ಭಾರತದಲ್ಲೂ ಪಿಕಲ್‌ಬಾಲ್‌ ಆಟವನ್ನು ಜನಪ್ರಿಯಗೊಳಿಸಲು ಆಲ್‌ ಇಂಡಿಯಾ ಪಿಕಲ್‌ಬಾಲ್‌ ಅಸೋಸಿಯೇಷನ್‌ನೊಂದಿಗೆ ಸಹಯೋಗ

ಬೆಂಗಳೂರು: ವಿಶ್ವದೆಲ್ಲೆಡೆ ಹೆಚ್ಚು ಚಾಲ್ತಿಯಲ್ಲಿರುವ “ಪಿಕಲ್‌ಬಾಲ್‌” ಆಟವನ್ನು ಭಾರತದಲ್ಲೂ ಪ್ರಸಿದ್ಧಿಗೆ ತರುವ ಉದ್ದೇಶದಿಂದ ಆಲ್‌ ಇಂಡಿಯಾ ಪಿಕಲ್‌ಬಾಲ್‌ ಅಸೋಸಿಯೇಷನ್‌ ಐಟಿಸಿ ಅವರ “ಬಿಂಗೋ” ತಿಂಡಿಯೊಂದಿಗೆ ಸಹಯೋಗತ್ವವನ್ನು ಘೋಷಿಸಿದೆ.

ಬಿಂಗೊ ಸಹಭಾಗಿತ್ವದಲ್ಲಿ “ವಿಶ್ವ ಪಿಕಲ್‌ಬಾಲ್‌ ಚಾಂಪಿಯನ್‌ಶಿಪ್‌”ಗೆ ನಟಿ ಮಂದಿರಾ ಬೇಡಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಐಟಿಸಿ ಸ್ನ್ಯಾಕ್ಸ್, ನೂಡಲ್ಸ್ ಮತ್ತು ಪಾಸ್ಟಾ ವಿಭಾಗದ ವಿಪಿ ಸುರೇಶ್‌ ಚಂದ್‌, ವಿಶ್ವ ಪಿಕಲ್‌ಬಾಲ್ ಚಾಂಪಿಯನ್‌ಶಿಪ್ (WPC), ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಗಳಲ್ಲಿ ಒಂದಾಗಿದ್ದು, ಈ ಕ್ರೀಡೆಯನ್ನು ಭಾರತದಲ್ಲೂ ಉತ್ತೇಜಿಸಲು ನಾವು ಮುಂದಾಗಿದ್ದೇವೆ.
ಪಿಕಲ್‌ಬಾಲ್‌ ಆಟವು ಈಗಾಗಲೇ 84 ದೇಶಗಳಾದ್ಯಂತ 5 ಮಿಲಿಯನ್ ಆಟಗಾರರನ್ನು ಸೆಳೆದಿದ್ದು, ಶೇ.40ರಷ್ಟು ಮಹಿಳಾ ಆಟಗಾರರೇ ಭಾಗವಹಿಸುತ್ತಿದ್ದಾರೆ.

ಭಾರತದಲ್ಲಿ, ಕಳೆದ ಮೂರು ವರ್ಷಗಳಲ್ಲಿ ಈ ಕ್ರೀಡೆಯ ಸಕ್ರಿಯ ಆಟಗಾರರಲ್ಲಿ ಶೇ.275 ರಷ್ಟು ಬೆಳವಣಿಗೆ ಕಂಡಿದ್ದು, 2028 ರ ವೇಳೆಗೆ ಒಂದು ಮಿಲಿಯನ್ ಸಕ್ರಿಯ ಆಟಗಾರರನ್ನು ಮೀರಿಸುವ ನಿರೀಕ್ಷೆಯಿದೆ. ಪ್ರಸ್ತುತ ಬಿಂಗೋ ಸಹಭಾಗಿತ್ವದಲ್ಲಿ ಈ ಆಟವನ್ನು ಇನ್ನಷ್ಟು ಪ್ರಚಲಿತಗೊಳಿಸಲು 23 ರಾಜ್ಯಗಳ ಎಲ್ಲಾ ಕಾಲೇಜುಗಳ ಪಂದ್ಯಾವಳಿಗಳಲ್ಲಿ ಪಿಕಲ್‌ಬಾಲ್‌ ಆಟವನ್ನು ಪರಿಚಯಿಸಲಾಗುತ್ತದೆ. ಈ ಮೂಲಕ ವಿದ್ಯಾರ್ಥಿಗಳು ಶಿಕ್ಷಣದ ಸಂದರ್ಭದಿಂದಲೇ ಈ ಆಟದಲ್ಲಿ ನಿರತರಾಗಲು ಹಾಗೂ ಅಭ್ಯಾಸಿಸಲು ಸಹಕಾರಿಯಾಗಲಿದೆ ಎಂದರು.

ಅಖಿಲ ಭಾರತ ಪಿಕಲ್‌ಬಾಲ್ ಅಸೋಸಿಯೇಶನ್‌ನ ಅಧ್ಯಕ್ಷ ಅರವಿಂದ್ ಪ್ರಭು, ನಟ ಅಲಿ ಫಜಲ್ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

2 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

14 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

14 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

14 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

14 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

18 hours ago