ಭವಿಷ್ಯದ ದಿನಗಳು ಆರಾಮದಾಯಕವಾಗಿರ ಬೇಕು, ಅದನ್ನ ಸರಳವಾಗಿಸುವುದು ಇಂದು ನಾವು ಮಾಡಿಸುವ ವಿಮೆಗಳು, ಹೌದು ರಿಲಯನ್ಸ್ ಜನರಲ್ ಇನ್ಯೂರೆನ್ಸ್ ನವರು ವಿಮೆ ಪಾಲಿಸಿ ಬಗ್ಗೆ ಜಾಗೃತಿಯನ್ನ ಮೂಡಿಸುತ್ತಿದ್ದಾರೆ, ವಿಮಾ ನಿಯಂತ್ರಕ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI) ರಾಜ್ಯದಲ್ಲಿ ವಿಮೆ ಪಾಲಿಸಿಗಳ ಬಗ್ಗೆ ಪ್ರಚಾರ ಮಾಡಲು ರಿಲಯನ್ಸ್ ಜನರಲ್ ಇನ್ಯೂರೆನ್ಸ್ ನನ್ನು ಪ್ರಮುಖ ವಿಮಾದಾರರಾಗಿ ಆಯ್ಕೆ ಮಾಡಿದೆ ಎಂದು ರಿಲಯನ್ಸ್ ಜನರಲ್ ಇನ್ಯೂರೆನ್ಸ್ ಸಂಸ್ಥೆಯ ಅಧಿಕಾರಿಗಳಾದ ರಮೇಶ್ ಬಾಬು ಹೇಳಿದರು.
ದೊಡ್ಡಬಳ್ಳಾಪುರದ ಗ್ರಾಮೀಣ ಅಭ್ಯುದಯ ಸಂಸ್ಥೆಯಲ್ಲಿ ರಾಜ್ಯ ವಿಮಾ ಜಾಗೃತಿ ಯೋಜನೆಯಡಿ ಆರೋಗ್ಯ ವಿಮೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನ ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ವಿಮಾ ನಿಯಂತ್ರಕ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI) ಉದ್ದೇಶ 2047ರ ಹೊತ್ತಿಗೆ ಎಲ್ಲರಿಗೂ ವಿಮೆ ಗುರಿ ಹೊಂದಿದೆ. ಈ ಹಿನ್ನೆಲೆ ರಿಲಯನ್ಸ್ ಜನರಲ್ ಇನ್ಯೂರೆನ್ಸ್ ಕರ್ನಾಟಕದಲ್ಲಿ ಜಿಲ್ಲಾ ಮಟ್ಟದ ವಿಮಾ ಜಾಗೃತಿ ಕಾರ್ಯಕ್ರಮಗಳನ್ನ ಅಯೋಜನೆ ಮಾಡುತ್ತಿದೆ, ಪ್ರಮುಖವಾಗಿ ಗ್ರಾಮೀಣ ಪ್ರದೇಶದಲ್ಲಿ ವಿಮೆ ಪಾಲಿಸಿ ಬಗ್ಗೆ ಜಾಗೃತಿ ಮೂಡಿಸುವುದು ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪಲ್ಲವಿ ಜೈನ್, ವಿನೋದ್, ನವೀನ್.ಕೆ.ವಿ ಸೇರಿದಂತೆ ಇತರರು ಭಾಗವಹಿಸಿದ್ದರು.
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…