ಭಜರಂಗದಳ ಸಂಘಟನೆ ಯಾವುದೇ ದೇಶ ವಿರೋಧಿ, ಭಯೋತ್ಪಾದಕ ಚಟುವಟಿಕೆ ಮಾಡಿಲ್ಲ, ಸಮಾಜ ಘಾತುಕ ಕಾರ್ಯದಲ್ಲಿ ತೊಡಗಿಕೊಂಡಿಲ್ಲ, ಕೇವಲ ಹಿಂದೂ ಪರವಾದ ಹೋರಾಟ, ಸಾಮಾಜಿಕ ಸಾಮರಸ್ಯ, ದೇಶ ಭಕ್ತಿ ಕಾಪಾಡುವ ಸಲುವಾಗಿ ಕೆಲಸ ಮಾಡಿಕೊಂಡು ಬಂದಿದೆ. ಇಂತಹ ಸಂಘಟನೆಯನ್ನು ನಿಷೇಧ ಮಾಡುವ ಭರವಸೆ ನೀಡಿರುವುದು ಖಂಡನೀಯ ಎಂದು ಭಜರಂಗದಳದ ಕೋಲಾರ ವಿಭಾಗದ ಸಂಯೋಜಕ ನರೇಶ್ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.
2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಾವು ಅಧಿಕಾರಕ್ಕೆ ಬಂದರೆ ಭಜರಂಗದಳವನ್ನು ನಿಷೇಧಿಸಲಾಗುವುದು ಎಂಬ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆಯನ್ನು ಖಂಡಿಸಿದ ಭಜರಂಗ ದಳದ ಮುಖಂಡರು ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ನಂತರ ಅವರು ಮಾತನಾಡಿದರು.
ಭಜರಂಗದಳವು ಯಾವುದೇ ಮತೀಯ ದ್ವೇಷ ಬಿತ್ತುತ್ತಿಲ್ಲ, ಪಿಎಫ್ಐ ಹಾಗೂ ಭಜರಂಗದಳ ಸಂಘಟನೆಯನ್ನು ಒಂದೇ ತಕ್ಕಡಿಯಲ್ಲಿ ಹಾಕಿ ನಿಷೇಧದ ಭರವಸೆಯನ್ನ ನೀಡಿದ್ದಾರೆ ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.
ಕಾಂಗ್ರೆಸ್ ಪಕ್ಷ ಚುನಾವಣೆ ಹಿನ್ನೆಲೆಯಲ್ಲಿ ಒಂದು ಸಮುದಾಯ ಓಲೈಕೆ ಮಾಡಲು ಈ ರೀತಿಯ ಘೋಷಣೆ ಮಾಡಿದೆ. ಹಿಂದೂಗಳನ್ನು ಕೆಣಕಿದರೆ ಏನಾಗಲಿದೆ ಎಂಬುದು ಗೋದ್ರಾ ಹತ್ಯಾಕಾಂಡ, ಬಾಬರಿ ಮಸೀದಿ ಧ್ವಂಸ ಪ್ರಕರಣ ನೋಡಿ ತಿಳಿಯಲಿ ಎಂದು ವಾಗ್ದಾಳಿ ನಡೆಸಿದರು.
ಪ್ರತಿಭಟನೆಯಲ್ಲಿ ಭಜರಂಗದಳ ಜಿಲ್ಲಾ ಉಪಾಧ್ಯಕ್ಷ ಮಹಾಲಿಂಗ, ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಮಧುಸೂದನ್ ಗೌಡ, ಕಾರ್ಯದರ್ಶಿ ರವಿಕುಮಾರ್, ಬಜರಂಗದಳ ತಾಲೂಕು ಸಂಯೋಜಕ ಗಂಗಾಧರ್ ಸೇರಿದಂತೆ ಜಿಲ್ಲಾ ಘಟಕ, ತಾಲೂಕು ಘಟಕದ ಪದಾಧಿಕಾರಿಗಳು ಹಾಜರಿದ್ದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…