ಭಾರತದಲ್ಲಿ ಸಂವಿಧಾನವೇ ಸರ್ವೋಚ್ಛ- ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ

ಭಾರತದಲ್ಲಿ ಸಂವಿಧಾನವೇ ಸರ್ವೋಚ್ಚವಾದುದು. ಸಂವಿಧಾನ ಜಾರಿಗೆ ಬಂದ ಕಾರಣದಿಂದಲೇ ನಮ್ಮ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಾಯಿತು ಎಂದು ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಮ್ಮ ದೇಶದ ಪ್ರತಿಯೊಬ್ಬರೂ  ಸಂವಿಧಾನವನ್ನು ಗೌರವಿಸಬೇಕು. ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸಂವಿಧಾನ ಜಾರಿಗೆ ಬಂದ ದಿನವಾದ  ಗಣರಾಜ್ಯೋತ್ಸವ ದಿನಾಚರಣೆ ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಮಹತ್ವದ ದಿನವಾಗಿದೆ ಎಂದರು.

ನಮ್ಮ ಸಂವಿಧಾನವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ಮಾಡಿದೆ. ಸಂವಿಧಾನ ಜಾರಿಗೆ ಬಂದ ಕಾರಣದಿಂದಲೇ ನಮ್ಮ ದೇಶದ ಪ್ರತಿಯೊಬ್ಬ ಪ್ರಜೆಗೂ   ಮೂಲಭೂತ ಹಕ್ಕುಗಳು, ಶಿಕ್ಷಣ ಹಕ್ಕುಗಳು, ಧಾರ್ಮಿಕ ಹಕ್ಕುಗಳು ದೊರಕಿವೆ. ಭಾರತದ ಸಂವಿಧಾನ ರಚನೆಯಲ್ಲಿ‌    ಡಾ.ಬಿ.ಆರ್.ಅಂಬೇಡ್ಕರ್ ಮಹತ್ವದ ಪಾತ್ರ ವಹಿಸಿದ್ದಾರೆ.  ಡಾ.ಬಿ‌.ಆರ್.ಅಂಬೇಡ್ಕರ್ ಅವರು ವಿಶ್ವದ ಹಲವು ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ, ಭಾರತಕ್ಕೆ ಅಗತ್ಯವಾದ ಅಂಶಗಳನ್ನು ಭಾರತದ ಸಂವಿಧಾನದಲ್ಲಿ  ಸೇರ್ಪಡೆಗೊಳಿಸಿದ್ದಾರೆ ಎಂದರಯ.

ಕಾರ್ಯಕ್ರಮದಲ್ಲಿ  ಭಾರತ ಸ್ಕೌಟ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕಾರ್ಯನಿತರ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಗಂಗರಾಜ ಶಿರವಾರ,  ಕನ್ನಡ ಜಾಗೃತ ವೇದಿಕೆ ಅಧ್ಯಕ್ಷ. ನಾಗರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ  ಸಾ.ಲ.ಕಮಲನಾಥ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಘಟಕ  ಅಧ್ಯಕ್ಷ ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ನಾಗರತ್ನಮ್ಮ, ಮುನಿರಾಜು, ಷಪೀರ್, ಕೋದಂಡರಾಮ್, ದರ್ಗಾಜೋಗಿಹಳ್ಳಿ ಮಲ್ಲೇಶ್, ದರ್ಶನ್ ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

5 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

15 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

20 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago