ಭಜರಂಗದಳವನ್ನ ಕೆಣಕುವ ಮುನ್ನ ಗೋದ್ರಾ ಹತ್ಯಾಕಾಂಡ, ಬಾಬರಿ ಮಸೀದಿ ಧ್ವಂಸ ಪ್ರಕರಣ ನೆನಪಿಸಿಕೊಳ್ಳಿ- ಭಜರಂಗದಳದ ಕೋಲಾರ ವಿಭಾಗದ ಸಂಯೋಜಕ ನರೇಶ್ ರೆಡ್ಡಿ

ಭಜರಂಗದಳ ಸಂಘಟನೆ ಯಾವುದೇ ದೇಶ ವಿರೋಧಿ, ಭಯೋತ್ಪಾದಕ ಚಟುವಟಿಕೆ ಮಾಡಿಲ್ಲ, ಸಮಾಜ ಘಾತುಕ ಕಾರ್ಯದಲ್ಲಿ ತೊಡಗಿಕೊಂಡಿಲ್ಲ, ಕೇವಲ ಹಿಂದೂ ಪರವಾದ ಹೋರಾಟ, ಸಾಮಾಜಿಕ ಸಾಮರಸ್ಯ, ದೇಶ ಭಕ್ತಿ ಕಾಪಾಡುವ ಸಲುವಾಗಿ ಕೆಲಸ‌ ಮಾಡಿಕೊಂಡು ಬಂದಿದೆ. ಇಂತಹ ಸಂಘಟನೆಯನ್ನು ನಿಷೇಧ ಮಾಡುವ ಭರವಸೆ ನೀಡಿರುವುದು ಖಂಡನೀಯ ಎಂದು ಭಜರಂಗದಳದ ಕೋಲಾರ ವಿಭಾಗದ ಸಂಯೋಜಕ ನರೇಶ್ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಾವು ಅಧಿಕಾರಕ್ಕೆ ಬಂದರೆ ಭಜರಂಗದಳವನ್ನು ನಿಷೇಧಿಸಲಾಗುವುದು ಎಂಬ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆಯನ್ನು ಖಂಡಿಸಿದ ಭಜರಂಗ ದಳದ ಮುಖಂಡರು ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ನಂತರ ಅವರು ಮಾತನಾಡಿದರು.

ಭಜರಂಗದಳವು ಯಾವುದೇ ಮತೀಯ ದ್ವೇಷ ಬಿತ್ತುತ್ತಿಲ್ಲ, ಪಿಎಫ್ಐ ಹಾಗೂ ಭಜರಂಗದಳ ಸಂಘಟನೆಯನ್ನು ಒಂದೇ ತಕ್ಕಡಿಯಲ್ಲಿ ಹಾಕಿ ನಿಷೇಧದ ಭರವಸೆಯನ್ನ ನೀಡಿದ್ದಾರೆ ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ಕಾಂಗ್ರೆಸ್ ಪಕ್ಷವು ತತಕ್ಷಣದಲ್ಲಿ ಸಂಘಟನೆಗೆ ಕ್ಷಮೆ ಕೇಳಿ ಪ್ರಣಾಳಿಕೆನ್ನು ತಿದ್ದುಪಡಿ ಮಾಡಿ ಭಜರಂಗದಳ ನಿಷೇಧದ ಭರವಸೆಯನ್ನು ಕೈಬಿಡಬೇಕು, ಇಲ್ಲದಿದ್ದಲ್ಲಿ ಕಾಂಗ್ರೆಸ್ ಕಚೇರಿಗಳನ್ನು ಸುಟ್ಟು ಭಸ್ಮ ಮಾಡುತ್ತೇವೆ, ಕಾಂಗ್ರೆಸ್ ಕಚೇರಿಗಳು, ನಾಯಕರ ಮನೆಗಳ ಮೇಲೆ ಭಜರಂಗದಳ ಧ್ವಜ ಹಾರಿಸುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಪಕ್ಷ ಚುನಾವಣೆ ಹಿನ್ನೆಲೆಯಲ್ಲಿ ಒಂದು ಸಮುದಾಯ ಓಲೈಕೆ ಮಾಡಲು ಈ ರೀತಿಯ ಘೋಷಣೆ ಮಾಡಿದೆ. ಹಿಂದೂಗಳನ್ನು ಕೆಣಕಿದರೆ ಏನಾಗಲಿದೆ ಎಂಬುದು ಗೋದ್ರಾ ಹತ್ಯಾಕಾಂಡ, ಬಾಬರಿ ಮಸೀದಿ ಧ್ವಂಸ ಪ್ರಕರಣ ನೋಡಿ ತಿಳಿಯಲಿ ಎಂದು ವಾಗ್ದಾಳಿ ನಡೆಸಿದರು.

ಪ್ರತಿಭಟನೆಯಲ್ಲಿ ಭಜರಂಗದಳ ಜಿಲ್ಲಾ ಉಪಾಧ್ಯಕ್ಷ ಮಹಾಲಿಂಗ, ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಮಧುಸೂದನ್ ಗೌಡ, ಕಾರ್ಯದರ್ಶಿ ರವಿಕುಮಾರ್, ಬಜರಂಗದಳ ತಾಲೂಕು ಸಂಯೋಜಕ ಗಂಗಾಧರ್ ಸೇರಿದಂತೆ ಜಿಲ್ಲಾ ಘಟಕ, ತಾಲೂಕು ಘಟಕದ ಪದಾಧಿಕಾರಿಗಳು ಹಾಜರಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

16 minutes ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

4 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

11 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

12 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago