ಎರಡು ದಿನಗಳ ಭಾರತ ಭೇಟಿಗಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ವಿಶೇಷ ವಿಮಾನದಲ್ಲಿ ಗುರುವಾರ ಸಂಜೆ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಖುದ್ದು ಪಾಲಂ ವಿಮಾನ ನಿಲ್ದಾಣಕ್ಕೆ ತೆರಳಿ ಭಾರತ–ರಷ್ಯಾ 23ನೇ ವಾರ್ಷಿಕ ಶೃಂಗಸಭೆಗಾಗಿ ದೆಹಲಿಗೆ ಆಗಮಿಸಿದ ಪುಟಿನ್ ಅವರನ್ನು ಸ್ವಾಗತಿಸಿದರು.
ನಂತರ ಒಂದೇ ಕಾರಿನಲ್ಲಿ ಇಬ್ಬರು ನಾಯಕರು ಪ್ರಯಾಣಿಸಿದರು..
ಕಳೆದ ವರ್ಷ ಜುಲೈನಲ್ಲಿ ಪ್ರಧಾನಿ ಮೋದಿ ಅವರು ಮಾಸ್ಕೋಗೆ ಭೇಟಿ ನೀಡಿದ್ದಾಗ ರಷ್ಯಾ ಅಧ್ಯಕ್ಷ ಪುಟಿನ್ ಅವರು ನೀಡಿದ ಆತಿಥ್ಯಕ್ಕೆ ಪ್ರತಿಯಾಗಿ ಪ್ರಧಾನಿ ಮೋದಿ ಅವರು ಇಂದು ರಾತ್ರಿ ಅವರಿಗೆ ಖಾಸಗಿ ಭೋಜನ ಕೂಟ ಆಯೋಜಿಸಿದ್ದಾರೆ.
ಭಾರತ–ರಷ್ಯಾ 23ನೇ ವಾರ್ಷಿಕ ಶೃಂಗಸಭೆಯು ಶುಕ್ರವಾರ ನಡೆಯಲಿದ್ದು, ಅದಕ್ಕೂ ಮೊದಲು ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತ, ನಂತರ ಭಾರತದ ಉನ್ನತ ಮಟ್ಟದ ದ್ವಿಪಕ್ಷೀಯ ಕಾರ್ಯಕ್ರಮಗಳಿಗೆ ಸಾಂಪ್ರದಾಯಿಕ ಸ್ಥಳವಾದ ಹೈದರಾಬಾದ್ ಹೌಸ್ನಲ್ಲಿ ಮಾತುಕತೆ ನಡೆಯಲಿದೆ
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…
ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…
ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…
ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…
ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ…