ಮೊಹಾಲಿ : ಆರ್ ಸಿಬಿಯ ತಾರ ಬೌಲರ್ ಮೊಹಮ್ಮದ್ ಸಿರಾಜ್ ತೋರಿದ ಉತ್ತಮ ಬೌಲಿಂಗ್ ಹಾಗೂ ಎರಡು ವರ್ಷಗಳ ನಂತರ ಮತ್ತೊಮ್ಮೆ ಆರ್ ಸಿಬಿ ತಂಡದ ನಾಯಕತ್ವ ವಹಿಸಿದ ವಿರಾಟ್ ಕೊಹ್ಲಿ ಪಡೆ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ 24 ರನ್ ಗಳ ಭರ್ಜರಿ ಜಯ ಸಾಧಿಸಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಉತ್ತಮ ಆರಂಭ ಪಡೆಯಿತು, ನಾಯಕ ಫಾಫ್ ಡು ಪ್ಲೆಸಿಸ್ ಗಾಯದ ಕಾರಣ ಇಂಪ್ಯಾಕ್ಟ್ ಆಟಗಾರನಾಗಿ ವಿರಾಟ್ ಜೊತೆ ತಂಡಕ್ಕೆ ಉತ್ತಮ ಜೊತೆಯಾಟ ನೀಡಿದರು, ಮೊದಲನೇ ವಿಕೆಟ್ ಗೆ 137 ರನ್ ಗಳನ್ನು ಪೇರಿಸಿದ ಈ ಜೋಡಿ ಪವರ್ ಪ್ಲೇ ನಲ್ಲಿ ಪಂಜಾಬ್ ತಂಡದ ಬೌಲರ್ ಗಳನ್ನ ಬೆಂಡೆತ್ತಿದ ಇವರು ಆರು ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 59 ರನ್ ಗಳನ್ನು ಪೇರಿಸಿದರು.
ಸಂಘಟಿತ ಹೋರಾಟ ನಡೆಸಿದ ಡು ಪ್ಲೆಸಿಸ್ 56 ಬಾಲ್ ಗಳಲ್ಲಿ (84) ರನ್ ಗಳಿಸಿದರು, ಇದರಲ್ಲಿ 5 ಸಿಕ್ಸ್ ಹಾಗೂ 5 ಫೋರ್ ಕೂಡ ಇದ್ದವು, ಇವರ ನಂತರ ಬಂದ ಬ್ಯಾಟರ್ ಗಳಿಂದ ಯಾವುದೇ ದೊಡ್ಡ ಮೊತ್ತ ಕಲೆಹಾಕಲು ಸಾಧ್ಯವಾಗಲಿಲ್ಲ, ಆರ್ ಸಿ ಬಿ 20 ಓವರ್ ಗಳ ಅಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 174 ಗಳಿಸಲಸ್ಟೆ ಸಾಧ್ಯವಾಯಿತು.
ಸ್ಪರ್ಧಾತ್ಮಕ ಮೊತ್ತ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಗೆ ಆರ್ ಸಿ ಬಿ ಬೌಲರ್ ಗಳು ಶಾಕ್ ನೀಡಿದರು, ಮೊದಲ ಓವರ್ ನಲ್ಲೆ ಮಧ್ಯಮ ವೇಗಿ ಸಿರಾಜ್ ಎಸೆತಕ್ಕೆ ಎಲ್ ಬಿ ಡಬ್ಲ್ಯೂ ಬಲೆಗೆ ಸಿಕ್ಕ ಅಥರ್ವ ಥೈಡೆ ಬಹು ಬೇಗ ವಿಕೆಟ್ ಒಪ್ಪಿಸಿದರು. ನಂತರದ 3 ನೇ ಓವರ್ ನಲ್ಲಿ ವನಿಂದು ಹಸರಂಗರ ಗೂಗ್ಲಿ ಎದುರಿಸಲು ಸಾಧ್ಯವಾಗದೆ ಮ್ಯಾಥ್ಯೂ ಶಾರ್ಟ್ ಕೂಡ ವಿಕೆಟ್ ಒಪ್ಪಿಸಿದರು.
ಬಹು ನಿರೀಕ್ಷಿತ ಆಟಗಾರ ಲಿವಿಂಗ್ ಸ್ಟೋನ್ ರ ಸ್ಫೋಟಕ ಆಟಕ್ಕೆ ಸಿರಾಜ್ ಎಲ್ ಬಿ ಡಬ್ಲ್ಯೂ ಮೂಲಕ ಕಟ್ಟಿಹಾಕಿದರು. ಒಂದೆಡೆ ವಿಕೆಟ್ ಬೀಳುತ್ತಿದ್ದರೂ ಸಂಘಟಿತ ಆಟವಾಡಿದ ಪಂಜಾಬ್ ನ ಸ್ಥಳೀಯ ಆಟಗಾರ ಪ್ರಭಸಿಮ್ರಾನ್ (46) ರನ್ ಗಳನ್ನೂ ಪರಿಸಿದರು. ಇದರಲ್ಲಿ 3 ಫೋರ್ ಹಾಗೂ 4 ಭರ್ಜರಿ ಸಿಕ್ಸರ್ ಗಳೂ ಕೂಡ ಇದ್ದವು.
ನಾಯಕ ಸ್ಯಾಮ್ ಕರನ್ ಹಾಗೂ ಶಾರುಕ್ ಖಾನ್ ಕಡೆಯಿಂದ ಉತ್ತಮ ಮೊತ್ತ ಕೂಡಿ ಬರಲು ಸಾಧ್ಯವಾಗಲಿಲ್ಲ. ಆದರೆ ಪಂಜಾಬ್ ನ ವಿಕೆಟ್ ಕೀಪರ್ ಜೀತೆಂದ್ರ ಶರ್ಮಾರ ದಿಟ್ಟ ಹೋರಾಟ ಗೆಲುವಿನತ್ತ ಕೊಂಡೊ ಯ್ಯುವಂತಿತ್ತು. ತಾವು ಎದುರಿಸಿದ 27 ಎಸೆತಗಳಲ್ಲಿ 2 ಫೋರ್ 3 ಸಿಕ್ಸರ್ ಸಮೇತ (41) ರನ್ ಗಳಿಸಿ ಹರ್ಷಲ್ ಪಟೇಲ್ ರ ಎಸೆತದಲ್ಲಿ ಶಹಾಬಾದ್ ಗೆ ಸುಲಭ ಕ್ಯಾಚ್ ನೀಡುವ ಮೂಲಕ ಪಂಜಾಬ್ ಕಿಂಗ್ಸ್ ತಂಡದ ಹೋರಾಟಕ್ಕೆ ಮುಕ್ತಾಯ ಬರೆದರು.
18.2 ಓವರ್ ಗಳಲ್ಲಿ ಕೇವಲ 150 ರನ್ ಗಳಷ್ಟೇ ಗಳಿದ ಪಂಜಾಬ್ 24 ರನ್ ಗಳ ಅಂತರದಿಂದ ಸೋಲನ್ನು ಅನುಭವಿಸಿದರು, ಸಿರಾಜ್ ತಮ್ಮ ಉತ್ತಮ ಬೌಲಿಂಗ್ ಅನ್ನು ಈ ಪಂದ್ಯದಲ್ಲೂ ಮುಂದುವರಿಸಿದರು, 4 ಓವರ್ ಗಳಲ್ಲಿ ಕೇವಲ 21 ರನ್ ಗಳನ್ನಸ್ಟೆ ಬಿಟ್ಟು ಕೊಟ್ಟು 4 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
ಇವರಿಗೆ ಸಾಥ್ ನೀಡಿದ ಹಸರಂಗ 2 ವಿಕೆಟ್ ಹಾಗೂ ಹರ್ಷಲ್ ಪಟೇಲ್ 1 ವಿಕೆಟ್ ಪಡೆದು ಆರ್ ಸಿ ಬಿ ಗೆಲುವಿನ ರುವಾರಿಯಾದರು. ಪಂದ್ಯದಲ್ಲಿ 2 ಆಕರ್ಷಕ ರನ್ ಔಟ್ ಕೂಡ ಮೂಡಿಬಂದವು. ಅತ್ಯುತ್ತಮವಾಗಿ ಬೌಲಿಂಗ್ ಪ್ರದರ್ಶನ ನೀಡಿದ ಮೊಹಮ್ಮದ್ ಸಿರಾಜ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…