ಎರಡು ದಿನಗಳ ಭಾರತ ಭೇಟಿಗಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ವಿಶೇಷ ವಿಮಾನದಲ್ಲಿ ಗುರುವಾರ ಸಂಜೆ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಖುದ್ದು ಪಾಲಂ ವಿಮಾನ ನಿಲ್ದಾಣಕ್ಕೆ ತೆರಳಿ ಭಾರತ–ರಷ್ಯಾ 23ನೇ ವಾರ್ಷಿಕ ಶೃಂಗಸಭೆಗಾಗಿ ದೆಹಲಿಗೆ ಆಗಮಿಸಿದ ಪುಟಿನ್ ಅವರನ್ನು ಸ್ವಾಗತಿಸಿದರು.
ನಂತರ ಒಂದೇ ಕಾರಿನಲ್ಲಿ ಇಬ್ಬರು ನಾಯಕರು ಪ್ರಯಾಣಿಸಿದರು..
ಕಳೆದ ವರ್ಷ ಜುಲೈನಲ್ಲಿ ಪ್ರಧಾನಿ ಮೋದಿ ಅವರು ಮಾಸ್ಕೋಗೆ ಭೇಟಿ ನೀಡಿದ್ದಾಗ ರಷ್ಯಾ ಅಧ್ಯಕ್ಷ ಪುಟಿನ್ ಅವರು ನೀಡಿದ ಆತಿಥ್ಯಕ್ಕೆ ಪ್ರತಿಯಾಗಿ ಪ್ರಧಾನಿ ಮೋದಿ ಅವರು ಇಂದು ರಾತ್ರಿ ಅವರಿಗೆ ಖಾಸಗಿ ಭೋಜನ ಕೂಟ ಆಯೋಜಿಸಿದ್ದಾರೆ.
ಭಾರತ–ರಷ್ಯಾ 23ನೇ ವಾರ್ಷಿಕ ಶೃಂಗಸಭೆಯು ಶುಕ್ರವಾರ ನಡೆಯಲಿದ್ದು, ಅದಕ್ಕೂ ಮೊದಲು ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತ, ನಂತರ ಭಾರತದ ಉನ್ನತ ಮಟ್ಟದ ದ್ವಿಪಕ್ಷೀಯ ಕಾರ್ಯಕ್ರಮಗಳಿಗೆ ಸಾಂಪ್ರದಾಯಿಕ ಸ್ಥಳವಾದ ಹೈದರಾಬಾದ್ ಹೌಸ್ನಲ್ಲಿ ಮಾತುಕತೆ ನಡೆಯಲಿದೆ
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…