ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಕಾರು ಭದ್ರತಾ ಸಿಬ್ಬಂದಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಪಾದಚಾರಿ ಗೋಪಿ (38) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹೈದರಾಬಾದ್ ನ್ ಜೀಡಿಮೆಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಗಾಜುಲ ರಾಮರಾಮ್ ಎಂಬಲ್ಲಿ ಘಟನೆ ನಡೆದಿದೆ.
ಕಾರು ಚಾಲಕ ಮದ್ಯದ ಅಮಲಿನಲ್ಲಿದ್ದ ಎಂಬ ಶಂಕೆ ವ್ಯಕ್ತವಾಗಿದೆ. ಅಪಘಾತದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿವೆ.
ಮೃತ ಪಾದಚಾರಿ ಗೋಪಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.