ಭಜರಂಗದಳವನ್ನ ಕೆಣಕುವ ಮುನ್ನ ಗೋದ್ರಾ ಹತ್ಯಾಕಾಂಡ, ಬಾಬರಿ ಮಸೀದಿ ಧ್ವಂಸ ಪ್ರಕರಣ ನೆನಪಿಸಿಕೊಳ್ಳಿ- ಭಜರಂಗದಳದ ಕೋಲಾರ ವಿಭಾಗದ ಸಂಯೋಜಕ ನರೇಶ್ ರೆಡ್ಡಿ

ಭಜರಂಗದಳ ಸಂಘಟನೆ ಯಾವುದೇ ದೇಶ ವಿರೋಧಿ, ಭಯೋತ್ಪಾದಕ ಚಟುವಟಿಕೆ ಮಾಡಿಲ್ಲ, ಸಮಾಜ ಘಾತುಕ ಕಾರ್ಯದಲ್ಲಿ ತೊಡಗಿಕೊಂಡಿಲ್ಲ, ಕೇವಲ ಹಿಂದೂ ಪರವಾದ ಹೋರಾಟ, ಸಾಮಾಜಿಕ ಸಾಮರಸ್ಯ, ದೇಶ ಭಕ್ತಿ ಕಾಪಾಡುವ ಸಲುವಾಗಿ ಕೆಲಸ‌ ಮಾಡಿಕೊಂಡು ಬಂದಿದೆ. ಇಂತಹ ಸಂಘಟನೆಯನ್ನು ನಿಷೇಧ ಮಾಡುವ ಭರವಸೆ ನೀಡಿರುವುದು ಖಂಡನೀಯ ಎಂದು ಭಜರಂಗದಳದ ಕೋಲಾರ ವಿಭಾಗದ ಸಂಯೋಜಕ ನರೇಶ್ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಾವು ಅಧಿಕಾರಕ್ಕೆ ಬಂದರೆ ಭಜರಂಗದಳವನ್ನು ನಿಷೇಧಿಸಲಾಗುವುದು ಎಂಬ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆಯನ್ನು ಖಂಡಿಸಿದ ಭಜರಂಗ ದಳದ ಮುಖಂಡರು ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ನಂತರ ಅವರು ಮಾತನಾಡಿದರು.

ಭಜರಂಗದಳವು ಯಾವುದೇ ಮತೀಯ ದ್ವೇಷ ಬಿತ್ತುತ್ತಿಲ್ಲ, ಪಿಎಫ್ಐ ಹಾಗೂ ಭಜರಂಗದಳ ಸಂಘಟನೆಯನ್ನು ಒಂದೇ ತಕ್ಕಡಿಯಲ್ಲಿ ಹಾಕಿ ನಿಷೇಧದ ಭರವಸೆಯನ್ನ ನೀಡಿದ್ದಾರೆ ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ಕಾಂಗ್ರೆಸ್ ಪಕ್ಷವು ತತಕ್ಷಣದಲ್ಲಿ ಸಂಘಟನೆಗೆ ಕ್ಷಮೆ ಕೇಳಿ ಪ್ರಣಾಳಿಕೆನ್ನು ತಿದ್ದುಪಡಿ ಮಾಡಿ ಭಜರಂಗದಳ ನಿಷೇಧದ ಭರವಸೆಯನ್ನು ಕೈಬಿಡಬೇಕು, ಇಲ್ಲದಿದ್ದಲ್ಲಿ ಕಾಂಗ್ರೆಸ್ ಕಚೇರಿಗಳನ್ನು ಸುಟ್ಟು ಭಸ್ಮ ಮಾಡುತ್ತೇವೆ, ಕಾಂಗ್ರೆಸ್ ಕಚೇರಿಗಳು, ನಾಯಕರ ಮನೆಗಳ ಮೇಲೆ ಭಜರಂಗದಳ ಧ್ವಜ ಹಾರಿಸುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಪಕ್ಷ ಚುನಾವಣೆ ಹಿನ್ನೆಲೆಯಲ್ಲಿ ಒಂದು ಸಮುದಾಯ ಓಲೈಕೆ ಮಾಡಲು ಈ ರೀತಿಯ ಘೋಷಣೆ ಮಾಡಿದೆ. ಹಿಂದೂಗಳನ್ನು ಕೆಣಕಿದರೆ ಏನಾಗಲಿದೆ ಎಂಬುದು ಗೋದ್ರಾ ಹತ್ಯಾಕಾಂಡ, ಬಾಬರಿ ಮಸೀದಿ ಧ್ವಂಸ ಪ್ರಕರಣ ನೋಡಿ ತಿಳಿಯಲಿ ಎಂದು ವಾಗ್ದಾಳಿ ನಡೆಸಿದರು.

ಪ್ರತಿಭಟನೆಯಲ್ಲಿ ಭಜರಂಗದಳ ಜಿಲ್ಲಾ ಉಪಾಧ್ಯಕ್ಷ ಮಹಾಲಿಂಗ, ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಮಧುಸೂದನ್ ಗೌಡ, ಕಾರ್ಯದರ್ಶಿ ರವಿಕುಮಾರ್, ಬಜರಂಗದಳ ತಾಲೂಕು ಸಂಯೋಜಕ ಗಂಗಾಧರ್ ಸೇರಿದಂತೆ ಜಿಲ್ಲಾ ಘಟಕ, ತಾಲೂಕು ಘಟಕದ ಪದಾಧಿಕಾರಿಗಳು ಹಾಜರಿದ್ದರು.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

2 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

6 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

7 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

8 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

9 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

12 hours ago