ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಯುವಜನತೆಯಲ್ಲಿ ತಂಬಾಕು ಸೇವನೆಯಿಂದ ಆಗಬಹುದಾದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ತಂಬಾಕು ಮುಕ್ತ ಯುವ ಅಭಿಯಾನ 2.0 ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ತಂಬಾಕು ಬಳಕೆಯನ್ನು ಮಾಡುವುದಿಲ್ಲ, ಮಾಡಲೂ ಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು ಇಂದು ಪ್ರತಿಜ್ಞೆ ಕೈಗೊಂಡಿದ್ದಾರೆ. ಈ ಪ್ರತಿಜ್ಞೆಯನ್ನು ಅಕ್ಷರಶ: ಪಾಲಿಸಬೇಕು ಎಂದರು.
ವಿಶ್ವ ಆರೋಗ್ಯ ಸಂಸ್ಥೆ (WHO) ವರದಿಯಂತೆ ಭಾರತದಲ್ಲಿ ಪ್ರತಿ ವರ್ಷ 13.5 ಲಕ್ಷ ಜನರು ತಂಬಾಕು ಸೇವನೆಯಿಂದ ಸಾವಿಗೆ ಈಡಾಗುತ್ತಿದ್ದಾರೆ ಎಂಬುದು ಆತಂಕಕಾರಿ ವಿಷಯ. ಯುವಜನತೆ ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಬದಲು ಈ ದುಶ್ಚಟಗಳಿಗೆ ಬಲಿಯಾಗುತ್ತಿರುವುದರಿಂದ ಈ ಪ್ರಮಾಣದ ಸಾವು ಸಂಭವಿಸುತ್ತಿದೆ. ತಂಬಾಕು ಸೇವಿಸುತ್ತಿರುವವರಲ್ಲಿ ಶೇ.50 ರಷ್ಟು ಜನ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಯುವಜನತೆ ತಂಬಾಕು ಸೇವನೆ ಹಾಗೂ ಮಾದಕವಸ್ತುಗಳ ವ್ಯಸನಕ್ಕೆ ಒಳಗಾಗಬಾರದು ಎಂದು ತಿಳಿಸಿದರು.
ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಧಾರವಾಡಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಿದ್ದು, ಇದನ್ನು ನಿಗ್ರಹಿಸಲು ಸರ್ಕಾರ ಅನೇಕ ಕಾನೂನುಗಳನ್ನು ರಚಿಸಿದೆ. ಯುವಕ – ಯುವತಿಯರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಲ್ಲಿ, ಕೂಡಲೇ ಇದನ್ನು ನಿಲ್ಲಿಸಬೇಕು ಎಂದರು.
ರಾಜ್ಯದಲ್ಲಿ ಉತ್ತಮ ಮಳೆ – ಬೆಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದಂತೆ, ದುಶ್ಚಟಗಳಿಗೆ ಬಲಿಯಾಗದೇ ಆರೋಗ್ಯಕರ ಜೀವನ ನಡೆಸಿ ಯುವ ಸಮುದಾಯದವರಲ್ಲೂ ಸಂತಸ ಮೂಡುವಂತಾಗಲಿ ಎಂದು ಹಾರೈಸುತ್ತೇನೆ ಎಂದರು.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…