದಕ ಚಟುವಟಿಕೆ ಮಾಡಿಲ್ಲ, ಸಮಾಜ ಘಾತುಕ ಕಾರ್ಯದಲ್ಲಿ ತೊಡಗಿಕೊಂಡಿಲ್ಲ, ಕೇವಲ ಹಿಂದೂ ಪರವಾದ ಹೋರಾಟ, ಸಾಮಾಜಿಕ ಸಾಮರಸ್ಯ, ದೇಶ ಭಕ್ತಿ ಕಾಪಾಡುವ ಸಲುವಾಗಿ ಕೆಲಸ ಮಾಡಿಕೊಂಡು ಬಂದಿದೆ. ಇಂತಹ ಸಂಘಟನೆಯನ್ನು ನಿಷೇಧ ಮಾಡುವ ಭರವಸೆ ನೀಡಿರುವುದು ಖಂಡನೀಯ ಎಂದು ಭಜರಂಗದಳದ ಕೋಲಾರ ವಿಭಾಗದ ಸಂಯೋಜಕ ನರೇಶ್ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.
2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಾವು ಅಧಿಕಾರಕ್ಕೆ ಬಂದರೆ ಭಜರಂಗದಳವನ್ನು ನಿಷೇಧಿಸಲಾಗುವುದು ಎಂಬ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆಯನ್ನು ಖಂಡಿಸಿದ ಭಜರಂಗ ದಳದ ಮುಖಂಡರು ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ನಂತರ ಅವರು ಮಾತನಾಡಿದರು.
ಭಜರಂಗದಳವು ಯಾವುದೇ ಮತೀಯ ದ್ವೇಷ ಬಿತ್ತುತ್ತಿಲ್ಲ, ಪಿಎಫ್ಐ ಹಾಗೂ ಭಜರಂಗದಳ ಸಂಘಟನೆಯನ್ನು ಒಂದೇ ತಕ್ಕಡಿಯಲ್ಲಿ ಹಾಕಿ ನಿಷೇಧದ ಭರವಸೆಯನ್ನ ನೀಡಿದ್ದಾರೆ ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.
ಕಾಂಗ್ರೆಸ್ ಪಕ್ಷ ಚುನಾವಣೆ ಹಿನ್ನೆಲೆಯಲ್ಲಿ ಒಂದು ಸಮುದಾಯ ಓಲೈಕೆ ಮಾಡಲು ಈ ರೀತಿಯ ಘೋಷಣೆ ಮಾಡಿದೆ. ಹಿಂದೂಗಳನ್ನು ಕೆಣಕಿದರೆ ಏನಾಗಲಿದೆ ಎಂಬುದು ಗೋದ್ರಾ ಹತ್ಯಾಕಾಂಡ, ಬಾಬರಿ ಮಸೀದಿ ಧ್ವಂಸ ಪ್ರಕರಣ ನೋಡಿ ತಿಳಿಯಲಿ ಎಂದು ವಾಗ್ದಾಳಿ ನಡೆಸಿದರು.
ಪ್ರತಿಭಟನೆಯಲ್ಲಿ ಭಜರಂಗದಳ ಜಿಲ್ಲಾ ಉಪಾಧ್ಯಕ್ಷ ಮಹಾಲಿಂಗ, ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಮಧುಸೂದನ್ ಗೌಡ, ಕಾರ್ಯದರ್ಶಿ ರವಿಕುಮಾರ್, ಬಜರಂಗದಳ ತಾಲೂಕು ಸಂಯೋಜಕ ಗಂಗಾಧರ್ ಸೇರಿದಂತೆ ಜಿಲ್ಲಾ ಘಟಕ, ತಾಲೂಕು ಘಟಕದ ಪದಾಧಿಕಾರಿಗಳು ಹಾಜರಿದ್ದರು.
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…