ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಯುವಜನತೆಯಲ್ಲಿ ತಂಬಾಕು ಸೇವನೆಯಿಂದ ಆಗಬಹುದಾದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ತಂಬಾಕು ಮುಕ್ತ ಯುವ ಅಭಿಯಾನ 2.0 ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ತಂಬಾಕು ಬಳಕೆಯನ್ನು ಮಾಡುವುದಿಲ್ಲ, ಮಾಡಲೂ ಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು ಇಂದು ಪ್ರತಿಜ್ಞೆ ಕೈಗೊಂಡಿದ್ದಾರೆ. ಈ ಪ್ರತಿಜ್ಞೆಯನ್ನು ಅಕ್ಷರಶ: ಪಾಲಿಸಬೇಕು ಎಂದರು.
ವಿಶ್ವ ಆರೋಗ್ಯ ಸಂಸ್ಥೆ (WHO) ವರದಿಯಂತೆ ಭಾರತದಲ್ಲಿ ಪ್ರತಿ ವರ್ಷ 13.5 ಲಕ್ಷ ಜನರು ತಂಬಾಕು ಸೇವನೆಯಿಂದ ಸಾವಿಗೆ ಈಡಾಗುತ್ತಿದ್ದಾರೆ ಎಂಬುದು ಆತಂಕಕಾರಿ ವಿಷಯ. ಯುವಜನತೆ ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಬದಲು ಈ ದುಶ್ಚಟಗಳಿಗೆ ಬಲಿಯಾಗುತ್ತಿರುವುದರಿಂದ ಈ ಪ್ರಮಾಣದ ಸಾವು ಸಂಭವಿಸುತ್ತಿದೆ. ತಂಬಾಕು ಸೇವಿಸುತ್ತಿರುವವರಲ್ಲಿ ಶೇ.50 ರಷ್ಟು ಜನ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಯುವಜನತೆ ತಂಬಾಕು ಸೇವನೆ ಹಾಗೂ ಮಾದಕವಸ್ತುಗಳ ವ್ಯಸನಕ್ಕೆ ಒಳಗಾಗಬಾರದು ಎಂದು ತಿಳಿಸಿದರು.
ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಧಾರವಾಡಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಿದ್ದು, ಇದನ್ನು ನಿಗ್ರಹಿಸಲು ಸರ್ಕಾರ ಅನೇಕ ಕಾನೂನುಗಳನ್ನು ರಚಿಸಿದೆ. ಯುವಕ – ಯುವತಿಯರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಲ್ಲಿ, ಕೂಡಲೇ ಇದನ್ನು ನಿಲ್ಲಿಸಬೇಕು ಎಂದರು.
ರಾಜ್ಯದಲ್ಲಿ ಉತ್ತಮ ಮಳೆ – ಬೆಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದಂತೆ, ದುಶ್ಚಟಗಳಿಗೆ ಬಲಿಯಾಗದೇ ಆರೋಗ್ಯಕರ ಜೀವನ ನಡೆಸಿ ಯುವ ಸಮುದಾಯದವರಲ್ಲೂ ಸಂತಸ ಮೂಡುವಂತಾಗಲಿ ಎಂದು ಹಾರೈಸುತ್ತೇನೆ ಎಂದರು.
ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…
ನ್ಯೂಯಾರ್ಕ್–ನ್ಯೂಜೆರ್ಸಿ: ತೀವ್ರ ಕುತೂಹಲ ಕೆರಳಿಸಿದ್ದ ಫಿಫಾ ವಿಶ್ವಕಪ್-2026ರ ಫೈನಲ್ನಲ್ಲಿ ಯುರೋಪಿಯನ್ ಚಾಂಪಿಯನ್ ಸ್ಪೇನ್, ಹಾಲಿ ವಿಶ್ವ ಚಾಂಪಿಯನ್ ಅರ್ಜೆಂಟೀನಾವನ್ನು 1-0…
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಡಿಯೋ…
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಬರ ಪರಿಸ್ಥಿತಿ, ಮಳೆಗಾಲ, ಕುಡಿಯುವ ನೀರು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ನವೋದಯ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಆಸರೆ–ಸನ್ಮಿತ್ರ ಯೋಜನೆಯಡಿ…
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ...... ಸರಳವಾಗಿ ಬಹು ಆಯಾಮಗಳ ಒಂದು ಚಿಂತನ ಮಂಥನ........ ಕರ್ನಾಟಕದ ಖಾಸಗಿ ಉದ್ದಿಮೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಮೀಸಲಾತಿಯ…