ಭಾರತದಲ್ಲಿ ಪ್ರತಿ ವರ್ಷ 13.5 ಲಕ್ಷ ಜನ ತಂಬಾಕು ಸೇವನೆಯಿಂದ ಸಾವು: ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿ ತರಲು ಸರ್ಕಾರ ಚಿಂತನೆ- ಸಿಎಂ‌ ಸಿದ್ದರಾಮಯ್ಯ

ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಯುವಜನತೆಯಲ್ಲಿ ತಂಬಾಕು ಸೇವನೆಯಿಂದ ಆಗಬಹುದಾದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ತಂಬಾಕು ಮುಕ್ತ ಯುವ ಅಭಿಯಾನ 2.0 ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ತಂಬಾಕು ಬಳಕೆಯನ್ನು ಮಾಡುವುದಿಲ್ಲ, ಮಾಡಲೂ ಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು ಇಂದು ಪ್ರತಿಜ್ಞೆ ಕೈಗೊಂಡಿದ್ದಾರೆ. ಈ ಪ್ರತಿಜ್ಞೆಯನ್ನು ಅಕ್ಷರಶ: ಪಾಲಿಸಬೇಕು ಎಂದರು.

ವಿಶ್ವ ಆರೋಗ್ಯ ಸಂಸ್ಥೆ (WHO) ವರದಿಯಂತೆ ಭಾರತದಲ್ಲಿ ಪ್ರತಿ ವರ್ಷ 13.5 ಲಕ್ಷ ಜನರು ತಂಬಾಕು ಸೇವನೆಯಿಂದ ಸಾವಿಗೆ ಈಡಾಗುತ್ತಿದ್ದಾರೆ ಎಂಬುದು ಆತಂಕಕಾರಿ ವಿಷಯ. ಯುವಜನತೆ ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಬದಲು ಈ ದುಶ್ಚಟಗಳಿಗೆ ಬಲಿಯಾಗುತ್ತಿರುವುದರಿಂದ ಈ ಪ್ರಮಾಣದ ಸಾವು ಸಂಭವಿಸುತ್ತಿದೆ. ತಂಬಾಕು ಸೇವಿಸುತ್ತಿರುವವರಲ್ಲಿ ಶೇ.50 ರಷ್ಟು ಜನ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಯುವಜನತೆ ತಂಬಾಕು ಸೇವನೆ ಹಾಗೂ ಮಾದಕವಸ್ತುಗಳ ವ್ಯಸನಕ್ಕೆ ಒಳಗಾಗಬಾರದು ಎಂದು ತಿಳಿಸಿದರು.

ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಧಾರವಾಡಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಿದ್ದು, ಇದನ್ನು ನಿಗ್ರಹಿಸಲು ಸರ್ಕಾರ ಅನೇಕ ಕಾನೂನುಗಳನ್ನು ರಚಿಸಿದೆ. ಯುವಕ – ಯುವತಿಯರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಲ್ಲಿ, ಕೂಡಲೇ ಇದನ್ನು ನಿಲ್ಲಿಸಬೇಕು ಎಂದರು.

ರಾಜ್ಯದಲ್ಲಿ ಉತ್ತಮ ಮಳೆ – ಬೆಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದಂತೆ, ದುಶ್ಚಟಗಳಿಗೆ ಬಲಿಯಾಗದೇ ಆರೋಗ್ಯಕರ ಜೀವನ ನಡೆಸಿ ಯುವ ಸಮುದಾಯದವರಲ್ಲೂ ಸಂತಸ ಮೂಡುವಂತಾಗಲಿ ಎಂದು ಹಾರೈಸುತ್ತೇನೆ ಎಂದರು.

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

2 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

3 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

3 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

6 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

13 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

13 hours ago