ಭಾರತದಲ್ಲಿ ಮರುಬಳಕೆ ಮಾಡಿದ ಪಾಲಿಮರ್‌ಗಳನ್ನು ಬಳಸಿದ ಪ್ಯಾಕೇಜಿಂಗ್ ಪರಿಚಯಿಸಿದ ಟೆಟ್ರಾ ಪ್ಯಾಕ್

ಬೆಂಗಳೂರು: ಪ್ಲಾಸ್ಟಿಕ್‌ನನ್ನು ಮರುಬಳಕೆ ಮಾಡುವತ್ತ ಗಮನಾರ್ಹ ಹೆಜ್ಜೆ ಇಟ್ಟಿರುವ ಟೆಟ್ರಾಪ್ಯಾಕ್‌, ತನ್ನೆಲ್ಲಾ ಪ್ಯಾಕೇಜಿಂಗ್‌ನನ್ನು ಮರುಬಳಕೆ ಮಾಡಿದ ಪಾಲಿಮರ್‌ ಒಳಗೊಂಡ ಟೆಟ್ರಾಪ್ಯಾಕ್‌ನನ್ನು ಪರಿಚಯಿಸಿದೆ.

ಆಹಾರ ಮತ್ತು ಪಾನೀಯ ಪ್ಯಾಕೇಜಿಂಗ್‌ ಉದ್ಯಮದಲ್ಲಿ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್‌ ಬಳಕೆ ಮಾಡಿದ ಮೊದಲ ಸಂಸ್ಥೆಯಾಗಿದೆ. ಇದರ ಕಾರ್ಟನ್ ಪ್ಯಾಕೇಜ್‌ಗಳಲ್ಲಿ ಮರುಬಳಕೆ ಮಾಡಿದ ಪಾಲಿಮರ್‌ಗಳಿದ್ದು, ಇದನ್ನು ಸುಸ್ಥಿರತೆ ಪ್ರಮಾಣೀಕರಣ ಸಿಸ್ಟಮ್‌ ಆಗಿರುವ ಐಎಸ್‌ಸಿಸಿ (ಅಂತಾರಾಷ್ಟ್ರೀಯ ಪರಿಸರ ಸ್ನೇಹಿ ಮತ್ತು ಕಾರ್ಬನ್ ಪ್ರಮಾಣೀಕರಣ) ಪ್ರಮಾಣೀಕರಿಸಿದೆ. ಪ್ಯಾಕೇಜಿಂಗ್‌ನಲ್ಲಿ ಶೇ. 5ರಷ್ಟು ಪ್ರಮಾಣಿತ ಮರುಬಳಕೆ ಮಾಡಿದ ಪಾಲಿಮರ್‌ ಇರಲಿದೆ. ಇದನ್ನು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮ 2022 ರ ಅಡಿಯಲ್ಲಿ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ನಿಗದಿಪಡಿಸಿದ್ದು, ಇದು ಇದೇ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ.

ಪರಿಸರ ರಕ್ಷಣೆಯಲ್ಲಿ ಟೆಟ್ರಾ ಪ್ಯಾಕ್ ಬದ್ಧತೆ ಹೊಂದಿದ್ದು, ಪಳೆಯುಳಿಕೆ ಆಧರಿತ ಸಂಪನ್ಮೂಲಗಳ ಮೇಲೆ ಅವಲಂಬನೆಯನ್ನು ಕಡಿಮೆ ಮಾಡುವುದು ಮತ್ತು ಸಾಮಗ್ರಿಗಳನ್ನು ಮರುಬಳಕೆ ಮಾಡಿಕೊಳ್ಳುವುದರ ಮೇಲೆ ಇದು ಹೆಚ್ಚು ಗಮನ ಕೇಂದ್ರೀಕರಿಸಿದೆ. ಇದರ ಜೊತೆಗೆ, ಕಚ್ಚಾ ಸಾಮಗ್ರಿಗಳನ್ನು ಖರೀದಿ ಮಾಡುವಲ್ಲಿ ಜವಾಬ್ದಾರಿಯುತವಾಗಿ ಟೆಟ್ರಾ ಪ್ಯಾಕ್ ವರ್ತಿಸುತ್ತದೆ. ಮರುಬಳಕೆಯನ್ನು ಹೆಚ್ಚಿಸಲು ಮತ್ತು ಕಸವನ್ನು ಕಡಿಮೆ ಮಾಡಲು ಪ್ಯಾಕೇಜ್‌ಗಳನ್ನು ವಿನ್ಯಾಸ ಮಾಡುವುದು ಮತ್ತು ಪರಿಣಾಮಕಾರಿಯಾಗಿ ಕಲೆಕ್ಷನ್ ಮತ್ತು ರಿಸೈಕ್ಲಿಂಗ್‌ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ಉತ್ತಮ ಪಾಲುದಾರಿಕೆಯನ್ನು ನಿರ್ಮಿಸುವಲ್ಲಿ ಟೆಟ್ರಾ ಪ್ಯಾಕ್ ಬದ್ಧವಾಗಿದೆ.

ಟೆಟ್ರಾ ಪ್ಯಾಕ್‌ದಕ್ಷಿಣ ಏಷ್ಯಾದ ವ್ಯವಸ್ಥಾಪಕ ನಿರ್ದೇಶಕ ಕ್ಯಾಸಿಯೋ ಸೈಮೋಸ್ ಮಾತನಾಡಿ, “ಭಾರತದಲ್ಲಿ ಶೇ.5ರಷ್ಟು ಪ್ರಮಾಣಿತ ಮರುಬಳಕೆ ಮಾಡಿದ ಪಾಲಿಮರ್‌ಅನ್ನು ಹೊಂದಿರುವ ಪ್ಯಾಕೇಜಿಂಗ್ ಸಾಮಗ್ರಿಯನ್ನು ಪರಿಚಯಿಸುವುದರಲ್ಲಿ ನಾವು ಪ್ರಥಮ ಹೆಜ್ಜೆ ಇಟ್ಟಿದ್ದೇವೆ. ಈ ಮರುಬಳಕೆ ಮಾಡಿದ ಕಂಟೆಂಟ್ ಅನ್ನು ಭಾರತದಿಂದಲೇ ಪಡೆಯಲಾಗಿದೆ. ಪುಣೆಯಲ್ಲಿ ಚಕನ್‌ನಲ್ಲಿರುವ ಐಎಸ್‌ಸಿಸಿ ಪ್ರಮಾಣಿತ ಫ್ಯಾಕ್ಟರಿಯಲ್ಲಿ ಪ್ಯಾಕೇಜಿಂಗ್ ಸಾಮಗ್ರಿಯನ್ನು ತಯಾರಿಸಲಾಗಿದೆ.

ಸರ್ಕ್ಯುಲಾರಿಟಿಯನ್ನು ಪ್ರೋತ್ಸಾಹಿಸುತ್ತಿರುವುದಕ್ಕೆ ಪರಿಸರ, ಅರಣ್ಯ ಮತ್ತು ಹವಾಮಾನ ಸಚಿವಾಲಯದ ಬದ್ಧತೆಯನ್ನು ನಾವು ಮೆಚ್ಚುತ್ತೇವೆ. 2025 ರಲ್ಲೇ ಈ ನಿಯಮಾವಳಿಯನ್ನು ಪರಿಚಯಿಸುವ ಮೂಲಕ ವಿಶ್ವದ ಪ್ರಥಮ ದೇಶ ಭಾರತ ಆಗುತ್ತಿರುವುದಕ್ಕೆ ನಮಗೆ ಹೆಮ್ಮೆಯಿದೆ. ಆಹಾರ ಮತ್ತು ಪಾನೀಯ ಉದ್ಯಮದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ ಇನ್ನಷ್ಟು ಸರ್ಕ್ಯುಲರ್ ಪರಿಹಾರಕ್ಕೆ ಪರಿವರ್ತನೆಯಾಗುವುದಕ್ಕೆ ನಮ್ಮೆಲ್ಲರಿಗೆ ಒಂದು ಅವಕಾಶವಾಗಿದೆ ಎಂದರು. ಐಎಸ್‌ಸಿಸಿ (ಇಂಟರ್ನ್ಯಾಷನಲ್ ಸಸ್ಟೇನಬಿಲಿಟಿ & ಕಾರ್ಬನ್ ಸರ್ಟಿಫಿಕೇಶನ್) ಸರ್ಟಿಫೈಡ್ ಮರುಬಳಕೆ ಮಾಡಿದ ಪಾಲಿಮರ್‌ಗಳನ್ನು ಖರೀದಿ ಮಾಡಿ, ಐಎಸ್‌ಸಿಸಿ ಮಾಸ್ ಬ್ಯಾಲೆನ್ಸ್ ಅಟ್ರಿಬ್ಯುಶನ್ ಮೆಥಡ್‌ಗೆ ಅನುಗುಣವಾಗಿ ನಿಯೋಜಿಸಲಾಗುತ್ತದೆ. ಕೆಮಿಕಲ್ ರಿಸೈಕ್ಲಿಂಗ್ ತಂತ್ರಜ್ಞಾನವನ್ನು ಬಳಸಿಕೊಂಡು ಪ್ಲಾಸ್ಟಿಕ್ ಅನ್ನು ಮರುಬಳಕೆ ಮಾಡಿದ ಮತ್ತು ಮರುಬಳಕೆ ಮಾಡಲಾಗದ ಸಾಮಗ್ರಿಗಳ ಮಿಶ್ರಣದಿಂದ ತಯಾರಿಸಲಾಗುತ್ತದೆ. ಅಲ್ಲದೆ, ಟೆಟ್ರಾ ಪ್ಯಾಕ್ ಪೂರೈಕೆ ಸರಣಿಯಾದ್ಯಂತ ಮರುಬಳಕೆ ಮಾಡಿದ ಸಾಮಗ್ರಿಗಳನ್ನು ಟ್ರ್ಯಾಕ್ ಮಾಡಲಾಗುತ್ತದೆ. ಈ ರಾಸಾಯನಿಕವಾಗಿ ಮರುಬಳಕೆ ಮಾಡಿದ ಪ್ಲಾಸ್ಟಿಕ್‌ಗಳು ವರ್ಜಿನ್ ಪಾಲಿಮರ್‌ಗಳಂತೆಯೇ ಜಾಗತಿಕ ಆಹಾರ ಸಂಪರ್ಕ ನಿಯಮಗಳನ್ನು ಅನುಸರಿಸುತ್ತವೆ. ಗುಣಮಟ್ಟದ ದೃಷ್ಟಿಯಿಂದ, ರಾಸಾಯನಿಕವನ್ನು ಬಳಸಿ ಮರುಬಳಕೆ ಮಾಡಿದ ಪ್ಲಾಸ್ಟಿಕ್‌ಗಳು ಪಳೆಯುಳಿಕೆ ಆಧರಿತ ಪ್ಲಾಸ್ಟಿಕ್‌ಗಳಿಗೆ ಸಮಾನವಾಗಿವೆ.

ಮರುಬಳಕೆ ಮಾಡಿದ ಸಾಮಗ್ರಿಯನ್ನು ಬಳಸಿದರೆ, ಮರುಬಳಕೆ ದರವನ್ನು ಹೆಚ್ಚಳ ಮಾಡಬಹುದು ಮತ್ತು ಮರುಬಳಕೆಯನ್ನು ಹೆಚ್ಚು ಆರ್ಥಿಕವಾಗಿ ಅನುಕೂಲಕರವನ್ನಾಗಿಸಬಹುದು. ಮರುಬಳಕೆ ಮಾಡಿದ ಕಂಟೆಂಟ್ ಭಾರತ ಸೇರಿದಂತೆ ವಿಶ್ವದ ಎಲ್ಲೆಡೆ ಕಡ್ಡಾಯವಾಗಿದ್ದು, ಉತ್ಪಾದಕರು ಮರುಬಳಕೆ ಮಾಡಿದ ಸಾಮಗ್ರಿಯನ್ನು ಖರೀದಿ ಮಾಡುವುದಕ್ಕೆ ಪ್ರೋತ್ಸಾಹಿಸುತ್ತದೆ. ಇದರಿಂದ, ಬೇಡಿಕೆ ಹೆಚ್ಚಳವಾಗುತ್ತದೆ ಮತ್ತು ಈ ಮೂಲಕ ವಿಸ್ತರಿಸಿದ ಆಫರ್ ಅನ್ನು ಪ್ರೋತ್ಸಾಹಿಸುತ್ತದೆ ಎಂದು ಹೇಳದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

11 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

12 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

14 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

15 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

20 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

23 hours ago