ಭಜರಂಗದಳ ಸಂಘಟನೆ ಯಾವುದೇ ದೇಶ ವಿರೋಧಿ, ಭಯೋತ್ಪಾದಕ ಚಟುವಟಿಕೆ ಮಾಡಿಲ್ಲ, ಸಮಾಜ ಘಾತುಕ ಕಾರ್ಯದಲ್ಲಿ ತೊಡಗಿಕೊಂಡಿಲ್ಲ, ಕೇವಲ ಹಿಂದೂ ಪರವಾದ ಹೋರಾಟ, ಸಾಮಾಜಿಕ ಸಾಮರಸ್ಯ, ದೇಶ ಭಕ್ತಿ ಕಾಪಾಡುವ ಸಲುವಾಗಿ ಕೆಲಸ ಮಾಡಿಕೊಂಡು ಬಂದಿದೆ. ಇಂತಹ ಸಂಘಟನೆಯನ್ನು ನಿಷೇಧ ಮಾಡುವ ಭರವಸೆ ನೀಡಿರುವುದು ಖಂಡನೀಯ ಎಂದು ಭಜರಂಗದಳದ ಕೋಲಾರ ವಿಭಾಗದ ಸಂಯೋಜಕ ನರೇಶ್ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.
2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಾವು ಅಧಿಕಾರಕ್ಕೆ ಬಂದರೆ ಭಜರಂಗದಳವನ್ನು ನಿಷೇಧಿಸಲಾಗುವುದು ಎಂಬ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆಯನ್ನು ಖಂಡಿಸಿದ ಭಜರಂಗ ದಳದ ಮುಖಂಡರು ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ನಂತರ ಅವರು ಮಾತನಾಡಿದರು.
ಭಜರಂಗದಳವು ಯಾವುದೇ ಮತೀಯ ದ್ವೇಷ ಬಿತ್ತುತ್ತಿಲ್ಲ, ಪಿಎಫ್ಐ ಹಾಗೂ ಭಜರಂಗದಳ ಸಂಘಟನೆಯನ್ನು ಒಂದೇ ತಕ್ಕಡಿಯಲ್ಲಿ ಹಾಕಿ ನಿಷೇಧದ ಭರವಸೆಯನ್ನ ನೀಡಿದ್ದಾರೆ ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.
ಕಾಂಗ್ರೆಸ್ ಪಕ್ಷ ಚುನಾವಣೆ ಹಿನ್ನೆಲೆಯಲ್ಲಿ ಒಂದು ಸಮುದಾಯ ಓಲೈಕೆ ಮಾಡಲು ಈ ರೀತಿಯ ಘೋಷಣೆ ಮಾಡಿದೆ. ಹಿಂದೂಗಳನ್ನು ಕೆಣಕಿದರೆ ಏನಾಗಲಿದೆ ಎಂಬುದು ಗೋದ್ರಾ ಹತ್ಯಾಕಾಂಡ, ಬಾಬರಿ ಮಸೀದಿ ಧ್ವಂಸ ಪ್ರಕರಣ ನೋಡಿ ತಿಳಿಯಲಿ ಎಂದು ವಾಗ್ದಾಳಿ ನಡೆಸಿದರು.
ಪ್ರತಿಭಟನೆಯಲ್ಲಿ ಭಜರಂಗದಳ ಜಿಲ್ಲಾ ಉಪಾಧ್ಯಕ್ಷ ಮಹಾಲಿಂಗ, ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಮಧುಸೂದನ್ ಗೌಡ, ಕಾರ್ಯದರ್ಶಿ ರವಿಕುಮಾರ್, ಬಜರಂಗದಳ ತಾಲೂಕು ಸಂಯೋಜಕ ಗಂಗಾಧರ್ ಸೇರಿದಂತೆ ಜಿಲ್ಲಾ ಘಟಕ, ತಾಲೂಕು ಘಟಕದ ಪದಾಧಿಕಾರಿಗಳು ಹಾಜರಿದ್ದರು.
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…